ಅಂಕಾಳಮ್ಮ ದೇಗುಲದ ಸಮೀಪ ಪತ್ತೆಯಾದ ವಿಜಯನಗರ ಕಾಲದ ಚಿನ್ನದ ನಾಣ್ಯ 
ದೇಶ

ಆಂಧ್ರ ಪ್ರದೇಶ: ಬಂಡೆಕಲ್ಲಿನ ಕೆಳಗೆ ವಿಜಯನಗರ ಸಾಮ್ರಾಜ್ಯ ಕಾಲದ 450 ಚಿನ್ನದ ನಾಣ್ಯಗಳು ಪತ್ತೆ!

ನೆಲ್ಲೂರು ಜಿಲ್ಲೆಯ ಚಿಟ್ಟೆಪಲ್ಲಿ ಗ್ರಾಮದ ಅಂಕಾಳಮ್ಮ ದೇವಸ್ಥಾನದ ಬಳಿಯ ಗುಡ್ಡದ ಮೇಲಿನ ಬಂಡೆಕಲ್ಲಿನ ಕೆಳಗೆ ಬುಧವಾರ 450ಕ್ಕೂ ಹೆಚ್ಚು ಚಿನ್ನದ ನಾಣ್ಯಗಳು ಪತ್ತೆಯಾಗಿವೆ.

ತಿರುಪತಿ: ನೆಲ್ಲೂರು ಜಿಲ್ಲೆಯ ಚಿಟ್ಟೆಪಲ್ಲಿ ಗ್ರಾಮದ ಅಂಕಾಳಮ್ಮ ದೇವಸ್ಥಾನದ ಬಳಿಯ ಗುಡ್ಡದ ಮೇಲಿನ ಬಂಡೆಕಲ್ಲಿನ ಕೆಳಗೆ ಬುಧವಾರ 450ಕ್ಕೂ ಹೆಚ್ಚು ಚಿನ್ನದ ನಾಣ್ಯಗಳು ಪತ್ತೆಯಾಗಿವೆ.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ನಿರ್ದೇಶಕ ಕೆ ಮುನಿರತ್ನಂ ರೆಡ್ಡಿ ಮಾತನಾಡಿ, ಇವು 15 ಮತ್ತು 17ನೇ ಶತಮಾನಗಳ ಚಿನ್ನದ ನಾಣ್ಯಗಳಾಗಿದ್ದು, ವಿಜಯನಗರ ಸಾಮ್ರಾಜ್ಯದ ರಾಜ ಹರಿಹರ I ಮತ್ತು II ಮತ್ತು ದೆಹಲಿ ಸುಲ್ತಾನರಿಗೆ ಸೇರಿದವುಗಳಾಗಿವೆ ಎಂದು ಹೇಳಿದರು.

ಕೆಲವು ಚಿನ್ನದ ನಾಣ್ಯಗಳ ಅಂಚಿನಲ್ಲಿ ದೆಹಲಿ ಟಂಕಸಾಲೆಯ ಚಿತ್ರಣವಿದೆ. ಈ ನಾಣ್ಯಗಳು ಈ ಪ್ರದೇಶದ ಅತ್ಯಂತ ಹಳೆಯ ದೇಗುಲಗಳಲ್ಲಿ ಒಂದಾದ ಅಂಕಾಳಮ್ಮ ದೇವಾಲಯದ ಬಳಿ ಕಂಡುಬಂದಿವೆ ಎಂದು ಅವರು ಹೇಳಿದರು. 

ಮಧ್ಯಕಾಲೀನ ಕಾಲದಲ್ಲಿ, ಸರಿಯಾದ ಬ್ಯಾಂಕಿಂಗ್ ವ್ಯವಸ್ಥೆ ಇಲ್ಲದ ಕಾರಣ ಜನರು ತಮ್ಮ ಹಣವನ್ನು ದೇವಸ್ಥಾನಗಳಲ್ಲಿ ಠೇವಣಿ ಇಡುತ್ತಿದ್ದರು. ಆಂಧ್ರ ಪ್ರದೇಶದ ರಾಜ್ಯ ಪುರಾತತ್ವ ಇಲಾಖೆ ಇನ್ನೂ ಚಿನ್ನದ ನಾಣ್ಯಗಳನ್ನು ಸ್ವಾಧೀನಪಡಿಸಿಕೊಳ್ಳಬೇಕಿದೆ.

ಸದ್ಯ ದೊರಕಿರುವ ವಿಜಯನಗರ ಸಾಮ್ರಾಜ್ಯಕ್ಕೆ ಸೇರಿದ ಚಿನ್ನದ ನಾಣ್ಯಗಳನ್ನು ಸಂರಕ್ಷಿಸುವಂತೆ ತಿರುಪತಿಯ ಸಂಸದರನ್ನು ಮುನಿರತ್ನಂ ಒತ್ತಾಯಿಸಿದ್ದಾರೆ. ಇವುಗಳನ್ನು ಹೊಸ ಎಎಸ್‌ಐ ಮ್ಯೂಸಿಯಂನಲ್ಲಿ ಪ್ರದರ್ಶಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT