ಪ್ರಧಾನಿ ಮೋದಿ 
ದೇಶ

'ಪಿಎಂ ವಿಶ್ವಕರ್ಮ' ಯೋಜನೆ, 32,500 ಕೋಟಿ ರೂ. ಮೌಲ್ಯದ ಹೊಸ ರೈಲ್ವೆ ಯೋಜನೆಗಳಿಗೆ ಕೇಂದ್ರ ಸಂಪುಟ ಅಸ್ತು

13,000 ಕೋಟಿ ರೂಪಾಯಿ ಮೌಲ್ಯದ "ಪಿಎಂ ವಿಶ್ವಕರ್ಮ" ಯೋಜನೆ ಹಾಗೂ  32,500 ಕೋಟಿ ಮೌಲ್ಯದ ಹೊಸ ರೈಲ್ವೆ ಯೋಜನೆಗಳಿಗೆ ಆರ್ಥಿಕ ವ್ಯವಹಾರಗಳ ಕೇಂದ್ರ ಸಂಪುಟ ಸಮಿತಿ ಮಂಗಳವಾರ ಅನುಮೋದನೆ ನೀಡಿದೆ.

ನವದೆಹಲಿ: 13,000 ಕೋಟಿ ರೂಪಾಯಿ ಮೌಲ್ಯದ "ಪಿಎಂ ವಿಶ್ವಕರ್ಮ" ಯೋಜನೆ ಹಾಗೂ  32,500 ಕೋಟಿ ಮೌಲ್ಯದ ಹೊಸ ರೈಲ್ವೆ ಯೋಜನೆಗಳಿಗೆ ಆರ್ಥಿಕ ವ್ಯವಹಾರಗಳ ಕೇಂದ್ರ ಸಂಪುಟ ಸಮಿತಿ ಮಂಗಳವಾರ ಅನುಮೋದನೆ ನೀಡಿದೆ.

ಪಿಎಂ ವಿಶ್ವಕರ್ಮ ಯೋಜನೆಯಿಂದ ದೇಶದ 30 ಲಕ್ಷ ಕರಕುಶಲಕರ್ಮಿಗಳಿಗೆ ಲಾಭವಾಗಲಿದೆ. ಅವರಿಗೆ ಕೇವಲ 5 ಪರ್ಸೆಂಟ್ ವಾರ್ಷಿಕ ಬಡ್ಡಿದರದಲ್ಲಿ 1 ಲಕ್ಷ ರೂ.ವರೆಗೂ ಮೊದಲ ಹಂತದ ಸಾಲ ಹಾಗೂ ಎರಡನೇ ಹಂತದಲ್ಲಿ 2 ಲಕ್ಷ ರೂಪಾಯಿವರೆಗೆ ಸಾಲ ನೀಡಲಾಗುವುದು. ಯೋಜನೆಗಾಗಿ ಸರ್ಕಾರ 13,000 ಕೋಟಿ ರೂ. ಮಿಸಲಿಟ್ಟಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ.

ಈ ಯೋಜನೆಯಡಿ ಕೌಶಲ್ಯ ಅಭಿವೃದ್ಧಿ, ಟೂಲ್​ಕಿಟ್, ಡಿಜಿಟಲ್ ವಹಿವಾಟು, ಮಾರ್ಕೆಟಿಂಗ್ ಇತ್ಯಾದಿ ಪ್ರೋತ್ಸಾಹಗಳನ್ನು ಕರಕುಶಲಕರ್ಮಿಗಳಿಗೆ ಒದಗಿಸಲಾಗುವುದು ಎಂದು ಅವರು ಹೇಳಿದ್ದಾರೆ.

32,500 ಕೋಟಿ ಮೌಲ್ಯದ ಹೊಸ ರೈಲ್ವೆ ಯೋಜನೆಗಳಿಗೆ ಸಂಪುಟ ಅನುಮೋದನೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ರೈಲ್ವೆ ಸಚಿವಾಲಯದ ಏಳು ಯೋಜನೆಗಳಿಗೆ ಅನುಮೋದನೆ ನೀಡಿದೆ.

32,500 ಕೋಟಿ ರೂಪಾಯಿ ವೆಚ್ಚದಲ್ಲಿ ಮಲ್ಟಿ-ಟ್ರ್ಯಾಕಿಂಗ್‌ ಕಾರ್ಯಾಚರಣೆಗಳನ್ನು ಸರಾಗಗೊಳಿಸುವ ಮೂಲಕ ದಟ್ಟಣೆ ಕಡಿಮೆ ಮಾಡುವುದು, ಭಾರತೀಯ ರೈಲ್ವೆಯಾದ್ಯಂತ ಅತ್ಯಂತ ಜನನಿಬಿಡ ವಿಭಾಗಗಳಲ್ಲಿ ಹೆಚ್ಚು ಅಗತ್ಯವಿರುವ ಮೂಲಸೌಕರ್ಯ ಅಭಿವೃದ್ಧಿಪಡಿಸಲಾಗುತ್ತಿದೆ.

ಈ ಯೋಜನೆಗಳು ಉತ್ತರ ಪ್ರದೇಶ, ಬಿಹಾರ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್, ಒಡಿಶಾ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದ ಒಂಬತ್ತು ರಾಜ್ಯಗಳ 35 ಜಿಲ್ಲೆಗಳನ್ನು ಒಳಗೊಂಡಿದೆ.

ಈ ಯೋಜನೆಯು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ನೆಟ್‌ವರ್ಕ್ ಅನ್ನು 2339 ಕಿಮೀ ಹೆಚ್ಚಿಸುವ ಸಾಧ್ಯತೆಯಿದೆ. ಇದು ಮೇಲೆ ತಿಳಿಸಿದ ರಾಜ್ಯಗಳಲ್ಲಿ 7.06 ಕೋಟಿ ಜನರಿಗೆ ಉದ್ಯೋಗಾವಕಾಶ ಸೃಷ್ಟಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT