ಸಿಬಿಐ ಸಾಂದರ್ಭಿಕ ಚಿತ್ರ 
ದೇಶ

ಮಣಿಪುರ ಹಿಂಸಾಚಾರ: ಸಿಬಿಐ ತನಿಖೆ ಚುರುಕು; 29 ಮಹಿಳಾ ಅಧಿಕಾರಿಗಳು ಸೇರಿದ 53 ಅಧಿಕಾರಿಗಳ ತಂಡ ನಿಯೋಜನೆ!

ಮಣಿಪುರ ಜನಾಂಗೀಯ ಹಿಂಸಾಚಾರ ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸಿರುವ ಸಿಬಿಐ ಬುಧವಾರ ವಿವಿಧ ಶ್ರೇಣಿಗಳಿಂದ 29 ಮಹಿಳಾ ಅಧಿಕಾರಿಗಳು ಸೇರಿದಂತೆ 53 ಅಧಿಕಾರಿಗಳನ್ನು ನಿಯೋಜಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಮಣಿಪುರ ಜನಾಂಗೀಯ ಹಿಂಸಾಚಾರ ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸಿರುವ ಸಿಬಿಐ ಬುಧವಾರ ವಿವಿಧ ಶ್ರೇಣಿಗಳಿಂದ 29 ಮಹಿಳಾ ಅಧಿಕಾರಿಗಳು ಸೇರಿದಂತೆ 53 ಅಧಿಕಾರಿಗಳನ್ನು ನಿಯೋಜಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲವ್ಲಿ ಕಟಿಯಾರ್ ಮತ್ತು ನಿರ್ಮಲಾ ದೇವಿ ಸೇರಿದಂತೆ ಮೂವರು ಉಪ ಮಹಾ ನಿರೀಕ್ಷಕರ ಮಟ್ಟದ ಅಧಿಕಾರಿಗಳು (ಡೆಪ್ಯೂಟಿ ಇನ್ಸ್ ಪೆಕ್ಟರ್ ಜನರಲ್)  ರಾಜ್ಯದಲ್ಲಿನ ಹಿಂಸಾಚಾರ ಪ್ರಕರಣಗಳ ತನಿಖೆಗೆ ತಮ್ಮ ತಂಡಗಳನ್ನು ಮುನ್ನಡೆಸಲಿದ್ದಾರೆ ಎಂದು ಅವರು ಹೇಳಿದರು.

ಎಲ್ಲಾ ಅಧಿಕಾರಿಗಳು ಜಂಟಿ ನಿರ್ದೇಶಕ ಘನಶ್ಯಾಮ್ ಉಪಾಧ್ಯಾಯ ಅವರಿಗೆ ವರದಿ ಮಾಡಲಿದ್ದಾರೆ. ಅವರು ವಿವಿಧ ಪ್ರಕರಣಗಳ ತನಿಖೆಯನ್ನು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಅಧಿಕಾರಿ ತಿಳಿಸಿದರು. 

ವಿಪಕ್ಷಗಳ ನಿಯೋಗದ ಸದಸ್ಯರ ಪ್ರಕಾರ ಮಣಿಪುರದಲ್ಲಿ ಮೇ ತಿಂಗಳಿನಿಂದಲೂ ನಡೆದ ಹಿಂಸಾಚಾರದಲ್ಲಿ ಒಟ್ಟು 179 ಜನರು ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗಿದೆ. ಆದರೆ ಸ್ಥಳಾಂತರಗೊಂಡವರ ಸಂಖ್ಯೆ 60,000 ಮತ್ತು ಪರಿಹಾರ ಶಿಬಿರಗಳಲ್ಲಿ 40,000 ಎಂದು ಅಂದಾಜಿಸಲಾಗಿದೆ. ಸಾವಿರಾರು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT