ಮೃತ ಪತ್ರಕರ್ತ ವಿಮಲ್ ಯಾದವ್ 
ದೇಶ

ಬಿಹಾರ: ದೈನಿಕ್ ಜಾಗರಣ್ ಪತ್ರಕರ್ತನ ಹತ್ಯೆ ಪ್ರಕರಣ; ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಸ್ಥಳೀಯ ಪತ್ರಕರ್ತನ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ.

ಪಾಟ್ನಾ: ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಸ್ಥಳೀಯ ಪತ್ರಕರ್ತನ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ.

ಶುಕ್ರವಾರ ಮುಂಜಾನೆ ಅರಾರಿಯಾ ಜಿಲ್ಲೆಯಲ್ಲಿ ಪತ್ರಕರ್ತರೊಬ್ಬರನ್ನು ಮನೆಯಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪತ್ರಕರ್ತನನ್ನು ವಿಮಲ್ ಯಾದವ್ ಎಂದು ಗುರುತಿಸಲಾಗಿದ್ದು, ದೈನಿಕ್ ಜಾಗರಣದಲ್ಲಿ ಉದ್ಯೋಗಿಯಾಗಿದ್ದರು. ರಾಣಿಗಂಜ್‌ನಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದ ನಾಲ್ವರು ಆತನ ಎದೆಗೆ ಗುಂಡು ಹಾರಿಸಿ ಶುಕ್ರವಾರ ಹತ್ಯೆಗೈದಿದ್ದರು.

ದುಷ್ಕರ್ಮಿಗಳು ಇಂದು ಬೆಳಗಿನ ಜಾವ 5.30 ರ ಸುಮಾರಿಗೆ ಯಾದವ್ ಅವರ ಮನೆಗೆ ತೆರಳಿದ್ದು, ಅವರು ಗೇಟ್ ತೆರೆದ ತಕ್ಷಣ ಗುಂಡಿನ ದಾಳಿ ನಡೆಸಿದ್ದಾರೆ" ಎಂದು ಬಿಹಾರ ಪೊಲೀಸರು ಟ್ವೀಟ್ ಮಾಡಿದ್ದರು.

ಈ ಕುರಿತು ಮಾತನಾಡಿದ ಹಿರಿಯ ಫಿಲೊಸ್ ಅಧಿಕಾರಿ ಬಿಮಲ್ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ ಎಂಟು ಮಂದಿ ಕೊಲೆ ಆರೋಪಿಗಳನ್ನು ಹೆಸರಿಸಲಾಗಿದ್ದು, ಈ ಪೈಕಿ ನಾಲ್ವರನ್ನು ಇಂದು ಮುಂಜಾನೆ ವಿಚಾರಣೆಗೊಳಪಡಿಸಲಾಗಿದೆ. ಆರೋಪಿಗಳು 2019 ರಲ್ಲಿ ವಿಮಲ್ ಯಾದವ್ ಅವರ ಸಹೋದರನನ್ನು ಸಹ ಕೊಲೆ ಮಾಡಿದ್ದರು. ಆ ಪ್ರಕರಣದಲ್ಲಿ ಬಿಮಲ್ ಏಕೈಕ ಸಾಕ್ಷಿಯಾಗಿದ್ದರು ಮತ್ತು ಅವರ ಸಾಕ್ಷ್ಯವನ್ನು ನಾಶಪಡಿಸಲು ಈ ಹತ್ಯೆ ನಡೆಸಿದರೇ ಎಂಬುದು ತನಿಖೆ ಬಳಿಕ ಗೊತ್ತಾಗಲಿದೆ ಎಂದಿದ್ದಾರೆ.

ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ, ಕಾನೂನು ಮತ್ತು ಸುವ್ಯವಸ್ಥೆಯನ್ನು ಜಾರಿಗೊಳಿಸುವಲ್ಲಿ ವಿಫಲವಾದ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT