ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರ: ಮುಳುಗುತ್ತಿದ್ದ ದೋಣಿಯಿಂದ ಏಳು ಮೀನುಗಾರರ ರಕ್ಷಣೆ!

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಕರಾವಳಿಯಲ್ಲಿ ಅರಬ್ಬಿ ಸಮುದ್ರದಲ್ಲಿ ಮುಳುಗುತ್ತಿದ್ದ ದೋಣಿಯಿಂದ ಏಳು ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ಭಾರತೀಯ ಕರಾವಳಿ ರಕ್ಷಣಾ ಪಡೆಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ರಾಯಗಢ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಕರಾವಳಿಯಲ್ಲಿ ಅರಬ್ಬಿ ಸಮುದ್ರದಲ್ಲಿ ಮುಳುಗುತ್ತಿದ್ದ ದೋಣಿಯಿಂದ ಏಳು ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ಭಾರತೀಯ ಕರಾವಳಿ ರಕ್ಷಣಾ ಪಡೆಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಆಗಸ್ಟ್ 17 ರಂದು ನೀರಿನಲ್ಲಿ ಮುಳುಗಿದ ದೋಣಿಯ ಅವಶೇಷಗಳು ಇಂದು ಬೆಳಿಗ್ಗೆ ರಾಯಗಡ ಜಿಲ್ಲೆಯ ದಿವೇಗರ್ ತೀರದಲ್ಲಿ ಪತ್ತೆಯಾಗಿವೆ. ಗುರುವಾರ ಸಂಜೆ 4 ಗಂಟೆ ಸುಮಾರಿಗೆ ದಿಘಿ ಅಡ್ಗಾಂವ್ ಬಳಿ ಈ ಘಟನೆ ಸಂಭವಿಸಿದ್ದು, ಏಳು ಮೀನುಗಾರರ ಸಿಬ್ಬಂದಿ ತಮ್ಮ ಬೋಟ್ "ಬಾನಾ ಸಾಗರ್" ನಲ್ಲಿ ಒಂಬತ್ತು ಮೈಲುಗಳಷ್ಟು ಸಮುದ್ರದೊಳಗೆ ಹೋದಾಗ ಇದಕ್ಕಿದ್ದಂತೆ  ದೋಣಿ ಮುಳುಗಲು ಪ್ರಾರಂಭಿಸಿದ್ದು, ಸಮೀಪದಲ್ಲಿದ್ದ ಗುಜರಾತ್‌ ನಿಂದ ಆಗಮಿಸಿದ್ದ ಎರಡು ಟ್ರಾಲರ್‌ಗಳು ಏಳು ಮೀನುಗಾರರನ್ನು ರಕ್ಷಿಸಿದವು ಎಂದು ಅಧಿಕಾರಿ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಕರಾವಳಿ ಕಾವಲು ಪಡೆ ತಲುಪುವಷ್ಟರಲ್ಲಿ ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರಗೆ ತರಲಾಯಿತು. ಆದರೆ, ಮುಳುಗುತ್ತಿದ್ದ ದೋಣಿಯನ್ನು ಆ ದಿನ ರಕ್ಷಿಸಲು ಸಾಧ್ಯವಾಗಲಿಲ್ಲ. ಭಾನುವಾರ ಬೆಳಗ್ಗೆ ದಿವೇಗರ್ ತೀರದಲ್ಲಿ ಕೊಚ್ಚಿ ಹೋದ ದೋಣಿಯ ಅವಶೇಷಗಳು ಪತ್ತೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 8 ಮಂದಿ ಸಾವು; 105 ಭಾರತೀಯರು ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!