ಚಂದ್ರಯಾನ-3 
ದೇಶ

ಚಂದ್ರಯಾನ-3: ಇತಿಹಾಸ ಸೃಷ್ಟಿಗೆ ಕ್ಷಣಗಣನೆ; ಚಂದ್ರನ ಅಂಗಳದಲ್ಲಿಂದು ತ್ರಿವಿಕ್ರಮನ ಪಾದಸ್ಪರ್ಶ, ಇಡೀ ವಿಶ್ವದ ಕಣ್ಣು ಭಾರತದತ್ತ

ನೂರಾ ನಲವತ್ತು ಕೋಟಿ ಭಾರತೀಯರ ಶುಭ ಹಾರೈಕೆ ಹಾಗೂ ಪ್ರಾರ್ಥನೆಯೊಂದಿಗೆ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ)ಯ ಚಂದ್ರಯಾನ-3 ನೌಕೆ ಬುಧವಾರ ಸಂಜೆ 6.04ಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲು ಸಜ್ಜಾಗಿದ್ದು, ಈ ಐತಿಹಾಸಿಕ ಸಂದರ್ಭಕ್ಕೆ ಕ್ಷಣಗಣನೆ ಆರಂಭವಾಗಿದೆ.

ಬೆಂಗಳೂರು: ನೂರಾ ನಲವತ್ತು ಕೋಟಿ ಭಾರತೀಯರ ಶುಭ ಹಾರೈಕೆ ಹಾಗೂ ಪ್ರಾರ್ಥನೆಯೊಂದಿಗೆ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ)ಯ ಚಂದ್ರಯಾನ-3 ನೌಕೆ ಬುಧವಾರ ಸಂಜೆ 6.04ಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲು ಸಜ್ಜಾಗಿದ್ದು, ಈ ಐತಿಹಾಸಿಕ ಸಂದರ್ಭಕ್ಕೆ ಕ್ಷಣಗಣನೆ ಆರಂಭವಾಗಿದೆ.

 ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಕೈಗೊಂಡಿರುವ ಅತ್ಯಂತ ಮಹತ್ವದ ಸಾಹಸಕ್ಕೆ ಇಡೀ ವಿಶ್ವವೇ ಬೆರಗು ಗಣ್ಣಿನಿಂದ ನೋಡುತ್ತಿದೆ. ಈ ಅದ್ಭುತವನ್ನು ಸಾಧಿಸುವ ಮೂಲಕ ಬಾಹ್ಯಾಕಾಶದಲ್ಲಿ ಸಾಧನೆ ಮಾಡಿದ ಇತರ ರಾಷ್ಟ್ರಗಳಲ್ಲಿ ಭಾರತವೂ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಸಿದ್ಧವಾಗಿದೆ. ಏಕೆಂದರೆ ಇದು ಚಂದ್ರನ ದಕ್ಷಿಣ ಧೃವವನ್ನು ತಲುಪಲಿದೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವ ಪ್ರವೇಶಿಸಿದ ಮೊದಲ ದೇಶವಾಗಿ ಭಾರತ ಗುರುತಿಸಿಕೊಳ್ಳಲಿದೆ.

ಚಂದ್ರಯಾನ-3 ರ ಲ್ಯಾಂಡರ್ ಮಾಡ್ಯೂಲ್ ಮಾನವನ ಜಾಣ್ಮೆ ಮತ್ತು ನಿರ್ಣಯಕ್ಕೆ ಸಾಕ್ಷಿಯಾಗಿದೆ. ಲ್ಯಾಂಡರ್ ವಿಕ್ರಮ್ ಮತ್ತು ರೋವರ್ ಪ್ರಗ್ಯಾನ್ ಒಳಗೊಂಡಿರುವ LM, ಚಂದ್ರನ ಭೂಪ್ರದೇಶದಲ್ಲಿ ಅತ್ಯಂತ ಸುರಕ್ಷಿತವಾಗಿ ಹಗುರವಾಗಿ ಚಂದ್ರನ ನೆಲವನ್ನು ಸ್ಪರ್ಶಿಸುವ ಮೂಲಕ ಇತಿಹಾಸ ನಿರ್ಮಿಸಲು ಸಿದ್ಧವಾಗಿದೆ. ಬುಧವಾರ ಸಂಜೆ ಅಂದೆ ಇಂದು ಸರಿಯಾಗಿ ಸಂಜೆ 6:04 ನಿಮಿಷಕ್ಕೆ ವಿಕ್ರಮ್​ ಲ್ಯಾಂಡರ್​ ಲ್ಯಾಂಡ್​ ಆಗಲಿದೆ.

ವಿಕ್ರಂ ಸುರಕ್ಷಿತವಾಗಿ ಚಂದಪ್ಪನ ಅಂಗಳವನ್ನ ತಲುಪಿದರೆ ವಿಶ್ವದಲ್ಲಿ ವಿಕ್ರಮ ಸ್ಥಾಪಿಸಿದ ಗರಿಮೆ ಇಸ್ರೋ ಪಾಲಿಗೆ ಒದಗಿ ಬರಲಿದೆ. ಚಂದ್ರಯಾನ-3 ರ ಲ್ಯಾಂಡಿಂಗ್ ಭಾರತಕ್ಕೆ ಐತಿಹಾಸಿಕ ಮೈಲಿಗಲ್ಲಾಗಲಿದೆ. ಏಕೆಂದರೆ ಇದು ಚಂದ್ರನ ಮೇಲ್ಮೈಯಲ್ಲಿ ಸಾಫ್ಟ್ ಲ್ಯಾಂಡಿಂಗ್‌ನ ಸಂಕೀರ್ಣ ತಂತ್ರಜ್ಞಾನವನ್ನು ಕರಗತ ಮಾಡಿಕೊಂಡ ನಾಲ್ಕನೇ ರಾಷ್ಟ್ರವಾಗಿ ಗುರುತಿಸಿಕೊಳ್ಳಲಿದೆ. ಅಮೆರಿಕ, ಚೀನಾ ಮತ್ತು ಹಿಂದಿನ ಸೋವಿಯತ್ ಒಕ್ಕೂಟಗಳ ಸಾಧನೆಯ ಶ್ರೇಣಿಗೆ ಸೇರಲಿದೆ. ಈ ಮೂಲಕ ಭಾರತ ಬಾಹ್ಯಾಕಾಶ ಪರಿಶೋಧನೆಯಲ್ಲಿ ವಿಕ್ರಮ ಸಾಧಿಸಿದ ಶ್ರೇಷ್ಠತೆಗೆ ಒಳಗಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT