ಸುಪ್ರೀಂಕೋರ್ಟ್ 
ದೇಶ

ಸಾಯುವ ಸಮಯದಲ್ಲಿ ನೀಡಿದ ಹೇಳಿಕೆ ಅಪರಾಧ ನಿರ್ಣಯಕ್ಕೆ ಆಧಾರವಾಗಿರುವುದಿಲ್ಲ: ಸುಪ್ರೀಂ ಕೋರ್ಟ್

ಮಹತ್ವದ ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ ನೀಡಿದೆ. ಸಾಯುವ ಸಮಯದಲ್ಲಿ ನೀಡುವ ಹೇಳಿಕೆಗಳನ್ನು ಅವಲಂಬಿಸುವಾಗ ನ್ಯಾಯಾಲಯಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. 

ನವದೆಹಲಿ: ಮಹತ್ವದ ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ ನೀಡಿದೆ. ಸಾಯುವ ಸಮಯದಲ್ಲಿ ನೀಡುವ ಹೇಳಿಕೆಗಳನ್ನು ಅವಲಂಬಿಸುವಾಗ ನ್ಯಾಯಾಲಯಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. 

ಹೇಳಿಕೆಯ ನಿಖರತೆಗೆ ಸಂಬಂಧಿಸಿದಂತೆ ಸಂಶಯವಿದ್ದು ಕೊಲೆ ಪ್ರಕರಣದಲ್ಲಿ ಸಾಯುವ ಮುನ್ನ ಸಂತ್ರಸ್ತರು ನೀಡುವ ಹೇಳಿಕೆ ಆರೋಪಿಯ ಶಿಕ್ಷೆಗೆ ಏಕೈಕ ಆಧಾರವಾಗಿರಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

2014ರಲ್ಲಿ ಉತ್ತರಪ್ರದೇಶದಲ್ಲಿ ನಡೆದಿದ್ದ ಮೂವರ ಹತ್ಯೆ ಪ್ರಕರಣದಲ್ಲಿ ವ್ಯಕ್ತಿಯೋರ್ವನಿಗೆ ತಪ್ಪಿತಸ್ಥನೆಂದು ಪರಿಗಣಿಸಿ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಇರ್ಫಾನ್ ತನ್ನ ಇಬ್ಬರು ಸಹೋದರರು ಮತ್ತು ಅವನ ಮಗನನ್ನು ಕೊಲೆ ಮಾಡಿದ ಆರೋಪದಲ್ಲಿ ಶಿಕ್ಷೆಗೊಳಗಾದ್ದನು. ಅವರು ಮಲಗಿದ್ದಾಗ ಬೆಂಕಿ ಹಚ್ಚಿ ಕೊಠಡಿಗೆ ಬೀಗ ಹಾಕಿದ್ದರು ಎನ್ನಲಾಗಿದೆ. ಇರ್ಫಾನ್ ಎರಡನೇ ಮದುವೆಯಾಗುವ ಇಚ್ಛೆಗೆ ಭಿನ್ನಾಭಿಪ್ರಾಯವೇ ಕಾರಣ ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು. 

ಇನ್ನು ನೆರೆಹೊರೆಯವರು ಮತ್ತು ಇತರ ಕುಟುಂಬ ಸದಸ್ಯರು ಮೂವರನ್ನೂ ರಕ್ಷಿಸಲು ಪ್ರಯತ್ನಿಸಿದ್ದರು. ಆದರೆ ಅಂತಿಮವಾಗಿ ಆಸ್ಪತ್ರೆಯಲ್ಲಿ ಅವರು ಸಾವನ್ನಪ್ಪಿದರು. ಈ ಮಧ್ಯೆ ಪೊಲೀಸರು ಮೂರು ಬಲಿಪಶುಗಳಲ್ಲಿ ಇಬ್ಬರ ಮರಣದಂಡನೆ ಹೇಳಿಕೆಗಳನ್ನು ದಾಖಲಿಸುವಲ್ಲಿ ಯಶಸ್ವಿಯಾಗಿದ್ದರು. ಇದು ಪ್ರಕರಣಕ್ಕೆ ಮುಖ್ಯ ಆಧಾರವಾಯಿತು. ಇಬ್ಬರು ಸಾಯುವ ಮುನ್ನ ನೀಡಿದ್ದ ಹೇಳಿಕೆ ಆಧಾರದ ಮೇಲೆ, ಸೆಷನ್ಸ್ ನ್ಯಾಯಾಲಯವು ಶಿಕ್ಷೆಗೆ ವಿಧಿಸಿತ್ತು. ನಂತರ ಅಲಹಾಬಾದ್ ಹೈಕೋರ್ಟ್ 2018ರಲ್ಲಿ ಈ ತೀರ್ಪನ್ನು ಎತ್ತಿಹಿಡಿದಿತ್ತು.

ಆದಾಗ್ಯೂ, ಪ್ರಾಸಿಕ್ಯೂಷನ್ ತನ್ನ ಪ್ರಕರಣವನ್ನು ಅನುಮಾನಾಸ್ಪದವಾಗಿ ಸಾಬೀತುಪಡಿಸಿದೆ. ಇದರಿಂದ ತೃಪ್ತಿ ಹೊಂದಿಲ್ಲ ಎಂದ ಸುಪ್ರೀಂಕೋರ್ಟ್ ಹೇಳಿದ್ದು ತಕ್ಷಣವೇ ಇರ್ಫಾನ್ ನನ್ನು ಬಿಡುಗಡೆ ಮಾಡಲು ಆದೇಶಿಸಿದೆ. ವ್ಯಕ್ತಿಯೊಬ್ಬ ಶೇಕಡಾ 80ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿರುವಾಗ ಈ ಘೋಷಣೆಗಳನ್ನು ಮಾಡಲಾಗಿದೆ ಎಂಬ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಅವರ ವಾದವನ್ನು ನ್ಯಾಯಾಲಯ ಒಪ್ಪಿಕೊಂಡಿದ್ದು, ಅವರ ಮಾನಸಿಕ ಸ್ಥಿತಿಯನ್ನು ಪ್ರಶ್ನಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿನಿಮಾ ಟಿಕೆಟ್, ಟಿವಿ ಚಾನಲ್ ಗಳ ಮೇಲೆ ಶೇ.2 ರಷ್ಟು ಸೆಸ್ ವಿಧಿಸಲು ರಾಜ್ಯ ಸರ್ಕಾರ ಮುಂದು: ಇದರ ಪರಿಣಾಮ ಏನು...?

Israel 'must finish the job: ವಿಶ್ವಸಂಸ್ಥೆಯಲ್ಲಿ ನೆತನ್ಯಾಹು 'ಉದ್ಧಟತನದ ಭಾಷಣ'; ಅನೇಕ ರಾಷ್ಟ್ರಗಳ ಪ್ರತಿನಿಧಿಗಳು walk out!

'ಭಾರತ ಶತ್ರು ರಾಷ್ಟ್ರ.. Donald Trump ನೊಬೆಲ್ ಪ್ರಶಸ್ತಿಗೆ ಅರ್ಹ'; ಪರಮಾಣು ಯುದ್ಧದ ಉಲ್ಲೇಖ ಮಾಡಿದ ಪಾಕ್ ಪ್ರಧಾನಿ Shehbaz Sharif

ಅತ್ತ ವಿಶ್ವಸಂಸ್ಥೆಯಲ್ಲಿ Netanyahu ಭಾಷಣ, ಇತ್ತ Gazaದಲ್ಲಿ Israeli Army ಕಂಡು ಕೇಳರಿಯದ ಕ್ರಮ!

Asia Cup 2025: Abhishek Sharma, Tilak Varma ಭರ್ಜರಿ ಬ್ಯಾಟಿಂಗ್, Srilanka ಗೆ ಬೃಹತ್ ಗುರಿ ನೀಡಿದ ಭಾರತ

SCROLL FOR NEXT