ರಾಜೀವ್ ಗಾಂಧಿಗೆ ನಮನ 
ದೇಶ

ರಾಜೀವ್ ಗಾಂಧಿ ಜನ್ಮ ಜಯಂತಿ: ಪ್ರಧಾನಿ ಮೋದಿ ಗೌರವ ನಮನ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 79ನೇ ಜನ್ಮದಿನದ ಅಂಗವಾಗಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. 

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 79ನೇ ಜನ್ಮದಿನದ ಅಂಗವಾಗಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. 

ರಾಜೀವ್ ಗಾಂಧಿಯವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ನಮನಗಳು.  ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ನನ್ನ ಶ್ರದ್ಧಾಂಜಲಿ" ಎಂದು ಮೋದಿ ಅವರು ಟ್ವೀಟ್ ಮಾಡಿದ್ದಾರೆ.

1984ರಿಂದ 1989ರವರೆಗೆ ದೇಶದ ಪ್ರಧಾನ ಮಂತ್ರಿಯಾಗುವ ಮೂಲಕ ರಾಜೀವ್ ಗಾಂಧಿ ಅವರು 40ನೇ ವಯಸ್ಸಿಗೆ ಭಾರತದ ಯುವ ಪ್ರಧಾನಮಂತ್ರಿಯಾದರು. ಅವರು ವಿಶ್ವದ ಸರ್ಕಾರದ ಅತ್ಯಂತ ಕಿರಿಯ ಮುಖ್ಯಸ್ಥರೆಂಬ ಹೆಗ್ಗಳಿಕೆ ಪಡೆದರು. ಅವರ ತಾಯಿ ಶ್ರೀಮತಿ ಇಂದಿರಾ ಗಾಂಧಿಯವರು 1966ರಲ್ಲಿ 48ನೇ ವಯಸ್ಸಿನಲ್ಲಿ ಪ್ರಧಾನಮಂತ್ರಿಯಾದರು. ಇವರ ತಾತ ಪಂಡಿತ್ ಜವಾಹರ್ಲಾಲ್ ನೆಹರು ಅವರು 58ನೇ ವಯಸ್ಸಿನಲ್ಲಿಯೇ ಸ್ವತಂತ್ರ ಭಾರತದ ಪ್ರಥಮ ಪ್ರಧಾನಮಂತ್ರಿಯಾಗಿ 17 ವರ್ಷಗಳ ಸುದೀರ್ಘ ಕಾಲ ಆಳಿದರು.

ರಾಷ್ಟ್ರದಲ್ಲಿ ಹೊಸ ಪೀಳಿಗೆ ಪರಿವರ್ತನೆಯ ಮುನ್ಸೂಚಕರಾದ ರಾಜೀವ್ ಗಾಂಧಿ ಅವರು ದೇಶದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಜನಾದೇಶ ಪಡೆದರು. ಹತ್ಯೆಗೀಡಾದ ತಮ್ಮ ತಾಯಿಯ ಶೋಕಾಚರಣೆ ಪೂರ್ಣಗೊಂಡ ತಕ್ಷಣವೇ ಅವರು ಲೋಕಸಭಾ ಚುನಾವಣೆಗೆ ಆದೇಶ ನೀಡಿದರು. ಈ ಚುನಾವಣೆಯಲ್ಲಿ, ಕಾಂಗ್ರೆಸ್ ಈ ಹಿಂದಿನ ಏಳು ಚುನಾವಣೆಗಳಲ್ಲೇ ಅತ್ಯಂತ ಜನಪ್ರಿಯ ಮತದ ದೊಡ್ಡ ಭಾಗವನ್ನು ಗಳಿಸಿತು ಹಾಗೂ 508 ಲೋಕಸಭಾ ಕ್ಷೇತ್ರಗಳಲ್ಲಿ 401 ಕ್ಷೇತ್ರಗಳಲ್ಲಿ ದಾಖಲೆ ಗೆಲುವನ್ನು ಪಡೆಯಿತು.

1991ರಿಂದ ಎಲ್ ಟಿಟಿಇ ಆತ್ಮಹತ್ಯಾ ಬಾಂಬ್ ದಾಳಿಕೋರರಿಂದ ರಾಜೀವ್ ಗಾಂಧಿ ಹತ್ಯೆಗೀಡಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT