ಗುಜರಾತ್: ಪೊಲೀಸ್ ದಾಳಿ ವೇಳೆ ಗುಂಪು ದಾಳಿ 
ದೇಶ

ಗುಜರಾತ್: ಪೊಲೀಸ್ ದಾಳಿ ವೇಳೆ ಗುಂಪು ದಾಳಿ, ವಾಹನ ಜಖಂ; 9 ಮಂದಿ ಬಂಧನ

ಗುಜರಾತ್ ನ ದಹೋದ್ ಜಿಲ್ಲೆಯಲ್ಲಿ ಹಸುಗಳನ್ನು ಕಸಾಯಿಖಾನೆಗೆ ಕರೆದೊಯ್ಯುತ್ತಿದ್ದಗ ನಡೆದ ಪೊಲೀಸ್ ದಾಳಿ ವೇಳೆ ಅವುಗಳನ್ನು ವಶಕ್ಕೆ ಪಡೆಯಲಾಗಿದ್ದು, ಗುಂಪು ದಾಳಿ ನಡೆದಿದ್ದು, ಹಲವು ವಾಹನಗಳು ಜಖಂಗೊಂಡಿದೆ. 

ಅಹ್ಮದಾಬಾದ್: ಗುಜರಾತ್ ನ ದಹೋದ್ ಜಿಲ್ಲೆಯಲ್ಲಿ ಹಸುಗಳನ್ನು ಕಸಾಯಿಖಾನೆಗೆ ಕರೆದೊಯ್ಯುತ್ತಿದ್ದಗ ನಡೆದ ಪೊಲೀಸ್ ದಾಳಿ ವೇಳೆ ಅವುಗಳನ್ನು ವಶಕ್ಕೆ ಪಡೆಯಲಾಗಿದ್ದು, ಗುಂಪು ದಾಳಿ ನಡೆದಿದ್ದು, ಹಲವು ವಾಹನಗಳು ಜಖಂಗೊಂಡಿದೆ. 

50 ಪೊಲೀಸ್ ಸಿಬ್ಬಂದಿಗಳು ಕಪ್ಡಿ ಪ್ರದೇಶದಲ್ಲಿ ದಾಳಿ ನಡೆಸಿದೆ.  ಪೊಲೀಸ್ ಸಿಬ್ಬಂದಿಗಳು 5 ಕಿ.ಮೀ ನಷ್ಟು ಬೀಫ್ ಹಾಗೂ ಮಾಂಸಕ್ಕಾಗಿ ಕಸಾಯಿಖಾನೆಗೆ ಕೊಂಡೊಯ್ಯುತ್ತಿದ್ದ ಹಸುಗಳನ್ನು ರಕ್ಷಿಸಲಾಗಿದೆ.  ದಾಳಿ ನಡೆದ ಬಳಿಕ ಪೊಲೀಸ್ ತಂಡ ವಾಪಸ್ಸಾಗುತ್ತಿದ್ದ ವೇಳೆ, 150 ಮಂದಿ ಇದ್ದ ಗುಂಪು ಸಿಬ್ಬಂದಿಗಳ ಮೇಲೆ ಕಲ್ಲು ತೂರಾಟ ನಡೆಸಿತು. ಈ ಘಟನೆಯಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ ತಲೆಗೆ ಗಾಯಗಳಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ದೇವ್ಘರ್ ಬಾರಿಯಾ ಇನ್ಸ್ ಪೆಕ್ಟರ್ ಸಿಆರ್ ದೇಸಾಯಿ ತಿಳಿಸಿದ್ದಾರೆ.

20 ಮಂದಿ ಗುರುತು ಪತ್ತೆ ಮಾಡಲಾಗಿರುವ ವ್ಯಕ್ತಿಗಳು ಹಾಗೂ 130 ಅನಾಮಿಕ ವ್ಯಕ್ತಿಗಳ ವಿರುದ್ಧ ಗಲಭೆ ಉಂಟುಮಾಡಿದ್ದಕ್ಕಾಗಿ ಹತ್ಯೆ ಯತ್ನ ಹಾಗೂ ಇತರ ಆರೋಪಗಳನ್ನು ಹೊರಿಸಿ ಎಫ್ಐಆರ್ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ 9 ಮಂದಿಯನ್ನು ಬಂಧಿಸಲಾಗಿದೆ.

ಗುಜರಾತ್ ಪ್ರಾಣಿ ಸಂರಕ್ಷಣಾ ತಿದ್ದುಪಡಿ ಕಾಯ್ದೆಯಡಿ ಮತ್ತೊಂದು ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT