77ನೇ ಸ್ವಾತಂತ್ರ್ಯೋತ್ಸದ ಅಂಗವಾಗಿ ಕೆಂಪು ಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಭಾಷಣ 
ದೇಶ

ಮಣಿಪುರದಲ್ಲಿ ಪರಿಸ್ಥಿತಿ ಸುಧಾರಿಸುತ್ತಿದೆ; ಸಮಸ್ಯೆಗಳನ್ನು ಪರಿಹರಿಸಲು ಶಾಂತಿ ಏಕೈಕ ಮಾರ್ಗ- ಪ್ರಧಾನಿ ಮೋದಿ

ಕಳೆದ ಕೆಲವು ವಾರಗಳಿಂದ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಮಣಿಪುರದ ಪರಿಸ್ಥಿತಿ ಇದೀಗ ಸುಧಾರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ ಮತ್ತು ಅಲ್ಲಿ ಪುನಃಸ್ಥಾಪಿಸಲು ಈಶಾನ್ಯ ರಾಜ್ಯದ ಜನರನ್ನು ಒತ್ತಾಯಿಸಿದರು.

ನವದೆಹಲಿ: ಕಳೆದ ಕೆಲವು ವಾರಗಳಿಂದ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಮಣಿಪುರದ ಪರಿಸ್ಥಿತಿ ಇದೀಗ ಸುಧಾರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ ಮತ್ತು ಅಲ್ಲಿ ಪುನಃಸ್ಥಾಪಿಸಲು ಈಶಾನ್ಯ ರಾಜ್ಯದ ಜನರನ್ನು ಒತ್ತಾಯಿಸಿದರು.

ಕೆಂಪು ಕೋಟೆಯ ಆವರಣದಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಇಡೀ ರಾಷ್ಟ್ರವು ಮಣಿಪುರದೊಂದಿಗೆ ಇದೆ. ಕೇಂದ್ರ ಮತ್ತು ರಾಜ್ಯ ಸರ್ಕಾರವು ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿಯಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಮತ್ತು ಈ ಪ್ರಯತ್ನಗಳನ್ನು ಮುಂದುವರಿಸುತ್ತದೆ ಎಂದು ಹೇಳಿದರು.

'ಕಳೆದ ಕೆಲವು ವಾರಗಳಲ್ಲಿ, ಈಶಾನ್ಯ ರಾಜ್ಯದಲ್ಲಿ ನಡೆದ ಹಿಂಸಾಚಾರದ ಅವಧಿಯಲ್ಲಿ, ವಿಶೇಷವಾಗಿ ಮಣಿಪುರದಲ್ಲಿ, ಅನೇಕ ಜನರು ಪ್ರಾಣ ಕಳೆದುಕೊಂಡರು. ನಮ್ಮ ತಾಯಿ ಮತ್ತು ಹೆಣ್ಣುಮಕ್ಕಳ ಗೌರವಕ್ಕೆ ಕುಂದುಂಟಾಯಿತು. ಆದರೆ, ಕಳೆದ ಕೆಲವು ದಿನಗಳಲ್ಲಿ ಅಲ್ಲಿ ಪರಿಸ್ಥಿತಿ ಶಾಂತಗೊಳ್ಳುತ್ತಿದೆ' ಎಂದರು.

ರಾಷ್ಟ್ರವು ಮಣಿಪುರದೊಂದಿಗೆ ಇದೆ ಎಂದು ಪ್ರಧಾನಮಂತ್ರಿಯವರು ಕೆಂಪು ಕೋಟೆಯಿಂದ ತಮ್ಮ ಸತತ 10ನೇ ಸ್ವಾತಂತ್ರ್ಯೋತ್ವವದ ಭಾಷಣದ ಆರಂಭದಲ್ಲಿ ಹೇಳಿದರು.

'ಮಣಿಪುರದಲ್ಲಿ ಕಳೆದ ಕೆಲವು ದಿನಗಳಿಂದ ಪರಿಸ್ಥಿತಿ ಶಾಂತವಾಗುತ್ತಿದ್ದು, ಜನರು ಅಲ್ಲಿ ಶಾಂತಿಯನ್ನು ಪುನಃಸ್ಥಾಪಿಸಬೇಕು. ಮಣಿಪುರದಲ್ಲಿನ ಸಮಸ್ಯೆಗಳಿಗೆ ಶಾಂತಿಯ ಮೂಲಕ ಪರಿಹಾರದ ಮಾರ್ಗವನ್ನು ಕಂಡುಕೊಳ್ಳಲಾಗುವುದು' ಎಂದು ಪ್ರಧಾನಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT