ಪ್ರಕಾಶ್ ರಾಜ್ 
ದೇಶ

ದ್ವೇಷಕ್ಕೆ ಮಾತ್ರ ದ್ವೇಷ ಕಾಣಿಸುವುದು: ನಾ ಹೇಳಿದ್ದು 'ಮಲಯಾಳಿ ಚಾಯ್​ವಾಲಾ' ಬಗ್ಗೆ; ಪ್ರಕಾಶ್ ರಾಜ್ ಸ್ಪಷ್ಟನೆ

ಅನ್​ಅಕಾಡೆಮಿ ಟ್ರೋಲಿಗರಿಗೆ ಗೊತ್ತಿರುವುದು ಚಾಯ್ ವಾಲಾ ಮಾತ್ರ. ಬೇರೆಯವರ ಬಗ್ಗೆ ತಿಳಿದುಕೊಂಡಿಲ್ಲ. ನಾವು ಹೆಮ್ಮೆ ಪಡುವಂತಹ 1960ರಲ್ಲಿ ನಮ್ಮ ದೇಶದವರೇ ಆದ ಮಲಯಾಳಂನ ಚಾಯ್​ವಾಲಾ ಒಬ್ಬರ ಸ್ಫೂರ್ತಿದಾಯಕ ಸ್ಟೋರಿ ಇದೆ.

ಬೆಂಗಳೂರು: ‘ಚಂದ್ರನಿಂದ ಬಂದ ಮೊದಲ ಚಿತ್ರ’ ಎಂದು ಚಾಯ್​ವಾಲಾನ ವ್ಯಂಗ್ಯಚಿತ್ರವೊಂದನ್ನು ನಟ ಪ್ರಕಾಶ್ ರಾಜ್ ನಿನ್ನೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅದು ವೈರಲ್​ ಆಗಿದ್ದಲ್ಲದೆ ವಿವಾದಾತ್ಮಕವಾಗಿ ಪರಿಣಮಿಸಿ ತೀವ್ರ ಟೀಕೆಗೂ ಒಳಗಾಗಿದೆ.

ಈ ಸಂಬಂಧ ಮತ್ತೊಂದು ಟ್ವೀಟ್ ಮಾಡಿ, ಸ್ಪಷ್ಟನೆ ನೀಡಿರುವ ಅವರು,‘ದ್ವೇಷಕ್ಕೆ ದ್ವೇಷ ಮಾತ್ರ ಕಾಣಿಸುವುದು. ನಾನು ನಮ್ಮ ಕೇರಳದ ಚಾಯ್​ವಾಲಾರನ್ನು ಸಂಭ್ರಮಿಸುವ ಆರ್ಮ್​ಸ್ಟ್ರಾಂಗ್ ಕಾಲದ ಜೋಕ್ ಹೇಳಿದ್ದೆ. ಟ್ರೋಲಿಗರಿಗೆ ಕಂಡ ಚಾಯ್​ವಾಲಾ ಯಾರು?’ ಎಂದು ಪ್ರಶ್ನಿಸಿರುವ ಪ್ರಕಾಶ್ ರಾಜ್​, ‘ನಿಮಗೆ ಜೋಕ್ ಅರ್ಥ ಆಗಲಿಲ್ಲವೆಂದರೆ ಜೋಕು ನಿಮ್ಮ ಬಗ್ಗೆಯೇ.. ಬೆಳೆಯಿರಿ’ ಎಂದು ಟೀಕಿಸಿದವರಿಗೆ ಹೇಳಿದ್ದಾರೆ.

ಅನ್​ಅಕಾಡೆಮಿ ಟ್ರೋಲಿಗರಿಗೆ ಗೊತ್ತಿರುವುದು ಚಾಯ್ ವಾಲಾ ಮಾತ್ರ. ಬೇರೆಯವರ ಬಗ್ಗೆ ತಿಳಿದುಕೊಂಡಿಲ್ಲ. ನಾವು ಹೆಮ್ಮೆ ಪಡುವಂತಹ 1960ರಲ್ಲಿ ನಮ್ಮ ದೇಶದವರೇ ಆದ ಮಲಯಾಳಂನ ಚಾಯ್​ವಾಲಾ ಒಬ್ಬರ ಸ್ಫೂರ್ತಿದಾಯಕ ಸ್ಟೋರಿ ಇದೆ. ನೀವು ಈ ಬಗ್ಗೆ ತಿಳಿದುಕೊಳ್ಳಲು ಬಯಸಿದರೆ ಪ್ಲೀಸ್​ ಇದನ್ನು ಓದಿ ಎಂದು ಟ್ರೋಲಿಗರಿಗೆ ತಿರುಗೇಟು ಕೊಟ್ಟಿದ್ದಾರೆ.

ಪ್ರಕಾಶ್​ ರಾಜ್ ನಿನ್ನೆ ಮಾಡಿದ್ದ ಆ ಪೋಸ್ಟ್​ಗೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಇದು ಇಸ್ರೋಗೆ ಮಾಡಿದ ಅವಮಾನ, ದೇಶಕ್ಕೆ ಮಾಡಿದ ಅಪಮಾನ ಎಂದು ಹಲವರು ಪ್ರಕಾಶ್ ರಾಜ್ ವಿರುದ್ಧ ಕಿಡಿಕಾರಿದ್ದರು. ಇಂದೂ ಟೀಕೆಗಳು ಮುಂದುವರಿದಿದ್ದು, ಅದಕ್ಕೆ ಪ್ರತಿಕ್ರಿಯೆ ಎಂಬಂತೆ ಪ್ರಕಾಶ್​ ರಾಜ್​ ಈ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT