ನುಹ್ ಜಿಲ್ಲೆಯಲ್ಲಿ ಹಿಂಸಾಚಾರ 
ದೇಶ

ನುಹ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎನ್ಐಎ ತನಿಖೆಗೆ ಆದೇಶಿಸುವಂತೆ ಸುಪ್ರೀಂ ಗೆ ಅರ್ಜಿ 

ಹರ್ಯಾಣದ ನುಹ್ ಜಿಲ್ಲೆಯಲ್ಲಿ ಹಿಂದೂ ಸಮುದಾಯವನ್ನು ಟಾರ್ಗೆಟ್ ಮಾಡಿ ಹಿಂಸಾಚಾರ ನಡೆಸಿದ್ದರ ಬಗ್ಗೆ ಎನ್ಐಎ ತನಿಖೆಗೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.

ನವದೆಹಲಿ: ಹರ್ಯಾಣದ ನುಹ್ ಜಿಲ್ಲೆಯಲ್ಲಿ ಹಿಂದೂ ಸಮುದಾಯವನ್ನು ಟಾರ್ಗೆಟ್ ಮಾಡಿ ಹಿಂಸಾಚಾರ ನಡೆಸಿದ್ದರ ಬಗ್ಗೆ ಎನ್ಐಎ ತನಿಖೆಗೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.
 
ಪ್ರದೀಪ್ ಭಂಡಾರಿ ಹಾಗೂ ರತನ್ ಶಾರ್ದ ಅವರು ಶಶಾಂಕ್ ಶೇಖರ್ ಝಾ ಹಾಗೂ ಮಂಜು ಜೇಟ್ಲಿ ಶರ್ಮಾ ಎಂಬ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದಾರೆ.

ಮನವಿಯಲ್ಲಿ, ಅರ್ಜಿದಾರರು ಮೂಲಭೂತ ಹಕ್ಕುಗಳನ್ನು ಜಾರಿಗೊಳಿಸಲು, ವಿಶೇಷವಾಗಿ ಕಾನೂನಿನ ಮುಂದೆ ಸಮಾನತೆಯ ಹಕ್ಕು (ಆರ್ಟಿಕಲ್ 14), ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ (ಆರ್ಟಿಕಲ್ 19), ಜೀವನ ಹಕ್ಕು (ಆರ್ಟಿಕಲ್ 21) ಮತ್ತು ಆತ್ಮಸಾಕ್ಷಿಯ ಸ್ವಾತಂತ್ರ್ಯ ಮತ್ತು ಮುಕ್ತ ವೃತ್ತಿ, ಆಚರಣೆ ಮತ್ತು ಧರ್ಮದ ಪ್ರಚಾರ (ಆರ್ಟಿಕಲ್ 25)  ಮನವಿ ಮಾಡಿದ್ದಾರೆ. 

"ಹರ್ಯಾಣದ ನುಹ್ ಜಿಲ್ಲೆ ಮತ್ತು ಗುರುಗ್ರಾಮ್ ಮತ್ತು ಸೋಹ್ನಾ ಸೇರಿದಂತೆ ಹತ್ತಿರದ ಪ್ರದೇಶಗಳಲ್ಲಿ ಹಿಂದೂ ಸಮುದಾಯ ಅಸ್ವಾಭಾವಿಕ ಸಾವುಗಳು ಮತ್ತು ಕೋಮುಗಲಭೆಗೆ ಗುರಿಯಾಗಿದೆ. ಘಟನೆಗಳ ಸರಣಿಯು ಸಂತ್ರಸ್ತರ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ (ಆರ್ಟಿಕಲ್ 19) ಮತ್ತು ಹಕ್ಕನ್ನು ಉಲ್ಲಂಘಿಸಿದೆ ಮಾತ್ರವಲ್ಲ, ಆರ್ಟಿಕಲ್ 21 ರ ಅಡಿಯಲ್ಲಿ ಜೀವನ ಹಕ್ಕನ್ನೂ ಉಲ್ಲಂಘಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ, ”ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಆದ್ದರಿಂದ ಈ ಗಲಭೆ ಪ್ರಕರಣಗಳ ಬಗ್ಗೆ ಕೋರ್ಟ್ ಮೇಲ್ವಿಚಾರಣೆಯಲ್ಲಿ  ಎನ್ಐಎ ತನಿಖೆ ನಡೆಸಲು ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಮನವಿ ಮಾಡಿದ್ದಾರೆ. 

ಇದಷ್ಟೇ ಅಲ್ಲದೇ ನುಹ್ ನಿಂದ ಹೊರಭಾಗದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಬೇಕು, ಮೃತರ ಕುಟುಂಬಕ್ಕೆ 1 ಕೋಟಿ ರೂಪಾಯಿ ಹಾಗೂ ಗಾಯಗೊಂಡರೆ 20 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಹರಿಯಾಣಕ್ಕೆ ನಿರ್ದೇಶನ ನೀಡುವಂತೆ ಮನವಿಯಲ್ಲಿ ಕೋರಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT