ಪಂಜಾಬ್ 
ದೇಶ

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಪಂಜಾಬ್ ನಲ್ಲಿ ಮತ್ತೊಂದು ಭಯೋತ್ಪಾದಕ ಸಂಚು ಪತ್ತೆ

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಪಂಜಾಬ್ ನಲ್ಲಿ ಮತ್ತೊಂದು ಭಯೋತ್ಪಾದಕ ಸಂಚು ಪತ್ತೆಯಾಗಿದ್ದು, ಟಾರ್ಗೆಟ್ ಹತ್ಯೆಗಳನ್ನು ನಡೆಸಲು ಉದ್ದೇಶಿಸಿದ್ದ 5 ಮಂದಿಯನ್ನು ಬಂಧಿಸಲಾಗಿದೆ.

ಚಂಡೀಗಢ: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಪಂಜಾಬ್ ನಲ್ಲಿ ಮತ್ತೊಂದು ಭಯೋತ್ಪಾದಕ ಸಂಚು ಪತ್ತೆಯಾಗಿದ್ದು, ಟಾರ್ಗೆಟ್ ಹತ್ಯೆಗಳನ್ನು ನಡೆಸಲು ಉದ್ದೇಶಿಸಿದ್ದ 5 ಮಂದಿಯನ್ನು ಬಂಧಿಸಲಾಗಿದೆ.

ಆರೋಪಿಗಳು ಪಾಕಿಸ್ತಾನ ಮೂಲದ ಹರ್ವಿಂದರ್ ರಿಂಡಾ, ಹಾಗೂ ಪಾಕ್ ಮೂಲಕದ ಗೋಲ್ಡಿ ಬ್ರಾರ್ ಅವರ ಕಾರ್ಯಕರ್ತರೆಂದು ಗುರುತಿಸಲಾಗಿರುವುದಾಗಿ ಡಿಜಿಪಿ ಗೌರವ್ ಯಾದವ್ ಹೇಳಿದ್ದಾರೆ. ಬಂಧಿತರಿಂದ ಎರಡು ವಿದೇಶಿ ತಯಾರಿತ ಪಿಸ್ತೂಲ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಡಿಜಿಪಿ ಮಾಹಿತಿ ನೀಡಿದ್ದಾರೆ.

ಮಹತ್ವದ ಬೆಳವಣಿಗೆಯಲ್ಲಿ ಪಂಜಾಬ್ ಪೊಲೀಸರು ಭಯೋತ್ಪಾದಕರ ಸಂಚನ್ನು ಬಯಲು ಮಾಡಿದ್ದು, ಕೇಂದ್ರೀಯ ಏಜೆನ್ಸಿ ಹಾಗೂ ಪಂಜಾಬ್‌ನಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರುವ ಯತ್ನಗಳನ್ನು ವಿಫಲಗೊಳಿಸಲಾಗಿದೆ ಎಂದು ಯಾದವ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

ಶಸ್ತ್ರಾಸ್ತ್ರಗಳಷ್ಟೇ ಅಲ್ಲದೇ ಆರೋಪಿಗಳು ಅಮೇರಿಕಾದಿಂದ ಆರ್ಥಿಕ ನೆರವನ್ನೂ ಪಡೆಯುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು ಇಡೀ ಜಾಲವನ್ನು ಬೇಧಿಸಲು ತನಿಖೆ ಮುಂದುವರೆದಿದೆ ಎಂದು ಯಾದವ್ ತಿಳಿಸಿದ್ದಾರೆ. ಆ.13 ರಂದೂ ಇಂಥಹದ್ದೇ ಒಂದು ಜಾಲವನ್ನು ಪಂಜಾಬ್ ಪೊಲೀಸರು ಪತ್ತೆ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT