ಕುಸಿದು ಬೀಳುತ್ತಿರುವ ಕಟ್ಟಡಗಳು. 
ದೇಶ

ಹಿಮಾಚಲ ಪ್ರದೇಶ: ಭೂಕುಸಿತದಿಂದ ಧರೆಗುರುಳಿದ ಬಹುಮಹಡಿ ಕಟ್ಟಡಗಳು, ಹಲವರು ಸಿಲುಕಿರುವ ಶಂಕೆ

ಹಿಮಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಮಳೆಯಿಂದಾಗಿ ಪ್ರತೀನಿತ್ಯ ಅವಘಡ, ಪ್ರಾಣಹಾನಿ ವರದಿಯಾಗುತ್ತಲೇ ಇದೆ.

ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಮಳೆಯಿಂದಾಗಿ ಪ್ರತೀನಿತ್ಯ ಅವಘಡ, ಪ್ರಾಣಹಾನಿ ವರದಿಯಾಗುತ್ತಲೇ ಇದೆ.

ಭಾರೀ ಮಳೆಯಿಂದಾಗಿ ಹಿಮಾಚಲ ಪ್ರದೇಶದ ಕುಲ್ಲುವಿನ ಅನ್ನಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಅನೇಕ ಮನೆಗಳು ಏಕಾಏಕಿ ನೆಲಸಮವಾಗಿವೆ. ಪರಿಣಾಮ ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಟ್ಟಡದಲ್ಲಿ ಹಲವು ಅಂಗಡಿಗಳು, ಬ್ಯಾಂಕ್ ಗಳು ಮತ್ತು ಇತೆ ವಾಣಿಜ್ಯ ಸಂಸ್ಥೆಗಳಿದ್ದವು. 4-5 ದಿನಗಳ ಹಿಂದೆಯೇ ಕಟ್ಟಡದಲ್ಲಿ ಬಿರುಕುಗಳು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಕಟ್ಟಡಗಳನ್ನು ಅಸುರಕ್ಷಿತವೆಂದು ಘೋಷಿಸಿ, ಎಲ್ಲರನ್ನೂ ಸ್ಥಳಾಂತರಗೊಳಿಸಲಾಗಿತ್ತು ಎಂದು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅಣ್ಣಿ, ನರೇಶ್ ವರ್ಮಾ ಅವರು ಹೇಳಿದ್ದಾರೆ.

ಹಾನಿಯ ಮೌಲ್ಯಮಾಪನ ಮಾಡಲಾಗುತ್ತಿದೆ. ಅನ್ನಿಯ ರಾಷ್ಟ್ರೀಯ ಹೆದ್ದಾರಿ 305 ರ ಉದ್ದಕ್ಕೂ ಇರುವ ಕೆಲವು ಅಸುರಕ್ಷಿತ ಕಟ್ಟಡಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ತೆರವು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಜೂನ್ 24 ರಂದು ಹಿಮಾಚಲ ಪ್ರದೇಶದಲ್ಲಿ ಮಾನ್ಸೂನ್ ಪ್ರಾರಂಭವಾಗಿದ್ದು, ಮುಂಗಾರು ಆರಂಭವಾದಾಗಿನಿಂದಲೂ ಮಳೆ ಸಂಬಂಧಿದ ಘಟನೆಗಳಲ್ಲಿ ಈ ವರೆಗೂ 238 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, 40 ಮಂದಿ ನಾಪತ್ತೆಯಾಗಿದ್ದಾರೆ.

ಜುಲೈ 9 ಮತ್ತು 10 ರಂದು ಮಂಡಿ ಮತ್ತು ಕುಲು ಜಿಲ್ಲೆಗಳಲ್ಲಿ ಹಲವು ಪ್ರಮಾದಗಳು ಸೃಷ್ಟಿಯಾಗಿದ್ದವು. ಆಗಸ್ಟ್ 14 ಮತ್ತು 15 ರಂದು ಸುರಿದ ಮಳೆಗೆ ಶಿಮ್ಲಾ ಮತ್ತು ಸೋಲನ್ ಜಿಲ್ಲೆಗಳಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ.

ಹಾನಿಗೊಳಗಾದ ಕಾಮಗಾರಿಗಳ ಪುನರ್ ಆರಂಭಕ್ಕಾಗಿ 165.22 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT