ಚಂದ್ರನ ಮೇಲೆ ಇಳಿಯಲಿದೆ ISRO ನೌಕೆ 
ದೇಶ

ಚಂದ್ರಯಾನ 3: ಆಗಸ್ಟ್ 23 ಸಂಜೆ 6:04 ಕ್ಕೆ ಚಂದ್ರನ ಮೇಲೆ ಇಳಿಯಲಿದೆ ISRO ನೌಕೆ

ಚಂದ್ರಯಾನ–3ರ ಎರಡನೆಯ ಮತ್ತು ಕೊನೆಯ ಡಿ– ಬೂಸ್ಟಿಂಗ್‌ ಕಾರ್ಯ (ಲ್ಯಾಂಡರ್‌ನ ವೇಗ ತಗ್ಗಿಸುವ ಪ್ರಕ್ರಿಯೆ) ಇಂದು (ಭಾನುವಾರ) ಬೆಳಿಗ್ಗೆ ಯಶಸ್ವಿಯಾಗಿ ಪೂರ್ಣಗೊಂಡ ಬೆನ್ನಲ್ಲೇ ಚಂದ್ರಯಾನ 3 ನೌಕೆಯ ಚಂದ್ರನ ಮೇಲ್ಮೈ ಮೇಲೆ ಲ್ಯಾಂಡಿಂಗ್ ಆಗುವ ದಿನಾಂಕ ಘೋಷಣೆ ಮಾಡಿದೆ.

ಶ್ರೀಹರಿಕೋಟಾ: ಚಂದ್ರಯಾನ–3ರ ಎರಡನೆಯ ಮತ್ತು ಕೊನೆಯ ಡಿ– ಬೂಸ್ಟಿಂಗ್‌ ಕಾರ್ಯ (ಲ್ಯಾಂಡರ್‌ನ ವೇಗ ತಗ್ಗಿಸುವ ಪ್ರಕ್ರಿಯೆ) ಇಂದು (ಭಾನುವಾರ) ಬೆಳಿಗ್ಗೆ ಯಶಸ್ವಿಯಾಗಿ ಪೂರ್ಣಗೊಂಡ ಬೆನ್ನಲ್ಲೇ ಚಂದ್ರಯಾನ 3 ನೌಕೆಯ ಚಂದ್ರನ ಮೇಲ್ಮೈ ಮೇಲೆ ಲ್ಯಾಂಡಿಂಗ್ ಆಗುವ ದಿನಾಂಕ ಘೋಷಣೆ ಮಾಡಿದೆ.

ನೌಕೆಯು ಚಂದ್ರನ ಅಂತಿಮ ಕಕ್ಷೆಯನ್ನು ತಲುಪಿದ್ದು, ದಕ್ಷಿಣ ದ್ರುವದಲ್ಲಿ ಲ್ಯಾಂಡ್‌ ಆಗಬೇಕಿದೆ. ಇದಕ್ಕೆ ಇದೀಗ ಇಸ್ರೋ ಮುಹೂರ್ತ ನಿಗದಿಪಡಿಸಿದ್ದು, ಆಗಸ್ಟ್ 23 ಬುಧವಾರ ಸಂಜೆ 6:04 ಕ್ಕೆ ನೌಕೆ ಚಂದ್ರನ ಮೇಲೆ ಲ್ಯಾಂಡ್ ಆಗಲಿದೆ.

ಪ್ರಸ್ತುತ ವಿಕ್ರಮ್ ಲ್ಯಾಂಡರ್ ಚಂದ್ರನಿಗೆ ಅತ್ಯಂತ ಸಮೀಪವಿರುವ ಬಿಂದು 25 ಕಿಮೀ ಮತ್ತು ಚಂದ್ರನಿಂದ 134 ಕಿಮೀ ದೂರದ ಕಕ್ಷೆಯನ್ನು ತಲುಪಿದೆ. ಈ ಕಕ್ಷೆಯಿಂದಲೇ ದಕ್ಷಿಣ ಧ್ರುವ ಪ್ರದೇಶದಲ್ಲಿ ಸಾಫ್ಟ್ ಲ್ಯಾಂಡಿಂಗ್ ಪ್ರಯತ್ನಿಸುತ್ತದೆ ಎಂದು ಇಸ್ರೊ ಹೇಳಿದೆ.

ಎರಡನೇ ಮತ್ತು ಅಂತಿಮ ಡಿ–ಬೂಸ್ಟಿಂಗ್ ಕಾರ್ಯಾಚರಣೆಯು ಚಂದ್ರನ ಕಕ್ಷೆಯನ್ನು 25 km x 134 km ನಷ್ಟು ಸನಿಹಕ್ಕೆ ತಲುಪಿದೆ. ಮಾಡ್ಯೂಲ್ ಆಂತರಿಕ ತಪಾಸಣೆಗೆ ಒಳಗಾಗುತ್ತದೆ ಮತ್ತು ನಿರ್ದಿಷ್ಟಪಡಿಸಿದ ಲ್ಯಾಂಡಿಂಗ್ ಸೈಟ್‌ನಲ್ಲಿ ಸೂರ್ಯೋದಯಕ್ಕಾಗಿ ಕಾಯುತ್ತಿದೆ. ಚಂದ್ರನ ಮೇಲೆ ಇಳಿಯುವ ಪ್ರಕ್ರಿಯೆಯು ಆಗಸ್ಟ್ 23, 2023 ರಂದು ಬೆಳಿಗ್ಗೆ ಸ್ಥಳೀಯ ಕಾಲಮಾನ 17.45 ಗಂಟೆಗಳಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ. ಲ್ಯಾಂಡರ್ ವಿಕ್ರಮ್ ಸ್ವಯಂಚಾಲಿತ ಕ್ರಮದಲ್ಲಿ ಚಂದ್ರನ ಕಕ್ಷೆಯಲ್ಲಿ ಇಳಿಯುತ್ತಿದೆ; ಹೇಗೆ ಹೋಗಬೇಕೆಂದು ಅದು ತಾನಾಗಿಯೇ ನಿರ್ಧರಿಸುತ್ತದೆ ಎಂದು ಇಸ್ರೊ ಟ್ವಿಟರ್ ನಲ್ಲಿ ತಿಳಿಸಿದೆ. 

25 ಕಿಲೋ ಮೀಟರ್ x 134 ಕಿಲೋ ಮೀಟರ್ ಕಕ್ಷೆ ಚಂದ್ರನ ಸಮೀಪದ ಕಕ್ಷೆಯಾಗಿದ್ದು ಚಂದ್ರನ ಮೇಲೆ ಇಳಿಯುವ ಪ್ರಕ್ರಿಯೆ ಆಗಸ್ಟ್ 23ರಂದು ನಡೆಯಲಿದೆ. ಹೀಗಾಗಿ ಇಡೀ ಜಗತ್ತು ಭಾರತದ ಕಡೆ ಕಣ್ಣಿಟ್ಟು ಕಾಯುತ್ತಿದೆ.

ಚಂದ್ರನ ಮೇಲೆ ಲ್ಯಾಂಡಿಂಗ್ ಹೇಗೆ?
ಈ ಬಾರಿ ಇಸ್ರೋ ಅಂತ್ಯಾಧುನಿಕ ತಂತ್ರಜ್ಞಾನ ಬಳಸಿ ಚಂದ್ರನ ಯೋಜನೆಗೆ ಸಿದ್ಧತೆ ನಡೆಸಿತ್ತು. ಹೀಗಾಗಿ 'ಚಂದ್ರಯಾನ-3' ಲ್ಯಾಂಡರ್ ಹೈಫೈ ಆಗಿದೆ. ಲ್ಯಾಂಡರ್ ಪೊಸಿಷನ್ ಡಿಟೆಕ್ಷನ್ ಕ್ಯಾಮೆರಾ (LPDC) ಕೂಡ ಅತ್ಯಾಧುನಿಕ ತಂತ್ರಜ್ಞಾನವೇ ಆಗಿದೆ. ಇದು ವಿಕ್ರಮ್ ಲ್ಯಾಂಡರ್ ತನಗಾಗಿ ಸರಿಯಾದ ಮತ್ತು ಸಮತಟ್ಟು ಲ್ಯಾಂಡಿಂಗ್ ಸ್ಥಳ ಹುಡುಕಲು ಸಹಾಯ ಮಾಡುತ್ತದೆ. ಕ್ಯಾಮೆರಾದ ಸಹಾಯದಿಂದ ವಿಕ್ರಮ್ ಲ್ಯಾಂಡರ್ ಎಲ್ಲಿ ಇಳಿಯುತ್ತಿದೆ? ಹೇಗೆ ಇಳಿಯುತ್ತಿದೆ? ಎಂಬುದನ್ನು ನೋಡಬಹುದು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT