ಸಾಂದರ್ಭಿಕ ಚಿತ್ರ 
ದೇಶ

ಕೇರಳ: ರೈಲುಗಳ ಮೇಲೆ ಕಲ್ಲು ತೂರಾಟ ಮುಂದುವರಿಕೆ, ವಂದೇ ಭಾರತ್ ಕಿಟಕಿಗೆ ಹಾನಿ!

ಕೇರಳದಲ್ಲಿ ರೈಲುಗಳ ಮೇಲೆ ಕಲ್ಲು ತೂರಾಟದ ಘಟನೆಗಳು ಮುಂದುವರಿದಿದ್ದು, ಬುಧವಾರ ಕೆಲವು ಕಿಡಿಗೇಡಿಗಳು ಚಲಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್‌ ಮೇಲೆ ಕೆಲ್ಲೆಸೆದು ಕಿಟಕಿಯೊಂದಕ್ಕೆ ಹಾನಿ ಮಾಡಿದ್ದಾರೆ.

ಕಾಸರಗೋಡು: ಕೇರಳದಲ್ಲಿ ರೈಲುಗಳ ಮೇಲೆ ಕಲ್ಲು ತೂರಾಟದ ಘಟನೆಗಳು ಮುಂದುವರಿದಿದ್ದು, ಬುಧವಾರ ಕೆಲವು ಕಿಡಿಗೇಡಿಗಳು ಚಲಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್‌ ಮೇಲೆ ಕೆಲ್ಲೆಸೆದು ಕಿಟಕಿಯೊಂದಕ್ಕೆ ಹಾನಿ ಮಾಡಿದ್ದಾರೆ.

ಉತ್ತರ ಕಣ್ಣೂರು ಜಿಲ್ಲೆಯಲ್ಲಿ ಎರಡು ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿದ ಮೂರು ದಿನಗಳ ನಂತರ ಕಾಸರಗೋಡಿನಿಂದ ತಿರುವನಂತಪುರಕ್ಕೆ ಹೋಗುವ ವಂದೇ ಭಾರತ್ ಎಕ್ಸ್‌ಪ್ರೆಸ್‌ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಇದರ ಪರಿಣಾಮ ಅದರ ಒಂದು ಕಿಟಕಿಗೆ ಹಾನಿಯಾಗಿದೆ. ವಟಕರ ಬಳಿ ಸಂಜೆ 4 ರಿಂದ 4.30 ರ ನಡುವೆ ಈ ಘಟನೆ ನಡೆದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ರೈಲಿನ ಸಿ-8 ಬೋಗಿಯ ಕಿಟಕಿಗೆ ಹಾನಿಯಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ, ಹೊರಗಿನಿಂದ ಗಾಜು ಒಡೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕಿಟಕಿಯ ಗಾಜುಗಳು ತೀವ್ರ ರೀತಿಯಲ್ಲಿ ಹಾನಿಯಾಗಿರುವುದಾಗಿ ಟಿವಿ ಚಾನೆಲ್ ಗಳು ತೋರಿಸಿವೆ. 

ಭಾನುವಾರ ಸಂಜೆ ಮಂಗಳೂರು-ಚೆನ್ನೈ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ನೇತ್ರಾವತಿ ಎಕ್ಸ್‌ಪ್ರೆಸ್ ರೈಲುಗಳು ಕಣ್ಣೂರು ದಕ್ಷಿಣ ಮತ್ತು ವಲಪಟ್ಟಣಂ ನಡುವಿನ ಪ್ರದೇಶವನ್ನು ತಲುಪಿದಾಗ ಕಲ್ಲು ತೂರಾಟ ನಡೆಸಲಾಗಿತ್ತು. ಎರಡೂ ರೈಲುಗಳ ಎಸಿ ಕೋಚ್‌ಗಳ ಕಿಟಕಿ ಗಾಜು ಹಾಳಾಗಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT