ಸುಪ್ರಿಯಾ ಸುಳೆ 
ದೇಶ

ಕೇಂದ್ರ ಸಚಿವ ಸ್ಥಾನದ ಆಫರ್ ಬಗ್ಗೆ ಸುಪ್ರಿಯಾ ಸುಳೆ ಹೇಳಿದ್ದೇನು ಅಂದರೆ...

ಎನ್ ಸಿಪಿ ನಾಯಕ ಶರದ್ ಪವಾರ್ ಅಥವಾ ಅವರ ಪುತ್ರಿ ಸುಪ್ರಿಯಾ ಸುಲೆಗೆ ಕೇಂದ್ರ ಸಚಿವ ಸ್ಥಾನದ ಆಫರ್ ನೀಡಲಾಗಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಎನ್ ಸಿಪಿ ನಾಯಕಿ ಸುಪ್ರಿಯಾ ಪ್ರತಿಕ್ರಿಯೆ ನೀಡಿದ್ದಾರೆ. 

ಮುಂಬೈ: ಎನ್ ಸಿಪಿ ನಾಯಕ ಶರದ್ ಪವಾರ್ ಅಥವಾ ಅವರ ಪುತ್ರಿ ಸುಪ್ರಿಯಾ ಸುಲೆಗೆ ಕೇಂದ್ರ ಸಚಿವ ಸ್ಥಾನದ ಆಫರ್ ನೀಡಲಾಗಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಎನ್ ಸಿಪಿ ನಾಯಕಿ ಸುಪ್ರಿಯಾ ಪ್ರತಿಕ್ರಿಯೆ ನೀಡಿದ್ದಾರೆ. 

ಕೇಂದ್ರ ಸಚಿವ ಸ್ಥಾನದ ಕುರಿತಾಗಿ ತಮಗೆ ಯಾರೂ ಅಂತಹ ಆಫರ್ ನೀಡಿಲ್ಲ ಎಂದು ಸುಪ್ರಿಯಾ ಸುಲೆ ಸ್ಪಷ್ಟನೆ ನೀಡಿದ್ದಾರೆ. 

ಮಹಾರಾಷ್ಟ್ರ ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚೌಹಾಣ್ ಅವರು ಸುಪ್ರಿಯಾ ಅಥವಾ ಅವರ ತಂದೆಗೆ ಕೇಂದ್ರ ಸಚಿವ ಸ್ಥಾನದ ಆಫರ್ ನೀಡಲಾಗಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಸುಪ್ರಿಯಾ, ಕಾಂಗ್ರೆಸ್ ಯಾಕಾಗಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದೆ ಎಂಬ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ಎಂದು ಹೇಳಿದ್ದಾರೆ.

ನಾನು ಕಾಂಗ್ರೆಸ್ ನ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಗೌರವ್ ಗೊಗೋಯ್ ಅವರೊಂದಿಗೆ ವೈಯಕ್ತಿಕವಾಗಿ ಸಂಪರ್ಕದಲ್ಲಿದ್ದೇನೆ ಆದರೆ ಅವರ ಮಹಾರಾಷ್ಟ್ರ ಘಟಕದ ನಾಯಕರೊಂದಿಗೆ ಸಂಪರ್ಕದಲ್ಲಿಲ್ಲ ಎಂದು ಸುಪ್ರಿಯಾ ಹೇಳಿದ್ದಾರೆ. ಇತ್ತೀಚೆಗಷ್ಟೇ ವಿಪಕ್ಷನಾಯಕ ವಿಜಯ್ ವಾಡೆತ್ತಿವಾರ್ ಅಜಿತ್ ಪವಾರ್ ಹಾಗೂ ಶರದ್ ಪವಾರ್ ಭೇಟಿ ಮಾಡಿದ್ದನ್ನು ಪ್ರಶ್ನಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT