ರಾಹುಲ್ ಗಾಂಧಿ 
ದೇಶ

ನೆಹರು ಮ್ಯೂಸಿಯಂ ಮರುನಾಮಕರಣ: ನೆಹರೂ ಅವರ ಗುರುತು ಅವರ ಕೆಲಸವೇ ಹೊರತು ಅವರ ಹೆಸರಲ್ಲ- ರಾಹುಲ್ ಗಾಂಧಿ

ನೆಹರೂ ಮ್ಯೂಸಿಯಂ ಅನ್ನು ಪ್ರಧಾನಿ ಮ್ಯೂಸಿಯಂ ಎಂದು ಮರುನಾಮಕರಣ ಮಾಡುವ ವಿವಾದದಲ್ಲಿ ಮೋದಿ ಸರ್ಕಾರ ತೀವ್ರವಾಗಿ ಇಕ್ಕಟ್ಟಿಗೆ ಸಿಲುಕುತ್ತಿದೆ. ಈ ನಿರ್ಧಾರದ ಬಗ್ಗೆ ಕಾಂಗ್ರೆಸ್ ತುಂಬಾ ಆಕ್ರಮಣಕಾರಿಯಾಗಿದೆ.

ನವದೆಹಲಿ: ನೆಹರೂ ಮ್ಯೂಸಿಯಂ ಅನ್ನು ಪ್ರಧಾನಿ ಮ್ಯೂಸಿಯಂ ಎಂದು ಮರುನಾಮಕರಣ ಮಾಡುವ ವಿವಾದದಲ್ಲಿ ಮೋದಿ ಸರ್ಕಾರ ತೀವ್ರವಾಗಿ ಇಕ್ಕಟ್ಟಿಗೆ ಸಿಲುಕುತ್ತಿದೆ. ಈ ನಿರ್ಧಾರದ ಬಗ್ಗೆ ಕಾಂಗ್ರೆಸ್ ತುಂಬಾ ಆಕ್ರಮಣಕಾರಿಯಾಗಿದೆ. ಇನ್ನು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಕೂಡ ಈ ವಿಷಯದಲ್ಲಿ ಪ್ರತಿಕ್ರಿಯಿಸಿದ್ದು ನೇರವಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಲಡಾಖ್‌ಗೆ ತೆರಳಿರುವ ರಾಹುಲ್ ಗಾಂಧಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನೆಹರೂ ಅವರು ಕೇವಲ ಅವರ ಹೆಸರಿನಿಂದ ಅಲ್ಲ, ಅವರ ಕೆಲಸದಿಂದ ಪರಿಚಿತರಾಗಿದ್ದಾರೆ ಎಂದು ಹೇಳಿದರು.

ವಿವಾದದ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನಡೆಯುತ್ತಿರುವ ವಾಗ್ಯುದ್ಧದ ಒಂದು ದಿನದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಜವಾಹರಲಾಲ್ ನೆಹರೂ ಅವರ ದೈತ್ಯ ಕೊಡುಗೆಗಳನ್ನು ಎಂದಿಗೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದರು.

ಆಗಸ್ಟ್ 14ರಂದು ತೀನ್‌ಮೂರ್ತಿಯಲ್ಲಿರುವ ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯದ ಹೆಸರನ್ನು ಅಧಿಕೃತವಾಗಿ ಪ್ರಧಾನ ಮಂತ್ರಿ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಬದಲಾಯಿಸಲಾಯಿತು.

ಕಾಂಗ್ರೆಸ್ ಟೀಕೆ ನಡುವೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಿಜೆಪಿ, ವಸ್ತುಸಂಗ್ರಹಾಲಯವು ನೆಹರೂ ಅವರ ಮೇಲೆ ಕೇಂದ್ರೀಕರಿಸಿಲ್ಲ. ಇದುವರೆಗಿನ ಎಲ್ಲಾ ಪ್ರಧಾನಿಗಳ ಇತಿಹಾಸವನ್ನು ಕೇಂದ್ರೀಕರಿಸಿದೆ. ಆದರೆ ಇದಕ್ಕೂ ಮೊದಲು ಬೇರೆ ಯಾವುದೇ ಪ್ರಧಾನಿಗಳಿಗೆ ಸ್ಥಾನವಿಲ್ಲ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

SCROLL FOR NEXT