ಸಚಿನ್ ಪೈಲಟ್ 
ದೇಶ

ನಾವು ಪಕ್ಷದ ಸಿದ್ಧಾಂತವನ್ನು ಬಲಪಡಿಸುತ್ತೇವೆ, ಅದನ್ನು ಜನರ ಬಳಿಗೆ ಕೊಂಡೊಯ್ಯುತ್ತೇವೆ: ಸಿಡಬ್ಲ್ಯುಸಿ ಪುನರ್ ರಚನೆ ಬಳಿಕ ಸಚಿನ್ ಪೈಲಟ್

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು (ಸಿಡಬ್ಲ್ಯುಸಿ) ಪುನರ್ ರಚಿಸಿದ್ದು, ಸಮಿತಿಯಲ್ಲಿ ತಮ್ಮನ್ನು ಸದಸ್ಯರನ್ನಾಗಿ ಮಾಡಿದ್ದಕ್ಕೆ ಪಕ್ಷದ ಉನ್ನತ ನಾಯಕತ್ವಕ್ಕೆ ರಾಜಸ್ಥಾನದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಭಾನುವಾರ ಕೃತಜ್ಞತೆ ಸಲ್ಲಿಸಿದ್ದಾರೆ. 

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು (ಸಿಡಬ್ಲ್ಯುಸಿ) ಪುನರ್ ರಚಿಸಿದ್ದು, ಸಮಿತಿಯಲ್ಲಿ ತಮ್ಮನ್ನು ಸದಸ್ಯರನ್ನಾಗಿ ಮಾಡಿದ್ದಕ್ಕೆ ಪಕ್ಷದ ಉನ್ನತ ನಾಯಕತ್ವಕ್ಕೆ ರಾಜಸ್ಥಾನದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಭಾನುವಾರ ಕೃತಜ್ಞತೆ ಸಲ್ಲಿಸಿದ್ದಾರೆ. ಪಕ್ಷದ 'ಸಿದ್ಧಾಂತವನ್ನು ಬಲಪಡಿಸಲು' ಮತ್ತು ಅದನ್ನು ಇನ್ನಷ್ಟು ಬಲವಾಗಿ ಜನರ ಬಳಿಗೆ ಕೊಂಡೊಯ್ಯುವ ಪ್ರತಿಜ್ಞೆ ಮಾಡಿದ್ದಾರೆ.

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಮನಮೋಹನ್ ಸಿಂಗ್, ಶಶಿ ತರೂರ್, ನಾಸಿರ್ ಹುಸೇನ್, ಅಲ್ಕಾ ಲಂಬಾ, ಸುಪ್ರಿಯಾ ಶ್ರೀನಾಟೆ, ಪವನ್ ಖೇರಾ ಸೇರಿದಂತೆ 39 ಮಂದಿ ಕಾರ್ಯಕಾರಿ ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ. ಇದಲ್ಲದೆ ಪಟ್ಟಿಯಲ್ಲಿ 13 ವಿಶೇಷ ಆಹ್ವಾನಿತರು ಸೇರಿದಂತೆ 32 ಖಾಯಂ ಸದಸ್ಯರನ್ನು ಹೊಂದಿದೆ.

ಹೊಸ ಸಿಡಬ್ಲ್ಯುಸಿ ಸದಸ್ಯರ ಪಟ್ಟಿಯಲ್ಲಿ ಸಚಿನ್ ಪೈಲಟ್ ಕೂಡ ಸ್ಥಾನ ಪಡೆದಿದ್ದಾರೆ.

'ನನ್ನನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಮಾಡಿದ್ದಕ್ಕಾಗಿ ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಪಿಪಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ' ಎಂದು ಪೈಲಟ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

'ನಾವು ಕಾಂಗ್ರೆಸ್‌ನ ಸಂಪ್ರದಾಯಗಳು, ನೀತಿ ಮತ್ತು ಸಿದ್ಧಾಂತಗಳನ್ನು ಬಲಪಡಿಸುತ್ತೇವೆ. ಅವುಗಳನ್ನು ಹೆಚ್ಚು ಬಲವಾಗಿ ಜನರ ಬಳಿಗೆ ಕೊಂಡೊಯ್ಯುತ್ತೇವೆ ಎಂದು ಹೇಳಿದ್ದಾರೆ. 

ಈ ವರ್ಷದ ಕೊನೆಯಲ್ಲಿ ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಸಿಡಬ್ಲ್ಯುಸಿಯಲ್ಲಿ ಸಚಿನ್ ಪೈಲಟ್ ಅವರಿಗೆ ಸ್ಥಾನ ದೊರೆತಿದೆ. 

2018ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದಾಗಿನಿಂದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವೆ ಬಿನ್ನಾಭಿಪ್ರಾಯಗಳು ಮನೆಮಾಡಿವೆ. 

ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಲಹೆಯ ಮೇರೆಗೆ ಗೆಹ್ಲೋಟ್ ಅವರೊಂದಿಗಿನ ಮನಸ್ತಾಪವನ್ನು ಸಮಾಧಿ ಮಾಡಿದ್ದೇನೆ ಎಂದು ಪೈಲಟ್ ಕಳೆದ ತಿಂಗಳು ಸ್ಪಷ್ಟಪಡಿಸಿದ್ದರು. ವಿಧಾನಸಭೆ ಚುನಾವಣೆಗೆ ಹೋಗಲು ಸಾಮೂಹಿಕ ನಾಯಕತ್ವವೇ 'ಏಕೈಕ ಮಾರ್ಗ' ಎಂದು ಪ್ರತಿಪಾದಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT