ಎಐಎಂಐಎಂ ಮುಖ್ಯಸ್ಥ ಓವೈಸಿ ಜೊತೆ ಔರಂಗಾಬಾದ್ ಸಂಸದ ಜಲೀಲ್ 
ದೇಶ

ಔರಂಗಾಬಾದ್ ಗೆಲ್ಲಲು ಎಐಎಂಐಎಂ ಕಣದಲ್ಲಿರಬೇಕು: ಕೇಂದ್ರ ಸಚಿವ ರಾವ್ ಸಾಹೇಬ್ ದನ್ವೆ

ಬಿಜೆಪಿ ಔರಂಗಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲಬೇಕೆಂದರೆ ಎಐಎಂಐಎಂ ಕಣದಲ್ಲಿರಬೇಕು ಎಂದು ಕೇಂದ್ರ ಸಚಿವ ರಾವ್ ಸಾಹೇಬ್ ದನ್ವೆ ಹೇಳಿದ್ದಾರೆ.

ನವದೆಹಲಿ: ಬಿಜೆಪಿ ಔರಂಗಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲಬೇಕೆಂದರೆ ಎಐಎಂಐಎಂ ಕಣದಲ್ಲಿರಬೇಕು ಎಂದು ಕೇಂದ್ರ ಸಚಿವ ರಾವ್ ಸಾಹೇಬ್ ದನ್ವೆ ಹೇಳಿದ್ದಾರೆ.

ಮಹಾರಾಷ್ಟ್ರ ಬಿಜೆಪಿ ನಾಯಕನ ಈ ಹೇಳಿಕೆ ಅಚ್ಚರಿ ಮೂಡಿಸಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಬೇಕೆಂದರೆ ಎಐಎಂಐಎಂ ನಾಯಕ ಹಾಗೂ ಹಾಲಿ ಸಂಸದ ಇಮ್ತಿಯಾಜ್ ಜಲೀಲ್ ಚುನಾವಣೆಗೆ ಸ್ಪರ್ಧಿಸುವುದನ್ನು ಬಿಜೆಪಿ ಖಚಿತಪಡಿಸಿಕೊಳ್ಳಬೇಕೆಂದು ಹೇಳಿದ್ದಾರೆ. ಈ ಹಿಂದಿಗಿಂತಲೂ ಹೆಚ್ಚಿನ ಅಂತರದಲ್ಲಿ ಈ ಬಾರಿ ಬಿಜೆಪಿ ಗೆಲ್ಲಲಿದೆ ಎಂದು ದನ್ವೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಔರಂಗಾಬಾದ್ ಲೋಕಸಭಾ ಕ್ಷೇತ್ರದ ರಾಜಕೀಯ ಸನ್ನಿವೇಶದ ಬಗ್ಗೆ ಪ್ರಶ್ನಿಸಿದ ದಾನ್ವೆ, "ನಮಗೆ ಇಮ್ತಿಯಾಜ್ ಜಲೀಲ್ ಅವರೊಂದಿಗೆ ವಿಭಿನ್ನ ರೀತಿಯ ಸ್ನೇಹವಿದೆ, ಅದು (ಬಿಜೆಪಿ ನಾಯಕ) ಭಾಗವತ್ ಕರದ್ ಆಗಿರಲಿ ಅಥವಾ ಬೇರೆಯವರಾಗಿರಲಿ, 2024 ರಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು. ಮತ್ತು ಜಲೀಲ್ ಆ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು ಎಂದು ದನ್ವೆ ಹೇಳಿದ್ದು, ದನ್ವೆ ಈ ಹೇಳಿಕೆಗಳನ್ನು ನೀಡಿದಾಗ ಜಲೀಲ್ ಕೂಡ ಇದ್ದರು ಎಂಬುದು ಗಮನಾರ್ಹ ಸಂಗತಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ, ಲೆಬನಾನ್ ಕದನ ವಿರಾಮ, ಆಸ್ತಿ ಬಿಡುಗಡೆ ಪ್ರಮುಖ ಅಜೆಂಡಾ-Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

IPL 2026: RCB ಸೋಲಿಸಿದ RRಗೆ ಬಿಗ್ ಶಾಕ್, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಬ್ಬಂದಿ, BCCI ಶಿಕ್ಷೆ..! Video

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

PSL ನಲ್ಲಿ ಮತ್ತೊಂದು ಹೈಡ್ರಾಮಾ: ಇದ್ಯಾವ್ ಸೀಮೆ ಬೌಲಿಂಗ್?.. ಮೈದಾನದಲ್ಲೇ Daryl Mitchell vs Usman Tariq ಜಟಾಪಟಿ, ಇಷ್ಟಕ್ಕೂ ಆಗಿದ್ದೇನು?

SCROLL FOR NEXT