ರಾಷ್ಟ್ರಪತಿ ದ್ರೌಪದಿ ಮುರ್ಮು 
ದೇಶ

ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ಭಾಷಣ, ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡುವಂತೆ ನಾಗರಿಕರಿಗೆ ಕರೆ!

77 ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಕ್ಷುಬ್ಧ ಸಮಯದಲ್ಲಿ ದೇಶದ ಸ್ಥಿತಿಸ್ಥಾಪಕತ್ವವನ್ನು ಶ್ಲಾಘಿಸಿದರು ಮತ್ತು ಇದು ಇತರರಿಗೆ ಭರವಸೆಯ ದಾರಿದೀಪವಾಗಿದೆ ಎಂದು ಹೇಳಿದರು.

ನವದೆಹಲಿ: 77 ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಕ್ಷುಬ್ಧ ಸಮಯದಲ್ಲಿ ದೇಶದ ಸ್ಥಿತಿಸ್ಥಾಪಕತ್ವವನ್ನು ಶ್ಲಾಘಿಸಿದರು ಮತ್ತು ಇದು ಇತರರಿಗೆ ಭರವಸೆಯ ದಾರಿದೀಪವಾಗಿದೆ ಎಂದು ಹೇಳಿದರು.

ದೇಶವು ಮುನ್ನಡೆದ ಹಲವಾರು ಮಾರ್ಗಗಳ ಬಗ್ಗೆ ಮಾತನಾಡಿದ ದ್ರೌಪದಿ ಮುರ್ಮು, ಭಾರತ ಸವಾಲುಗಳನ್ನು ಅವಕಾಶಗಳಾಗಿ ಪರಿವರ್ತಿಸಿದೆ ಮತ್ತು ಹೆಚ್ಚಿನ ಜಿಡಿಪಿ ಬೆಳವಣಿಗೆಯನ್ನು ದಾಖಲಿಸಿದೆ. ಪ್ರಪಂಚದಾದ್ಯಂತ ಅಭಿವೃದ್ಧಿ ಮತ್ತು ಮಾನವೀಯ ಗುರಿಗಳನ್ನು ಉತ್ತೇಜಿಸುವಲ್ಲಿ ಭಾರತವು ನಿರ್ಣಾಯಕ ಪಾತ್ರವನ್ನು ವಹಿಸುತ್ತಿದೆ. ಜಿ-20 ಶೃಂಗಸಭೆಯಂತಹ ಅನೇಕ ಅಂತರಾಷ್ಟ್ರೀಯ ವೇದಿಕೆಗಳ ನಾಯಕತ್ವವನ್ನು ವಹಿಸಿಕೊಂಡಿದೆ. ಅಲ್ಲದೇ ರಾಷ್ಟ್ರೀಯ ಶಿಕ್ಷಣ ನೀತಿ 2020 ಮತ್ತು ಚಂದ್ರಯಾನ-3 ರ ಯಶಸ್ವಿ ಉಡಾವಣೆ ಶಿಕ್ಷಣ ಮತ್ತು ವಿಜ್ಞಾನ ಕ್ಷೇತ್ರಗಳಲ್ಲಿನ ಪ್ರಗತಿಯ ಸೂಚಕ ಎಂದು ತಿಳಿಸಿದರು. 

ನಮ್ಮ ದೇಶದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ವಿಶೇಷ ಗಮನ ನೀಡಲಾಗುತ್ತಿದೆ. ಆರ್ಥಿಕ ಸಬಲೀಕರಣವು ಕುಟುಂಬ ಮತ್ತು ಸಮಾಜದಲ್ಲಿ ಮಹಿಳೆಯ ಸ್ಥಾನವನ್ನು ಬಲಪಡಿಸುತ್ತದೆ. ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡುವಂತೆ ನಾಗರಿಕರನ್ನು ಒತ್ತಾಯಿಸಿದ ರಾಷ್ಟ್ರಪತಿ, ಪರಿಸರಕ್ಕಾಗಿ ಸ್ಥಳೀಯ, ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ಪ್ರಯತ್ನಗಳನ್ನು ಮಾಡುವುದು ಅಗತ್ಯವಾಗಿದೆ. ಮಹಿಳೆಯರ ಅಭಿವೃದ್ಧಿ ನಮ್ಮ ಸ್ವಾತಂತ್ರ್ಯ ಹೋರಾಟದ ಆದರ್ಶಗಳಲ್ಲಿ ಒಂದಾಗಿದೆ ಎಂದು ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿದೇಶಿ ನೌಕರರ ನೇಮಕಾತಿಗೆ ಅಮೆರಿಕ ಕತ್ತರಿ: H-1B ವೀಸಾ ನಿರ್ಬಂಧ ಮತ್ತೊಂದು ವರ್ಷಕ್ಕೆ ಮುಂದುವರಿಕೆ..!

ರಷ್ಯಾಗೆ ಟ್ರಂಪ್‌ ಬಿಗ್ ಶಾಕ್: ಶೇ.100ರಷ್ಟು ಸುಂಕಕ್ಕೆ ಅಸ್ತು, ಭಾರತ-ಚೀನಾ ಮೇಲೂ ನಿರ್ಬಂಧದ ತೂಗುಗತ್ತಿ..!

ಮಂಗಳೂರಿನಲ್ಲಿ ಡಿಕೆಶಿ ಸಂಪುಟ ಸಭೆ, ತುಮಕೂರಿನಲ್ಲಿ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್: ಕೈ ಪಾಳಯದಲ್ಲಿ ಶುರುವಾಯ್ತಾ ಹೊಸ ಆಂತರಿಕ ತಂತ್ರಗಾರಿಕೆ..?

ರಾಜ್ಯದ 32,611 ಕೋಟಿ ರೂ. ಯೋಜನೆಗಳಿಗೆ ಗ್ರೀನ್‌ ಸಿಗ್ನಲ್‌: ಮಂಗಳೂರು ಸಂಪುಟ ಸಭೆಯಲ್ಲಿ ಸರ್ಕಾರ ಮಹತ್ವದ ಘೋಷಣೆ..!

ಕರಾವಳಿಯಲ್ಲಿ ಅಭಿವೃದ್ಧಿಯ ಅಲೆ: 16 ಸಾವಿರ ಕೋಟಿ ರೂ. ಪ್ಯಾಕೇಜ್‌ಗೆ ಸಂಪುಟ ಒಪ್ಪಿಗೆ, ಪ್ರವಾಸೋದ್ಯಮ, ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು..!