ಸಾಂದರ್ಭಿಕ ಚಿತ್ರ 
ದೇಶ

ನಡತೆ ಬಗ್ಗೆ ಅನುಮಾನ: ಹೆತ್ತ ತಾಯಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ಮಗ!

ತಾಯಿಯ ನಡತೆ ಬಗ್ಗೆ ಅನುಮಾನಗೊಂಡ 17 ವರ್ಷದ ಹದಿಹರೆಯದ ಬಾಲಕನೊಬ್ಬ ಆಕೆಗೆ ಕೊಡಲಿಯಿಂದ ಹೊಡೆದು ಕೊಂದಿರುವ ಘಟನೆ ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯಲ್ಲಿ ನಡೆದಿದೆ.

ಪಾಲ್ಗರ್: ತಾಯಿಯ ನಡತೆ ಬಗ್ಗೆ ಅನುಮಾನಗೊಂಡ 17 ವರ್ಷದ ಹದಿಹರೆಯದ ಬಾಲಕನೊಬ್ಬ ಆಕೆಗೆ ಕೊಡಲಿಯಿಂದ ಹೊಡೆದು ಕೊಂದಿರುವ ಘಟನೆ ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯಲ್ಲಿ ನಡೆದಿದೆ. ತನ್ನ ತಾಯಿ ಮೊಬೈಲ್ ಫೋನ್‌ನಿಂದ ಯಾರಿಗೂ ಮೇಸೆಜ್ ಕಳುಹಿಸುವುದನ್ನು ನೋಡಿದ ಬಾಲಕ ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ. ವಸಾಯಿ ಟೌನ್‌ಶಿಪ್‌ನ ಪರೋಲ್ ಪ್ರದೇಶದಲ್ಲಿ ಭಾನುವಾರ-ಸೋಮವಾರದ ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಬಾಲಕನಿಗೆ ತನ್ನ ತಾಯಿ ಸೋನಾಲಿ ಗೊಗ್ರಾ (35) ನಡತೆ ಬಗ್ಗೆ ಅನುಮಾನವಿತ್ತು. ಈ ಸಂಬಂಧ ಇಬ್ಬರೂ ಆಗಾಗ್ಗೆ ಜಗಳವಾಡುತ್ತಿದ್ದರು. ಭಾನುವಾರ ರಾತ್ರಿ ಊಟ ಮಾಡುತ್ತಿದ್ದಾಗ ಆತನ ತಾಯಿ ಮೊಬೈಲ್‌ನಲ್ಲಿ ಯಾರಿಗೋ ಸಂದೇಶ ಕಳುಹಿಸುತ್ತಿರುವುದನ್ನು ಗಮನಿಸಿದ ಬಾಲಕ ಕೋಪಗೊಂಡಿದ್ದು, ನಂತರ ಕೊಡಲಿಯನ್ನು ಹೊರತೆಗೆದು ಆಕೆಗೆ ಹೊಡೆದಿದ್ದಾನೆ ಎಂದು ಮಾಂಡವಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಶೋಕ್ ಕಾಂಬಳೆ ತಿಳಿಸಿದ್ದಾರೆ. 

ಘಟನೆಯ ವೇಳೆ ಕುಟುಂಬದ ಇತರ ಸದಸ್ಯರು ಮನೆಯಲ್ಲಿ ಇರಲಿಲ್ಲ. ತೀವ್ರವಾಗಿ ಗಾಯಗೊಂಡ ಮಹಿಳೆಯನ್ನು ಭಿವಂಡಿಯ ಇಂದಿರಾಗಾಂಧಿ ಸ್ಮಾರಕ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ  ಆಕೆ ಸಾವನ್ನಪ್ಪಿದ್ದಾಳೆಂದು ವೈದ್ಯರು ಘೋಷಿಸಿದರು. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ. 

ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಆದರೂ ಇನ್ನೂ ಆತನನ್ನು ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT