ತರಕಾರಿ ಮಾರಾಟಗಾರನ ಜೊತೆಗೆ ರಾಹುಲ್ ಭೋಜನದ ಚಿತ್ರ 
ದೇಶ

ತರಕಾರಿ ಮಾರಾಟಗಾರನ ಜೊತೆಗೆ ಊಟ ಸವಿದ ರಾಹುಲ್ ಗಾಂಧಿ!

ಇತ್ತೀಚಿಗೆ ಸಾಮಾಜಿಕ ಮಾಧ್ಯಮದ ವೀಡಿಯೊವೊಂದರಲ್ಲಿ ಹಣದುಬ್ಬರದಿಂದ ಎದುರಿಸುತ್ತಿರುವ ಸಂಕಷ್ಟಗಳನ್ನು ಹೇಳಿಕೊಳ್ಳುವಾಗ ಕಣ್ಣೀರು ಹಾಕಿದ್ದ ತರಕಾರಿ ಮಾರಾಟಗಾರ ರಾಮೇಶ್ವರನ್  ಜೊತೆಗೆ ರಾಹುಲ್ ಗಾಂಧಿ ಊಟ ಮಾಡಿದ್ದಾರೆ.

ನವದೆಹಲಿ: ಇತ್ತೀಚಿಗೆ ಸಾಮಾಜಿಕ ಮಾಧ್ಯಮದ ವೀಡಿಯೊವೊಂದರಲ್ಲಿ ಹಣದುಬ್ಬರದಿಂದ ಎದುರಿಸುತ್ತಿರುವ ಸಂಕಷ್ಟಗಳನ್ನು ಹೇಳಿಕೊಳ್ಳುವಾಗ ಕಣ್ಣೀರು ಹಾಕಿದ್ದ ತರಕಾರಿ ಮಾರಾಟಗಾರ ರಾಮೇಶ್ವರನ್  ಜೊತೆಗೆ ರಾಹುಲ್ ಗಾಂಧಿ ಊಟ ಮಾಡಿದ್ದಾರೆ.

ಟ್ವಿಟರ್ ನಲ್ಲಿ  ಈ ಚಿತ್ರವನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, ರಾಮೇಶ್ವರ್ ಜಿ ಅವರು ಉತ್ಸಾಹಭರಿತ ವ್ಯಕ್ತಿ! ಅವರಲ್ಲಿ ಕೋಟಿಗಟ್ಟಲೆ ಭಾರತೀಯರ ಸೌಹಾರ್ದಯುತ ಸ್ವಭಾವದ ನೋಟವನ್ನು ಕಾಣಬಹುದು. ಪ್ರತಿಕೂಲ ಪರಿಸ್ಥಿತಿಗಳಲ್ಲಿಯೂ ನಗುಮುಖದಿಂದ ಮುನ್ನಡೆಯುವವರು ನಿಜವಾಗಿಯೂ 'ಭಾರತ ಭಾಗ್ಯ ವಿಧಾತ (ಭಾರತದ ಹಣೆಬರಹ ತಯಾರಕರು) ಎಂದು ಹೇಳಿದ್ದಾರೆ. 

ಕಾಂಗ್ರೆಸ್  ಕೂಡಾ ಈ ಚಿತ್ರವನ್ನು X ನಲ್ಲಿ ಹಂಚಿಕೊಂಡಿದ್ದು, ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ರಾಮೇಶ್ವರ್ ಬಯಸಿದ್ದರಿಂದ ಅವರಿಬ್ಬರೂ ಭೇಟಿಯಾಗಿರುವುದಾಗಿ ತಿಳಿಸಿದೆ. ಚಿತ್ರದಲ್ಲಿ ರಾಹುಲ್ ಗಾಂಧಿ ಮತ್ತು ರಾಮೇಶ್ವರ್ ಅವರು ಊಟ ಮಾಡುವುದನ್ನು ಕಾಣಬಹುದು

ವೈರಲ್ ಆದ  ವಿಡಿಯೋದಲ್ಲಿ  ತಮ್ಮ ಖಾಲಿ ಬಂಡಿಯೊಂದಿಗೆ ಕಾಣಿಸಿಕೊಂಡಿದ್ದ ರಾಮೇಶ್ವರ್, ಟೊಮೆಟೊ ಬೆಲೆ ತುಂಬಾ ಹೆಚ್ಚಿರುವುದರಿಂದ ಖರೀದಿಸಲು ಸಾಧ್ಯವಿಲ್ಲ ಎಂದಿದ್ದರು. ಬೇರೆ ತರಕಾರಿ ಕೊಳ್ಳುತ್ತೀರಾ ಎಂದು ಕೇಳಿದರೆ ಪೈಸೆ ನಹೀಂ ಎಂದು ಹೇಳಿ ಕಣ್ಣೀರು ಹಾಕಿದ್ದರು.  ಈ ವಿಡಿಯೋ ವೈರಲ್ ಆಗಿದ್ದು, ಬೆಲೆ ಏರಿಕೆಯ ಬಗ್ಗೆ ರಾಹುಲ್ ಗಾಂಧಿ ಮತ್ತಿತರ ನಾಯಕರು  ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT