ಜೈಶಂಕರ್ ಪ್ರಮಾಣ ವಚನ ಸ್ವೀಕಾರ 
ದೇಶ

ವಿದೇಶಾಂಗ ಸಚಿವ ಜೈಶಂಕರ್ ಸೇರಿದಂತೆ 9 ರಾಜ್ಯಸಭಾ ಸದಸ್ಯರು ಪ್ರಮಾಣ ವಚನ ಸ್ವೀಕಾರ

ನೂತನ ರಾಜ್ಯಸಭೆಯ ಸದಸ್ಯರಾಗಿ ವಿದೇಶಾಂಗ ಸಚಿವ ಜೈಶಂಕರ್ ಸೇರಿದಂತೆ 9 ಮಂದಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಸಂಸತ್ ಭವನದಲ್ಲಿರುವ ರಾಜ್ಯಸಭಾ ಸಭಾಂಗಣದಲ್ಲಿ ಸಭಾಪತಿ ಜಗದೀಪ್ ಧನಕರ್ ಪ್ರಮಾಣ ವಚನ ಬೋಧಿಸಿದರು.

ನವದೆಹಲಿ: ನೂತನ ರಾಜ್ಯಸಭೆಯ ಸದಸ್ಯರಾಗಿ ವಿದೇಶಾಂಗ ಸಚಿವ ಜೈಶಂಕರ್ ಸೇರಿದಂತೆ 9 ಮಂದಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಸಂಸತ್ ಭವನದಲ್ಲಿರುವ ರಾಜ್ಯಸಭಾ ಸಭಾಂಗಣದಲ್ಲಿ ಸಭಾಪತಿ ಜಗದೀಪ್ ಧನಕರ್ ಪ್ರಮಾಣ ವಚನ ಬೋಧಿಸಿದರು.

ಜೈಶಂಕರ್ ಇಂಗ್ಲಿಷ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಸಭಾ ಸಂಸದರಾಗಿ ಇದು ಎರಡನೇ ಅವಧಿಯಾಗಿದೆ. ಅವರು 2019 ರಲ್ಲಿ ಮೊದಲ ಬಾರಿಗೆ ಮೇಲ್ಮನೆಗೆ  ಆಯ್ಕೆಯಾಗಿದ್ದರು. 

ಜೈಶಂಕರ್ ಅವರಲ್ಲದೆ ಬಿಜೆಪಿ ಪಕ್ಷದಿಂದ ಬಾಬುಭಾಯಿ ಜೆಸಂಗ್‌ಭಾಯ್ ದೇಸಾಯಿ (ಗುಜರಾತ್) ಕೇಸ್ರಿದೇವ್‌ಸಿನ್ಹ್ ದಿಗ್ವಿಜಯ್‌ಸಿನ್ಹ್ ಝಾಲಾ (ಗುಜರಾತ್) ಮತ್ತು ನಾಗೇಂದ್ರ ರೇ (ಪಶ್ಚಿಮ ಬಂಗಾಳ) ಅವರು ಪ್ರಮಾಣ ವಚನ ಸ್ವೀಕರಿಸಿದ ಇತರ ಸದಸ್ಯರಾಗಿದ್ದಾರೆ. ಇನ್ನೂ ಟಿಎಂಸಿಯಿಂದ  ಡೆರೆಕ್ ಒಬ್ರಿಯನ್,  ಡೋಲಾ ಸೇನ್, ಸುಖೇಂದು ಶೇಖರ್ ರೇ, ಪ್ರಕಾಶ್ ಚಿಕ್ ಬರೈಕ್ ಮತ್ತು ಸಮೀರುಲ್ ಇಸ್ಲಾಂ ಕೂಡ ಪ್ರಮಾಣ ವಚನ ಸ್ವೀಕರಿಸಿದರು. 

ನಾಲ್ವರು ಸದಸ್ಯರು ಬಂಗಾಳಿಯಲ್ಲಿ, ಮೂವರು ಹಿಂದಿಯಲ್ಲಿ ಮತ್ತು ಇಬ್ಬರು ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು ಎಂದು ರಾಜ್ಯಸಭಾ ಕಾರ್ಯದರ್ಶಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸದನದ ನಾಯಕ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್, ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಪಿಸಿ ಮೋಡಿ ಮತ್ತು ಸಚಿವಾಲಯದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT