ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರ: ಮುಳುಗುತ್ತಿದ್ದ ದೋಣಿಯಿಂದ ಏಳು ಮೀನುಗಾರರ ರಕ್ಷಣೆ!

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಕರಾವಳಿಯಲ್ಲಿ ಅರಬ್ಬಿ ಸಮುದ್ರದಲ್ಲಿ ಮುಳುಗುತ್ತಿದ್ದ ದೋಣಿಯಿಂದ ಏಳು ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ಭಾರತೀಯ ಕರಾವಳಿ ರಕ್ಷಣಾ ಪಡೆಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ರಾಯಗಢ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಕರಾವಳಿಯಲ್ಲಿ ಅರಬ್ಬಿ ಸಮುದ್ರದಲ್ಲಿ ಮುಳುಗುತ್ತಿದ್ದ ದೋಣಿಯಿಂದ ಏಳು ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ಭಾರತೀಯ ಕರಾವಳಿ ರಕ್ಷಣಾ ಪಡೆಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಆಗಸ್ಟ್ 17 ರಂದು ನೀರಿನಲ್ಲಿ ಮುಳುಗಿದ ದೋಣಿಯ ಅವಶೇಷಗಳು ಇಂದು ಬೆಳಿಗ್ಗೆ ರಾಯಗಡ ಜಿಲ್ಲೆಯ ದಿವೇಗರ್ ತೀರದಲ್ಲಿ ಪತ್ತೆಯಾಗಿವೆ. ಗುರುವಾರ ಸಂಜೆ 4 ಗಂಟೆ ಸುಮಾರಿಗೆ ದಿಘಿ ಅಡ್ಗಾಂವ್ ಬಳಿ ಈ ಘಟನೆ ಸಂಭವಿಸಿದ್ದು, ಏಳು ಮೀನುಗಾರರ ಸಿಬ್ಬಂದಿ ತಮ್ಮ ಬೋಟ್ "ಬಾನಾ ಸಾಗರ್" ನಲ್ಲಿ ಒಂಬತ್ತು ಮೈಲುಗಳಷ್ಟು ಸಮುದ್ರದೊಳಗೆ ಹೋದಾಗ ಇದಕ್ಕಿದ್ದಂತೆ  ದೋಣಿ ಮುಳುಗಲು ಪ್ರಾರಂಭಿಸಿದ್ದು, ಸಮೀಪದಲ್ಲಿದ್ದ ಗುಜರಾತ್‌ ನಿಂದ ಆಗಮಿಸಿದ್ದ ಎರಡು ಟ್ರಾಲರ್‌ಗಳು ಏಳು ಮೀನುಗಾರರನ್ನು ರಕ್ಷಿಸಿದವು ಎಂದು ಅಧಿಕಾರಿ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಕರಾವಳಿ ಕಾವಲು ಪಡೆ ತಲುಪುವಷ್ಟರಲ್ಲಿ ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರಗೆ ತರಲಾಯಿತು. ಆದರೆ, ಮುಳುಗುತ್ತಿದ್ದ ದೋಣಿಯನ್ನು ಆ ದಿನ ರಕ್ಷಿಸಲು ಸಾಧ್ಯವಾಗಲಿಲ್ಲ. ಭಾನುವಾರ ಬೆಳಗ್ಗೆ ದಿವೇಗರ್ ತೀರದಲ್ಲಿ ಕೊಚ್ಚಿ ಹೋದ ದೋಣಿಯ ಅವಶೇಷಗಳು ಪತ್ತೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

SCROLL FOR NEXT