ಚಂದ್ರಯಾನ 3 
ದೇಶ

ಚಂದ್ರಯಾನ-3 ಯಶಸ್ವಿ: ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಸೇಫ್ ಲ್ಯಾಂಡ್, ಐತಿಹಾಸಿಕ ಕ್ಷಣ!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಮೂರನೇ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಇಂದು ಸಂಜೆ ಸುಮಾರು 6.04 ಕ್ಕೆ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ.

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಮೂರನೇ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಇಂದು ಸಂಜೆ ಸುಮಾರು 6.04 ಕ್ಕೆ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ. 

ಜುಲೈ 14ರಂದು ಉಡಾವಣೆಗೊಂಡಿದ್ದ ಚಂದ್ರಯಾನ 3 ಇಂದು ಸಂಜೆ 6.04ಕ್ಕೆ ಸರಿಯಾಗಿ ಚಂದ್ರನ ಮೇಲ್ಮೈ ಮೇಲೆ ಸಾಫ್ಟ್ ಲ್ಯಾಂಡ್ ಆಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಸುಸೂತ್ರವಾಗಿ ಇಳಿಸಿದ ಮೊದಲ ದೇಶವಾಗಿ ಭಾರತ ಹೊರಹೊಮ್ಮಿದೆ.

ಚಂದ್ರಯಾನ-3ರ ಲ್ಯಾಂಡರ್‌ನ ಸಾಫ್ಟ್ ಲ್ಯಾಂಡಿಂಗ್‌ಗೆ 15 ರಿಂದ 17 ನಿಮಿಷಗಳನ್ನು ತೆಗೆದುಕೊಂಡಿತು. ಚಂದ್ರಯಾನ 3 ಅನ್ನು 14 ಜುಲೈ 2023ರಂದು ಮಧ್ಯಾಹ್ನ 2.30 ಕ್ಕೆ ಉಡಾವಣೆ ಮಾಡಲಾಗಿತ್ತು

ಚಂದ್ರನ ದಕ್ಷಿಣ ಧ್ರುವವನ್ನು ಚಂದ್ರಯಾನ 3ಕ್ಕೆ ಇಳಿಯುವ ಸ್ಥಳವಾಗಿ ನಿಗದಿಪಡಿಸಲಾಗಿತ್ತು. ಇದು ಶಾಶ್ವತ ನೆರಳಿನ ಪ್ರದೇಶವಾಗಿದ್ದು, ವಿಜ್ಞಾನಿಗಳು ಇಲ್ಲಿ ಸಂಪನ್ಮೂಲಗಳು ಸಮೃದ್ಧವಾಗಿದೆ. ಭವಿಷ್ಯದಲ್ಲಿ ಮಾನವಸಹಿತ ಕಾರ್ಯಾಚರಣೆಗಳಿಗೆ ಸೂಕ್ತವಾದ ಲ್ಯಾಂಡಿಂಗ್ ಸೈಟ್ಗಳನ್ನು ನೀಡಬಹುದು ಎಂದು ನಂಬಿದ್ದಾರೆ.

ವಿಕ್ರಮ್ ಲ್ಯಾಂಡರ್ ಚಂದ್ರನ ಈ ಪ್ರದೇಶದಲ್ಲಿ ಮೊದಲ ಬಾರಿಗೆ ಇಳಿಯುವ ಮೂಲಕ ಇತಿಹಾಸ ನಿರ್ಮಿಸಿದೆ. ಲ್ಯಾಂಡರ್ ಮತ್ತು ರೋವರ್ ಒಂದು ಚಂದ್ರನ ದಿನದ (14 ಭೂಮಿಯ ದಿನಗಳು) ಮಿಷನ್ ಜೀವನವನ್ನು ಹೊಂದಿದ್ದು, ಈ ಸಮಯದಲ್ಲಿ ಅದು ಆನ್-ಸೈಟ್ ಪ್ರಯೋಗಗಳನ್ನು ನಡೆಸುತ್ತದೆ.

ವೇಗವನ್ನು ಕಡಿಮೆ ಮಾಡಲು ನಾಲ್ಕು ಥ್ರಸ್ಟರ್ ಎಂಜಿನ್‌ಗಳ ರೆಟ್ರೊ ಫೈರಿಂಗ್‌ನೊಂದಿಗೆ ವಿಕ್ರಮ್ ಲ್ಯಾಂಡರ್‌ನ ಚಾಲಿತ ಬ್ರೇಕಿಂಗ್ ಪ್ರಾರಂಭವಾಯಿತು. ನಂತರ ಕೊನೆಯ 17 ನಿಮಿಷಗಳು ಕಠಿಣ ಸವಾಲು ಎಂದು ವಿಜ್ಞಾನಿಗಳು ಹೇಳಿದ್ದರು.

ಭಾರತಕ್ಕೂ ಮುನ್ನ ಕೇವಲ ಮೂರು ಇತರ ದೇಶಗಳು (ರಷ್ಯಾ, ಚೀನಾ ಮತ್ತು ಯುನೈಟೆಡ್ ಸ್ಟೇಟ್ಸ್) ಯಶಸ್ವಿಯಾಗಿ ಚಂದ್ರನ ಮೇಲೆ ರೋವರ್ ಅನ್ನು ಇಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT