ಪಂಜಾಬ್ 
ದೇಶ

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಪಂಜಾಬ್ ನಲ್ಲಿ ಮತ್ತೊಂದು ಭಯೋತ್ಪಾದಕ ಸಂಚು ಪತ್ತೆ

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಪಂಜಾಬ್ ನಲ್ಲಿ ಮತ್ತೊಂದು ಭಯೋತ್ಪಾದಕ ಸಂಚು ಪತ್ತೆಯಾಗಿದ್ದು, ಟಾರ್ಗೆಟ್ ಹತ್ಯೆಗಳನ್ನು ನಡೆಸಲು ಉದ್ದೇಶಿಸಿದ್ದ 5 ಮಂದಿಯನ್ನು ಬಂಧಿಸಲಾಗಿದೆ.

ಚಂಡೀಗಢ: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಪಂಜಾಬ್ ನಲ್ಲಿ ಮತ್ತೊಂದು ಭಯೋತ್ಪಾದಕ ಸಂಚು ಪತ್ತೆಯಾಗಿದ್ದು, ಟಾರ್ಗೆಟ್ ಹತ್ಯೆಗಳನ್ನು ನಡೆಸಲು ಉದ್ದೇಶಿಸಿದ್ದ 5 ಮಂದಿಯನ್ನು ಬಂಧಿಸಲಾಗಿದೆ.

ಆರೋಪಿಗಳು ಪಾಕಿಸ್ತಾನ ಮೂಲದ ಹರ್ವಿಂದರ್ ರಿಂಡಾ, ಹಾಗೂ ಪಾಕ್ ಮೂಲಕದ ಗೋಲ್ಡಿ ಬ್ರಾರ್ ಅವರ ಕಾರ್ಯಕರ್ತರೆಂದು ಗುರುತಿಸಲಾಗಿರುವುದಾಗಿ ಡಿಜಿಪಿ ಗೌರವ್ ಯಾದವ್ ಹೇಳಿದ್ದಾರೆ. ಬಂಧಿತರಿಂದ ಎರಡು ವಿದೇಶಿ ತಯಾರಿತ ಪಿಸ್ತೂಲ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಡಿಜಿಪಿ ಮಾಹಿತಿ ನೀಡಿದ್ದಾರೆ.

ಮಹತ್ವದ ಬೆಳವಣಿಗೆಯಲ್ಲಿ ಪಂಜಾಬ್ ಪೊಲೀಸರು ಭಯೋತ್ಪಾದಕರ ಸಂಚನ್ನು ಬಯಲು ಮಾಡಿದ್ದು, ಕೇಂದ್ರೀಯ ಏಜೆನ್ಸಿ ಹಾಗೂ ಪಂಜಾಬ್‌ನಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರುವ ಯತ್ನಗಳನ್ನು ವಿಫಲಗೊಳಿಸಲಾಗಿದೆ ಎಂದು ಯಾದವ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

ಶಸ್ತ್ರಾಸ್ತ್ರಗಳಷ್ಟೇ ಅಲ್ಲದೇ ಆರೋಪಿಗಳು ಅಮೇರಿಕಾದಿಂದ ಆರ್ಥಿಕ ನೆರವನ್ನೂ ಪಡೆಯುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು ಇಡೀ ಜಾಲವನ್ನು ಬೇಧಿಸಲು ತನಿಖೆ ಮುಂದುವರೆದಿದೆ ಎಂದು ಯಾದವ್ ತಿಳಿಸಿದ್ದಾರೆ. ಆ.13 ರಂದೂ ಇಂಥಹದ್ದೇ ಒಂದು ಜಾಲವನ್ನು ಪಂಜಾಬ್ ಪೊಲೀಸರು ಪತ್ತೆ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT