ವಿರೋಧಪಕ್ಷಗಳ INDIA ಮೈತ್ರಿಕೂಟದ ನಾಯಕರು 
ದೇಶ

ಲೋಕಸಭಾ ಚುನಾವಣೆ: ದೆಹಲಿಯಲ್ಲಿ ಕಾಂಗ್ರೆಸ್ ಗೆ ಬಿಸಿತುಪ್ಪವಾದ ಎಎಪಿ! ಎಚ್ಚರಿಕೆ ಸಂದೇಶ ರವಾನೆ

2024ರ ಲೋಕಸಭೆ ಚುನಾವಣೆಯಲ್ಲಿ ರಾಷ್ಟ್ರರಾಜಧಾನಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಎಪಿ ಬಿಸಿತುಪ್ಪವಾಗುವ ಲಕ್ಷಣಗಳು ಗೋಚರಿಸುತ್ತಿವೆ. ದೆಹಲಿಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲು ಮನಸ್ಸು ಮಾಡಿದ್ದರೆ INDIA ಒಕ್ಕೂಟದಿಂದ ಹೊರ ಬರುವುದಾಗಿ ಆಮ್ ಆದ್ಮಿ ಪಕ್ಷ ಬುಧವಾರ ಎಚ್ಚರಿಕೆ ನೀಡಿದೆ.

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ರಾಷ್ಟ್ರರಾಜಧಾನಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಎಪಿ ಬಿಸಿತುಪ್ಪವಾಗುವ ಲಕ್ಷಣಗಳು ಗೋಚರಿಸುತ್ತಿವೆ. ದೆಹಲಿಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲು ಮನಸ್ಸು ಮಾಡಿದ್ದರೆ INDIA ಒಕ್ಕೂಟದಿಂದ ಹೊರ ಬರುವುದಾಗಿ ಆಮ್ ಆದ್ಮಿ ಪಕ್ಷ ಬುಧವಾರ ಎಚ್ಚರಿಕೆ ನೀಡಿದೆ. ಕಾಂಗ್ರೆಸ್ ಮತ್ತು ಎಎಪಿ ವಿರೋಧಪಕ್ಷಗಳ ಒಕ್ಕೂಟವಾದ INDIAದ (ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿಕೂಟ)ಸದಸ್ಯ ಪಕ್ಷಗಳಾಗಿವೆ.

ಕಾಂಗ್ರೆಸ್ ನಾಯಕಿ ಅಲ್ಕಾ ಲಾಂಬಾ ಹೇಳಿಕೆ ಹಿನ್ನೆಲೆಯಲ್ಲಿ ಮುಂಬೈಯಲ್ಲಿ ನಡೆಯಲಿರುವ INDIA ಒಕ್ಕೂಟದ ಮೂರನೇ ಸಭೆಯಲ್ಲಿ ಪಾಲ್ಗೊಳ್ಳಲುವ ಕುರಿತು ಪಕ್ಷದ ಉನ್ನತ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಎಎಪಿ ಮುಖ್ಯ ವಕ್ತಾರ ಪ್ರಿಯಾಂಕಾ ಕಕ್ಕರ್ ಹೇಳಿದ್ದಾರೆ.

ಲೋಕಸಭಾ ಚುನಾವಣೆಯ ಪೂರ್ವ ಸಿದ್ಧತೆ ಪರಾಮರ್ಶೆಗಾಗಿ ದೆಹಲಿ ಕಾಂಗ್ರೆಸ್ ನಾಯಕರು ಬುಧವಾರ ಪಕ್ಷದ ಉನ್ನತ ನಾಯಕತ್ವದೊಂದಿಗೆ ಸಭೆ ನಡೆಸಿದ್ದು, ಪಕ್ಷ ಸಂಘಟನೆಯನ್ನು ಬಲಪಡಿಸುವ ಮಾರ್ಗಗಳು ಮತ್ತು ವಿಧಾನಗಳ ಬಗ್ಗೆ ಚರ್ಚಿಸಿದ್ದಾರೆ. ಸಭೆಯಲ್ಲಿ ಉಪಸ್ಥಿತರಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪಕ್ಷದ ಮುಖಂಡರು ಒಗ್ಗಟ್ಟಾಗಿ ಮತ್ತು ಜನರೊಂದಿಗೆ ಸಂಪರ್ಕದಲ್ಲಿರಲು ಹೇಳಿದರು ಎಂದು ಮೂಲಗಳು ತಿಳಿಸಿವೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಕ್ಕರ್, ದೆಹಲಿಯ ಎಲ್ಲಾ 7 ಲೋಕಸಭೆ ಸ್ಥಾನಗಳಲ್ಲಿ ಸ್ಪರ್ಧಿಸಲು ನಾಯಕರಿಗೆ ಆದೇಶ ನೀಡಲಾಗಿದೆ ಎಂದು ಲಂಬಾ ಹೇಳಿದರು. ಅವರ ಹೇಳಿಕೆ ಹಿನ್ನೆಲೆಯಲ್ಲಿ ಮಾತನಾಡಿರುವ ಕಕ್ಕರ್, 
ದೆಹಲಿಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಕಣಕ್ಕಿಳಿಯಲು ಬಯಸಿದರೆ, ವಿರೋಧ ಪಕ್ಷದ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸುವುದರಲ್ಲಿ ಅರ್ಥವಿಲ್ಲ ಎಂದು ಹೇಳುವ ಮೂಲಕ ಅದರಿಂದ ಹೊರಬರುವ ಸುಳಿವು ನೀಡಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT