ಅಂಕಾಳಮ್ಮ ದೇಗುಲದ ಸಮೀಪ ಪತ್ತೆಯಾದ ವಿಜಯನಗರ ಕಾಲದ ಚಿನ್ನದ ನಾಣ್ಯ 
ದೇಶ

ಆಂಧ್ರ ಪ್ರದೇಶ: ಬಂಡೆಕಲ್ಲಿನ ಕೆಳಗೆ ವಿಜಯನಗರ ಸಾಮ್ರಾಜ್ಯ ಕಾಲದ 450 ಚಿನ್ನದ ನಾಣ್ಯಗಳು ಪತ್ತೆ!

ನೆಲ್ಲೂರು ಜಿಲ್ಲೆಯ ಚಿಟ್ಟೆಪಲ್ಲಿ ಗ್ರಾಮದ ಅಂಕಾಳಮ್ಮ ದೇವಸ್ಥಾನದ ಬಳಿಯ ಗುಡ್ಡದ ಮೇಲಿನ ಬಂಡೆಕಲ್ಲಿನ ಕೆಳಗೆ ಬುಧವಾರ 450ಕ್ಕೂ ಹೆಚ್ಚು ಚಿನ್ನದ ನಾಣ್ಯಗಳು ಪತ್ತೆಯಾಗಿವೆ.

ತಿರುಪತಿ: ನೆಲ್ಲೂರು ಜಿಲ್ಲೆಯ ಚಿಟ್ಟೆಪಲ್ಲಿ ಗ್ರಾಮದ ಅಂಕಾಳಮ್ಮ ದೇವಸ್ಥಾನದ ಬಳಿಯ ಗುಡ್ಡದ ಮೇಲಿನ ಬಂಡೆಕಲ್ಲಿನ ಕೆಳಗೆ ಬುಧವಾರ 450ಕ್ಕೂ ಹೆಚ್ಚು ಚಿನ್ನದ ನಾಣ್ಯಗಳು ಪತ್ತೆಯಾಗಿವೆ.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ನಿರ್ದೇಶಕ ಕೆ ಮುನಿರತ್ನಂ ರೆಡ್ಡಿ ಮಾತನಾಡಿ, ಇವು 15 ಮತ್ತು 17ನೇ ಶತಮಾನಗಳ ಚಿನ್ನದ ನಾಣ್ಯಗಳಾಗಿದ್ದು, ವಿಜಯನಗರ ಸಾಮ್ರಾಜ್ಯದ ರಾಜ ಹರಿಹರ I ಮತ್ತು II ಮತ್ತು ದೆಹಲಿ ಸುಲ್ತಾನರಿಗೆ ಸೇರಿದವುಗಳಾಗಿವೆ ಎಂದು ಹೇಳಿದರು.

ಕೆಲವು ಚಿನ್ನದ ನಾಣ್ಯಗಳ ಅಂಚಿನಲ್ಲಿ ದೆಹಲಿ ಟಂಕಸಾಲೆಯ ಚಿತ್ರಣವಿದೆ. ಈ ನಾಣ್ಯಗಳು ಈ ಪ್ರದೇಶದ ಅತ್ಯಂತ ಹಳೆಯ ದೇಗುಲಗಳಲ್ಲಿ ಒಂದಾದ ಅಂಕಾಳಮ್ಮ ದೇವಾಲಯದ ಬಳಿ ಕಂಡುಬಂದಿವೆ ಎಂದು ಅವರು ಹೇಳಿದರು. 

ಮಧ್ಯಕಾಲೀನ ಕಾಲದಲ್ಲಿ, ಸರಿಯಾದ ಬ್ಯಾಂಕಿಂಗ್ ವ್ಯವಸ್ಥೆ ಇಲ್ಲದ ಕಾರಣ ಜನರು ತಮ್ಮ ಹಣವನ್ನು ದೇವಸ್ಥಾನಗಳಲ್ಲಿ ಠೇವಣಿ ಇಡುತ್ತಿದ್ದರು. ಆಂಧ್ರ ಪ್ರದೇಶದ ರಾಜ್ಯ ಪುರಾತತ್ವ ಇಲಾಖೆ ಇನ್ನೂ ಚಿನ್ನದ ನಾಣ್ಯಗಳನ್ನು ಸ್ವಾಧೀನಪಡಿಸಿಕೊಳ್ಳಬೇಕಿದೆ.

ಸದ್ಯ ದೊರಕಿರುವ ವಿಜಯನಗರ ಸಾಮ್ರಾಜ್ಯಕ್ಕೆ ಸೇರಿದ ಚಿನ್ನದ ನಾಣ್ಯಗಳನ್ನು ಸಂರಕ್ಷಿಸುವಂತೆ ತಿರುಪತಿಯ ಸಂಸದರನ್ನು ಮುನಿರತ್ನಂ ಒತ್ತಾಯಿಸಿದ್ದಾರೆ. ಇವುಗಳನ್ನು ಹೊಸ ಎಎಸ್‌ಐ ಮ್ಯೂಸಿಯಂನಲ್ಲಿ ಪ್ರದರ್ಶಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT