ಗುಜರಾತ್: ಪೊಲೀಸ್ ದಾಳಿ ವೇಳೆ ಗುಂಪು ದಾಳಿ 
ದೇಶ

ಗುಜರಾತ್: ಪೊಲೀಸ್ ದಾಳಿ ವೇಳೆ ಗುಂಪು ದಾಳಿ, ವಾಹನ ಜಖಂ; 9 ಮಂದಿ ಬಂಧನ

ಗುಜರಾತ್ ನ ದಹೋದ್ ಜಿಲ್ಲೆಯಲ್ಲಿ ಹಸುಗಳನ್ನು ಕಸಾಯಿಖಾನೆಗೆ ಕರೆದೊಯ್ಯುತ್ತಿದ್ದಗ ನಡೆದ ಪೊಲೀಸ್ ದಾಳಿ ವೇಳೆ ಅವುಗಳನ್ನು ವಶಕ್ಕೆ ಪಡೆಯಲಾಗಿದ್ದು, ಗುಂಪು ದಾಳಿ ನಡೆದಿದ್ದು, ಹಲವು ವಾಹನಗಳು ಜಖಂಗೊಂಡಿದೆ. 

ಅಹ್ಮದಾಬಾದ್: ಗುಜರಾತ್ ನ ದಹೋದ್ ಜಿಲ್ಲೆಯಲ್ಲಿ ಹಸುಗಳನ್ನು ಕಸಾಯಿಖಾನೆಗೆ ಕರೆದೊಯ್ಯುತ್ತಿದ್ದಗ ನಡೆದ ಪೊಲೀಸ್ ದಾಳಿ ವೇಳೆ ಅವುಗಳನ್ನು ವಶಕ್ಕೆ ಪಡೆಯಲಾಗಿದ್ದು, ಗುಂಪು ದಾಳಿ ನಡೆದಿದ್ದು, ಹಲವು ವಾಹನಗಳು ಜಖಂಗೊಂಡಿದೆ. 

50 ಪೊಲೀಸ್ ಸಿಬ್ಬಂದಿಗಳು ಕಪ್ಡಿ ಪ್ರದೇಶದಲ್ಲಿ ದಾಳಿ ನಡೆಸಿದೆ.  ಪೊಲೀಸ್ ಸಿಬ್ಬಂದಿಗಳು 5 ಕಿ.ಮೀ ನಷ್ಟು ಬೀಫ್ ಹಾಗೂ ಮಾಂಸಕ್ಕಾಗಿ ಕಸಾಯಿಖಾನೆಗೆ ಕೊಂಡೊಯ್ಯುತ್ತಿದ್ದ ಹಸುಗಳನ್ನು ರಕ್ಷಿಸಲಾಗಿದೆ.  ದಾಳಿ ನಡೆದ ಬಳಿಕ ಪೊಲೀಸ್ ತಂಡ ವಾಪಸ್ಸಾಗುತ್ತಿದ್ದ ವೇಳೆ, 150 ಮಂದಿ ಇದ್ದ ಗುಂಪು ಸಿಬ್ಬಂದಿಗಳ ಮೇಲೆ ಕಲ್ಲು ತೂರಾಟ ನಡೆಸಿತು. ಈ ಘಟನೆಯಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ ತಲೆಗೆ ಗಾಯಗಳಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ದೇವ್ಘರ್ ಬಾರಿಯಾ ಇನ್ಸ್ ಪೆಕ್ಟರ್ ಸಿಆರ್ ದೇಸಾಯಿ ತಿಳಿಸಿದ್ದಾರೆ.

20 ಮಂದಿ ಗುರುತು ಪತ್ತೆ ಮಾಡಲಾಗಿರುವ ವ್ಯಕ್ತಿಗಳು ಹಾಗೂ 130 ಅನಾಮಿಕ ವ್ಯಕ್ತಿಗಳ ವಿರುದ್ಧ ಗಲಭೆ ಉಂಟುಮಾಡಿದ್ದಕ್ಕಾಗಿ ಹತ್ಯೆ ಯತ್ನ ಹಾಗೂ ಇತರ ಆರೋಪಗಳನ್ನು ಹೊರಿಸಿ ಎಫ್ಐಆರ್ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ 9 ಮಂದಿಯನ್ನು ಬಂಧಿಸಲಾಗಿದೆ.

ಗುಜರಾತ್ ಪ್ರಾಣಿ ಸಂರಕ್ಷಣಾ ತಿದ್ದುಪಡಿ ಕಾಯ್ದೆಯಡಿ ಮತ್ತೊಂದು ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT