ಜೈರಾಮ್‌ ರಮೇಶ್ 
ದೇಶ

ಪ್ರತಿ ಬಾರಿ ಪ್ರಧಾನಿ ಮೋದಿ ಮಾತನಾಡುವಾಗಲೆಲ್ಲಾ ಅದು ಸುಳ್ಳಿನ ಸುನಾಮಿಯಾಗಿರುತ್ತದೆ: ಜೈರಾಮ್ ರಮೇಶ್

ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ಬಾರಿ ಮಾತನಾಡುವಾಗಲೂ ಅದು ಸುಳ್ಳಿನ ಸುನಾಮಿಯಾಗಿರುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಭಾನುವಾರ ವಾಗ್ದಾಳಿ ನಡೆಸಿದರು. ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯದ ಕುರಿತು ಪ್ರಧಾನಿಯವರು ಇತ್ತೀಚೆಗೆ ಮಾಡಿದ ಭಾಷಣವನ್ನು ಉಲ್ಲೇಖಿಸಿ ಟೀಕಿಸಿದರು. 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ಬಾರಿ ಮಾತನಾಡುವಾಗಲೂ ಅದು ಸುಳ್ಳಿನ ಸುನಾಮಿಯಾಗಿರುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಭಾನುವಾರ ವಾಗ್ದಾಳಿ ನಡೆಸಿದರು.

ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯದ ಕುರಿತು ಪ್ರಧಾನಿಯವರು ಇತ್ತೀಚೆಗೆ ಮಾಡಿದ ಭಾಷಣವನ್ನು ಉಲ್ಲೇಖಿಸಿ ಟೀಕಿಸಿದರು. 

'ಪ್ರಧಾನಿ ಮೋದಿ ಮಾತನಾಡುವಾಗಲೆಲ್ಲಾ ಅದು ನಿಂದನೆಯ ಸುರಿಮಳೆ, ಸುಳ್ಳಿನ ಸುನಾಮಿಯಾಗಿರುತ್ತದೆ. ಸಂಸತ್ತಿನಲ್ಲಿ ಅವರ ಇತ್ತೀಚಿನ ಭಾಷಣವು ಕ್ಲಿನಿಕಲ್ ಮನಶ್ಶಾಸ್ತ್ರಜ್ಞರಾಗಿ ತರಬೇತಿ ಪಡೆದ ಭಾರತದ ಪ್ರಮುಖ ವಿದ್ವಾಂಸರಲ್ಲಿ ಒಬ್ಬರಾದ ಆಶಿಸ್ ನಂದಿ ಅವರು 2002ರ ಆರಂಭದಲ್ಲಿ ಸೆಮಿನಾರ್ ಮ್ಯಾಗಜೀನ್‌ನಲ್ಲಿ ಬರೆದದ್ದನ್ನು ನೆನಪಿಸಿಕೊಳ್ಳುವಂತೆ ಮಾಡಿತು' ಎಂದು ಟ್ವೀಟ್ ಮಾಡಿದ್ದಾರೆ. 

ನಂದಿ ಅವರು ಬರೆದ ಲೇಖನದ ಆಯ್ದ ಭಾಗವನ್ನು ಸಹ ಅವರು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ನರೇಂದ್ರ ಮೋದಿಯವರನ್ನು 'ಕ್ಲಾಸಿಕ್, ಕ್ಲಿನಿಕಲ್ ಕೇಸ್ ಆಫ್ ಎ ಫ್ಯಾಸಿಸ್ಟ್' ಎಂದು ಕರೆದಿದ್ದಾರೆ.

ಅವಿಶ್ವಾಸ ನಿರ್ಣಯಕ್ಕೆ ಉತ್ತರ ನೀಡುವಾಗ ಪ್ರಧಾನಮಂತ್ರಿಗಳು ವಿರೋಧ ಪಕ್ಷಗಳ ಒಕ್ಕೂಟವಾದ INDIA ಅನ್ನು 'ಘಮಾಂಡಿಯಾ ಘಟಬಂಧನ್' (ಅಹಂಕಾರಗಳ ಮೈತ್ರಿ) ಎಂದು ಕರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT