ತಮಿಳುನಾಡು ರಾಜ್ಯಪಾಲ ಆರ್ಎನ್.ರವಿ. 
ದೇಶ

ತಮಿಳುನಾಡು ಸರ್ಕಾರದ ನೀಟ್ ವಿರೋಧಿ ಮಸೂದೆಗೆ ಯಾವತ್ತೂ ಸಹಿ ಹಾಕಲ್ಲ: ಗವರ್ನರ್ ಆರ್ ಎನ್ ರವಿ

ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯುತ್ತಿರುವ ತಮಿಳುನಾಡು ಸರ್ಕಾರದ ನೀಟ್ ವಿರೋಧಿ ಮಸೂದೆಗೆ ನಾನು ಯಾವತ್ತೂ ಒಪ್ಪಿಗೆ ನೀಡುವುದಿಲ್ಲ ಎಂದು ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರು ಶನಿವಾರ ಖಡಾಖಂಡಿತವಾಗಿ ಹೇಳಿದ್ದಾರೆ.

ಚೆನ್ನೈ: ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯುತ್ತಿರುವ ತಮಿಳುನಾಡು ಸರ್ಕಾರದ ನೀಟ್ ವಿರೋಧಿ ಮಸೂದೆಗೆ ನಾನು ಯಾವತ್ತೂ ಒಪ್ಪಿಗೆ ನೀಡುವುದಿಲ್ಲ ಎಂದು ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರು ಶನಿವಾರ ಖಡಾಖಂಡಿತವಾಗಿ ಹೇಳಿದ್ದಾರೆ.

ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆ(NEET) ಇಲ್ಲದ ಸಾಧನೆಗಳು ಭವಿಷ್ಯಕ್ಕೆ ಸಾಕಾಗುವುದಿಲ್ಲ. ಅರ್ಹತಾ ಪರೀಕ್ಷೆ ಉಳಿಯಬೇಕು ಎಂದು ರವಿ ಹೇಳಿದ್ದಾರೆ.

"ನೋಡಿ, ನಾನು ಯಾವತ್ತೂ ನೀಟ್ ವಿರೋಧಿ ಮಸೂದೆಗೆ ಸಹಿ ಹಾಕಲ್ಲ; ನನ್ನ ಮಕ್ಕಳು ಬೌದ್ಧಿಕವಾಗಿ ಅಸಮರ್ಥ್ಯರಾಗುವುದು ನನಗೆ ಇಷ್ಟವಿಲ್ಲ. ನಮ್ಮ ಮಕ್ಕಳು ಸ್ಪರ್ಧಿಸಿ ಉತ್ತಮರಾಗಬೇಕೆಂದು ನಾನು ಬಯಸುತ್ತೇನೆ. ಅದನ್ನು ಅವರು ಸಾಬೀತುಪಡಿಸಿದ್ದಾರೆ" ಎಂದು ತಮಿಳುನಾಡು ರಾಜ್ಯಪಾಲರು ಹೇಳಿದ್ದಾರೆ.

ಇಂದು ರಾಜಭವನದಲ್ಲಿ ನೀಟ್ UG-2023ರಲ್ಲಿ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದ ರಾಜ್ಯಪಾಲರು, "NEET ನಿಂದ ವಿನಾಯಿತಿ ಕೋರಿದ ತಮಿಳುನಾಡು ಸರ್ಕಾರದ ಮಸೂದೆ ತಮ್ಮ ಒಪ್ಪಿಗೆ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

"ನಾನು ನಿಮಗೆ ತುಂಬಾ ಪ್ರಾಮಾಣಿಕವಾಗಿ ಹೇಳುತ್ತಿದ್ದೇನೆ, ನಾನು ಎಂದಿಗೂ NEET (ಮಸೂದೆ) ಗೆ ಕ್ಲಿಯರೆನ್ಸ್ ನೀಡುವುದಿಲ್ಲ. ಅದು ತುಂಬಾ ಸ್ಪಷ್ಟವಾಗಿದೆ. ಅದು ರಾಷ್ಟ್ರಪತಿಗಳ ಬಳಿ ಹೋಗಿದೆ ಮತ್ತು ಸಮವರ್ತಿ ಪಟ್ಟಿಯ ವಿಷಯವಾಗಿರುವುದರಿಂದ ರಾಷ್ಟ್ರಪತಿಗಳೇ ನಿರ್ಧಾರ ತೆಗೆದುಕೊಳ್ಳಲಿದ್ದಾರೆ” ಎಂದು ರವಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT