ಸಾಂದರ್ಭಿಕ ಚಿತ್ರ 
ದೇಶ

ಚೆನ್ನೈ: ಸೊಳ್ಳೆ ಬತ್ತಿಯಿಂದ ಹೊತ್ತಿಕೊಂಡ ಬೆಂಕಿ; ಅಜ್ಜಿ, ಮೂವರು ಮೊಮ್ಮಕ್ಕಳು ಸಾವು

ಮನಾಲಿ ಸಮೀಪದ ಮಾಥುರ್ ಎಂಎಂಡಿಎಯಲ್ಲಿ ಮನೆಯೊಂದರಲ್ಲಿ ಸೊಳ್ಳೆ ಬತ್ತಿಯಿಂದ ಉಂಟಾದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಉಸಿರುಗಟ್ಟಿ ವೃದ್ಧೆ ಹಾಗೂ ಆಕೆಯ ಮೂವರು ಮೊಮ್ಮಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ...

ಚೆನ್ನೈ: ಮನಾಲಿ ಸಮೀಪದ ಮಾಥುರ್ ಎಂಎಂಡಿಎಯಲ್ಲಿ ಮನೆಯೊಂದರಲ್ಲಿ ಸೊಳ್ಳೆ ಬತ್ತಿಯಿಂದ ಉಂಟಾದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಉಸಿರುಗಟ್ಟಿ ವೃದ್ಧೆ ಹಾಗೂ ಆಕೆಯ ಮೂವರು ಮೊಮ್ಮಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮೃತ ಮಹಿಳೆಯನ್ನು ಸಂತಾನಲಕ್ಷ್ಮಿ(65) ಎಂದು, ಆಕೆಯ ಮೊಮ್ಮಗಳಾದ ಸಂಧ್ಯಾ, ಪ್ರಿಯಾ ರಕ್ಷಿತಾ ಮತ್ತು ಪವಿತ್ರಾ ಎಂದು ಗುರುತಿಸಲಾಗಿದೆ. 8 ರಿಂದ 10 ವರ್ಷದ ಈ ಮೂವರು ಬಾಲಕಿಯರು ಬೆಂಕಿ ಹೊತ್ತಿಕೊಂಡಾಗ ತಮ್ಮ ಮನೆಯಲ್ಲಿ ಮಲಗಿದ್ದರು.

ಇಂದು ಬೆಳಗ್ಗೆ ಮನೆಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ನೆರೆಹೊರೆಯವರು ಪೊಲೀಸರಿಗೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ಎಲ್ಲಾ ನಾಲ್ವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು ಮತ್ತು ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿದರು. ಆದರೆ ವೈದ್ಯರು ಅವರು ಮೃತಪಟ್ಟಿದ್ದಾರೆ" ಎಂದು ಘೋಷಿಸಿದ್ದಾರೆ.

ಕುಟುಂಬ ಸದಸ್ಯರು ಮಲಗಿದ್ದ ಕೊಠಡಿಯಲ್ಲಿ ಇರಿಸಲಾಗಿದ್ದ ಸೊಳ್ಳೆ ಬತ್ತಿ ಕೆಲವು ನೈಲಾನ್ ವಸ್ತುಗಳ ಮೇಲೆ ಬಿದ್ದು ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಕುಟುಂಬ ಸದಸ್ಯರು ನಿದ್ರೆಯಲ್ಲಿ ಹೊಗೆ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT