ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರ: ಮುಳುಗುತ್ತಿದ್ದ ದೋಣಿಯಿಂದ ಏಳು ಮೀನುಗಾರರ ರಕ್ಷಣೆ!

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಕರಾವಳಿಯಲ್ಲಿ ಅರಬ್ಬಿ ಸಮುದ್ರದಲ್ಲಿ ಮುಳುಗುತ್ತಿದ್ದ ದೋಣಿಯಿಂದ ಏಳು ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ಭಾರತೀಯ ಕರಾವಳಿ ರಕ್ಷಣಾ ಪಡೆಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ರಾಯಗಢ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಕರಾವಳಿಯಲ್ಲಿ ಅರಬ್ಬಿ ಸಮುದ್ರದಲ್ಲಿ ಮುಳುಗುತ್ತಿದ್ದ ದೋಣಿಯಿಂದ ಏಳು ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ಭಾರತೀಯ ಕರಾವಳಿ ರಕ್ಷಣಾ ಪಡೆಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಆಗಸ್ಟ್ 17 ರಂದು ನೀರಿನಲ್ಲಿ ಮುಳುಗಿದ ದೋಣಿಯ ಅವಶೇಷಗಳು ಇಂದು ಬೆಳಿಗ್ಗೆ ರಾಯಗಡ ಜಿಲ್ಲೆಯ ದಿವೇಗರ್ ತೀರದಲ್ಲಿ ಪತ್ತೆಯಾಗಿವೆ. ಗುರುವಾರ ಸಂಜೆ 4 ಗಂಟೆ ಸುಮಾರಿಗೆ ದಿಘಿ ಅಡ್ಗಾಂವ್ ಬಳಿ ಈ ಘಟನೆ ಸಂಭವಿಸಿದ್ದು, ಏಳು ಮೀನುಗಾರರ ಸಿಬ್ಬಂದಿ ತಮ್ಮ ಬೋಟ್ "ಬಾನಾ ಸಾಗರ್" ನಲ್ಲಿ ಒಂಬತ್ತು ಮೈಲುಗಳಷ್ಟು ಸಮುದ್ರದೊಳಗೆ ಹೋದಾಗ ಇದಕ್ಕಿದ್ದಂತೆ  ದೋಣಿ ಮುಳುಗಲು ಪ್ರಾರಂಭಿಸಿದ್ದು, ಸಮೀಪದಲ್ಲಿದ್ದ ಗುಜರಾತ್‌ ನಿಂದ ಆಗಮಿಸಿದ್ದ ಎರಡು ಟ್ರಾಲರ್‌ಗಳು ಏಳು ಮೀನುಗಾರರನ್ನು ರಕ್ಷಿಸಿದವು ಎಂದು ಅಧಿಕಾರಿ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಕರಾವಳಿ ಕಾವಲು ಪಡೆ ತಲುಪುವಷ್ಟರಲ್ಲಿ ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರಗೆ ತರಲಾಯಿತು. ಆದರೆ, ಮುಳುಗುತ್ತಿದ್ದ ದೋಣಿಯನ್ನು ಆ ದಿನ ರಕ್ಷಿಸಲು ಸಾಧ್ಯವಾಗಲಿಲ್ಲ. ಭಾನುವಾರ ಬೆಳಗ್ಗೆ ದಿವೇಗರ್ ತೀರದಲ್ಲಿ ಕೊಚ್ಚಿ ಹೋದ ದೋಣಿಯ ಅವಶೇಷಗಳು ಪತ್ತೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT