ಸಾಂದರ್ಭಿಕ ಚಿತ್ರ 
ದೇಶ

ಆಂಧ್ರ ಪ್ರದೇಶ: ತಿರುಮಲಕ್ಕೆ ಹೋಗುವ ದಾರಿಯಲ್ಲಿ ಮತ್ತೊಂದು ಚಿರತೆ ಸೆರೆ!

ಆಂಧ್ರ ಪ್ರದೇಶದ ತಿರುಪತಿ ಜಿಲ್ಲೆಯ ತಿರುಮಲದ ಪ್ರಸಿದ್ಧ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕಾಲ್ನಡಿಗೆ ಮೂಲಕ ತೆರಳುವ ಮಾರ್ಗದಲ್ಲಿ ಮೂರನೇ ಚಿರತೆಯನ್ನು ಸೆರೆ ಹಿಡಿಯಲಾಗಿದೆ ಎಂದು ಆಂಧ್ರಪ್ರದೇಶದ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ತಿರುಪತಿ: ಆಂಧ್ರ ಪ್ರದೇಶದ ತಿರುಪತಿ ಜಿಲ್ಲೆಯ ತಿರುಮಲದ ಪ್ರಸಿದ್ಧ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕಾಲ್ನಡಿಗೆ ಮೂಲಕ ತೆರಳುವ ಮಾರ್ಗದಲ್ಲಿ ಮೂರನೇ ಚಿರತೆಯನ್ನು ಸೆರೆ ಹಿಡಿಯಲಾಗಿದೆ ಎಂದು ಆಂಧ್ರಪ್ರದೇಶದ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ತಿರುಮಲಕ್ಕೆ ಹೋಗುವ ದಾರಿಯಲ್ಲಿ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಈ ಹಿಂದೆ ಎರಡು ಚಿರತೆಗಳನ್ನು ಸೆರೆಹಿಡಿಯಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಇತ್ತೀಚೆಗೆ ಮಕ್ಕಳ ಮೇಲೆ ಎರಡು ಚಿರತೆಗಳು ದಾಳಿ ನಡೆಸಿದ ಪ್ರಕರಣ ಬೆಳಕಿಗೆ ಬಂದಿತ್ತು. ಬಾಲಕನ ಮೇಲೆ ದಾಳಿ ನಡೆಸಿದ ಚಿರತೆಯನ್ನು ಈ ಹಿಂದೆ ಸೆರೆಹಿಡಿಯಲಾಗಿತ್ತು. ಇದೀಗ ಆದಾದ ಮೂರು ದಿನಗಳ ನಂತರ ಮೂರನೇ ಚಿರತೆಯನ್ನು ಸೆರೆಹಿಡಿಯಲಾಗಿದೆ. 

'ನಾವು ಮೂರನೇ ಚಿರತೆಯನ್ನು ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಸೆರೆಹಿಡಿದಿದ್ದೇವೆ. ಅದೇ ಸ್ಥಳದಲ್ಲಿ ಎರಡನೇ ಚಿರತೆಯನ್ನು ಸೆರೆಹಿಡಿಯಲಾಗಿತ್ತು. ಸುಮಾರು ಐದು ವರ್ಷದ ಗಂಡು ಚಿರತೆ ಇದಾಗಿದೆ ಎಂದು ತಿರುಪತಿ ವಿಭಾಗೀಯ ಅರಣ್ಯಾಧಿಕಾರಿ (ಡಿಎಫ್ಒ) ಎ ಶ್ರೀನಿವಾಸುಲು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಈಗ ಸೆರೆಹಿಡಿದಿರುವ ಚಿರತೆಯನ್ನು ಶ್ರೀ ವೆಂಕಟೇಶ್ವರ ಝೂಲಾಜಿಕಲ್ ಪಾರ್ಕ್‌ನಲ್ಲಿ (ತಿರುಪತಿ ಮೃಗಾಲಯ) 10 ದಿನಗಳವರೆಗೆ ಕ್ವಾರಂಟೈನ್‌ನಲ್ಲಿ ಇಡಲಾಗುವುದು ಮತ್ತು ಮಾನವ ಮಾಂಸವನ್ನು ಸೇವಿಸಿದೆಯೇ ಎಂದು ಪರಿಶೀಲಿಸಲು ಡಿಎನ್‌ಎ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಹೇಳಿದರು.

ಈಮಧ್ಯೆ, ಎರಡನೇ ಚಿರತೆಯ ಡಿಎನ್‌ಎ ವಿಶ್ಲೇಷಣೆಯ ವರದಿಗಾಗಿ ಇಲಾಖೆ ಇನ್ನೂ ಕಾಯುತ್ತಿದೆ. ಎರಡೂ ಚಿರತೆಗಳ ಡಿಎನ್ಎ ವಿಶ್ಲೇಷಣೆಯ ವರದಿಯನ್ನು ಪರಿಶೀಲಿಸಿದರೆ ಇತ್ತೀಚೆಗೆ ಅಪ್ರಾಪ್ತ ಬಾಲಕಿ ಮೇಲೆ ಯಾವ ಚಿರತೆ ದಾಳಿ ಮಾಡಿದೆ ಎಂಬುದು ಖಚಿತವಾಗಲಿದೆ ಎಂದು ಅವರು ಹೇಳಿದರು.

ತಿರುಮಲಕ್ಕೆ ಹೋಗುವ ಕಾಲ್ನಡಿಗೆ ಮಾರ್ಗದಲ್ಲಿ ಚಿರತೆಗಳ ಚಲನವಲನದ ಇಲಾಖೆ ನಿಗಾವಹಿಸಲಾಗುವುದು ಎಂದು ಶ್ರೀನಿವಾಸಲು ಹೇಳಿದರು.

ಬಾಲಕನ ಮೇಲೆ ದಾಳಿ ನಡೆಸಿದ ನಂತರ ಸೆರೆ ಸಿಕ್ಕ ಮೊದಲ ಚಿರತೆಯನ್ನು ಸುಮಾರು 40 ಕಿಮೀ ದೂರದ ಬಾಕರಾಪೇಟದಲ್ಲಿ ಬಿಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT