ಸುಪ್ರೀಂಕೋರ್ಟ್ 
ದೇಶ

ಕೃಷ್ಣ ಜನ್ಮಭೂಮಿ ಮಥುರಾದಲ್ಲಿ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ

ಉತ್ತರ ಪ್ರದೇಶದ ಮಥುರಾದ ಕೃಷ್ಣ ಜನ್ಮಭೂಮಿಯ ಬಳಿ ಅಕ್ರಮ ನಿರ್ಮಾಣಗಳನ್ನು ತೆರವುಗೊಳಿಸಲು ರೈಲ್ವೆ ಅಧಿಕಾರಿಗಳು ನಡೆಸುತ್ತಿರುವ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದ್ದು ಯಥಾಸ್ಥಿತಿಗೆ ಆದೇಶಿಸಿದೆ.

ನವದೆಹಲಿ: ಉತ್ತರ ಪ್ರದೇಶದ ಮಥುರಾದ ಕೃಷ್ಣ ಜನ್ಮಭೂಮಿಯ ಬಳಿ ಅಕ್ರಮ ನಿರ್ಮಾಣಗಳನ್ನು ತೆರವುಗೊಳಿಸಲು ರೈಲ್ವೆ ಅಧಿಕಾರಿಗಳು ನಡೆಸುತ್ತಿರುವ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದ್ದು ಯಥಾಸ್ಥಿತಿಗೆ ಆದೇಶಿಸಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್, ಸಂಜಯ್ ಕುಮಾರ್ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು ಈ ಪ್ರಕರಣದಲ್ಲಿ ಕೇಂದ್ರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ. '10 ದಿನಗಳ ಅವಧಿಗೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕು. ಒಂದು ವಾರದ ನಂತರ ಪ್ರಕರಣದ ವಿಚಾರಣೆಯನ್ನು ಪಟ್ಟಿ ಮಾಡಲಾಗುತ್ತದೆ' ಎಂದು ಪೀಠ ಹೇಳಿದೆ.

ಅರ್ಜಿದಾರ ಯಾಕೂಬ್ ಶಾ ಪರ ವಾದ ಮಂಡಿಸಿದ ವಕೀಲರು, 100 ಮನೆಗಳನ್ನು ಈಗಾಗಲೇ ನೆಲಸಮಗೊಳಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ಅಲ್ಲದೆ ಇನ್ನೂ "70-80 ಮನೆಗಳು ಉಳಿದಿವೆ. ಈ ತೆರವು ಕಾರ್ಯಾಚರಣೆ ನಿರುಪಯುಕ್ತವಾಗುತ್ತದೆ. ಅವರು ಉತ್ತರ ಪ್ರದೇಶದ ನ್ಯಾಯಾಲಯಗಳು ರಜೆಯಲ್ಲಿದ್ದಾಗ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. 

ಈ ವಿಷಯವು ಕೃಷ್ಣ ಜನ್ಮಭೂಮಿಯ ಸಮೀಪವಿರುವ ಬಡಾವಣೆಗಳ ನೆಲಸಮಕ್ಕೆ ಸಂಬಂಧಿಸಿದೆ ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

SCROLL FOR NEXT