ಶ್ರೀನಗರ: ಲಡಾಖ್ನ ಲೇಹ್ ಜಿಲ್ಲೆಯಲ್ಲಿ ಸೇನಾ ವಾಹನವೊಂದು ಆಳವಾದ ಕಂದರಕ್ಕೆ ಉರುಳಿ ಬಿದ್ದಿದ್ದು ಒಂಬತ್ತು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತರ ಪೈಕಿ ಓರ್ವ ಜೂನಿಯರ್ ಕಮಿಷನ್ಡ್ ಆಫೀಸರ್(ಜೆಸಿಒ) ಹಾಗೂ ಏಳು ಮಂದಿ ಸೈನಿಕರು ಎಂದು ತಿಳಿದುಬಂದಿದೆ. ಇನ್ನು ಅಪಘಾತದಲ್ಲಿ ಮತ್ತೊಬ್ಬ ಅಧಿಕಾರಿ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಸೈಬರ್ ಅಪರಾಧ ನಿಯಂತ್ರಣದತ್ತ ಕೇಂದ್ರ ಗಮನಹರಿಸುತ್ತಿದೆ: ಜಿ20 ಡಿಜಿಟಲ್ ಎಕಾನಮಿ ಸಚಿವರ ಸಭೆಯಲ್ಲಿ ಅಶ್ವಿನಿ ವೈಷ್ಣವ್
ಶನಿವಾರ ಸಂಜೆ 6:30 ರ ಸುಮಾರಿಗೆ ದಕ್ಷಿಣ ಲಡಾಖ್ನ ನ್ಯೋಮಾದಲ್ಲಿ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.