ಪ್ರಾತಿನಿಧಿಕ ಚಿತ್ರ 
ದೇಶ

ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮ: ಕುಚಲಕ್ಕಿ ರಫ್ತಿಗೆ ಶೇ 20ರಷ್ಟು ಸುಂಕ ವಿಧಿಸಿದ ಕೇಂದ್ರ ಸರ್ಕಾರ

ದೇಶೀಯ ಮಾರುಕಟ್ಟೆಯಲ್ಲಿ ಅಗತ್ಯ ದಾಸ್ತಾನು ಮತ್ತು ಬೆಲೆ ಏರಿಕೆಯನ್ನು ನಿಯಂತ್ರಣದಲ್ಲಿಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕುಚಲಕ್ಕಿ ರಫ್ತಿನ ಮೇಲೆ ಶೇ 20ರಷ್ಟು ಸುಂಕ ವಿಧಿಸಿದೆ.

ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಅಗತ್ಯ ದಾಸ್ತಾನು ಮತ್ತು ಬೆಲೆ ಏರಿಕೆಯನ್ನು ನಿಯಂತ್ರಣದಲ್ಲಿಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕುಚಲಕ್ಕಿ ರಫ್ತಿನ ಮೇಲೆ ಶೇ 20ರಷ್ಟು ಸುಂಕ ವಿಧಿಸಿದೆ.

ಆಗಸ್ಟ್ 25 ರಿಂದ ಜಾರಿಗೆ ಬರುವಂತೆ ರಫ್ತು ಸುಂಕ ವಿಧಿಸಲಾಗಿದ್ದು, ಅಕ್ಟೋಬರ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ಹಣಕಾಸು ಸಚಿವಾಲಯ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಿದೆ.

ಇನ್ನೂ ಲೆಟ್ ರಫ್ತು ಆದೇಶ (ಎಲ್ಇಒ) ಪಡೆಯದ ಮತ್ತು ಆಗಸ್ಟ್ 25ರ ಮೊದಲು ಮಾನ್ಯವಾದ ಲೆಟರ್ ಆಫ್ ಕ್ರೆಡಿಟ್ (ಎಲ್‌ಸಿ) ನಿಂದ ಬೆಂಬಲಿತವಾಗಿರುವ ಕಸ್ಟಮ್ಸ್ ಪೋರ್ಟ್‌ಗಳಲ್ಲಿ ದಾಸ್ತಾನಿರುವ ಕುಚಲಕ್ಕಿ ಮೇಲೆ ಸುಂಕ ವಿನಾಯಿತಿ ಲಭ್ಯವಿರುತ್ತದೆ.

ಬಾಸ್ಮತಿ ಅಕ್ಕಿಯನ್ನು ಹೊರತುಪಡಿಸಿ ಇತರ ಬಗೆಯ ಎಲ್ಲಾ ಅಕ್ಕಿ ರಫ್ತಿಗೆ ಕೇಂದ್ರ ಸರ್ಕಾರವು ಈಗಾಗಲೇ ನಿಷೇಧ ಹೇರಿದೆ.
ದೇಶದಿಂದ ರಫ್ತಾಗುವ ಒಟ್ಟು ಅಕ್ಕಿಯ ಸರಿಸುಮಾರು ಶೇ 25 ರಷ್ಟು ಬಾಸುಮತಿ ಅಲ್ಲದ ಬಿಳಿ ಅಕ್ಕಿಯಾಗಿದೆ. 

ಕಳೆದ ತಿಂಗಳು, ಮುಂಬರುವ ಹಬ್ಬದ ಋತುವಿನಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಪೂರೈಕೆ ಹೆಚ್ಚಿಸಲು ಮತ್ತು ಬೆಲೆ ಏರಿಕೆಯನ್ನು ನಿಯಂತ್ರಣದಲ್ಲಿಡಲು ಸರ್ಕಾರವು ಬಾಸ್ಮತಿಯೇತರ ಬಿಳಿ ಅಕ್ಕಿಯ ರಫ್ತನ್ನು ನಿಷೇಧಿಸಿತು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಒಡೆದ ಅಕ್ಕಿಯನ್ನು ರಫ್ತು ಮಾಡುವುದನ್ನು ನಿಷೇಧಿಸಲಾಗಿತ್ತು.

ಈ ಆರ್ಥಿಕ ವರ್ಷದ ಏಪ್ರಿಲ್-ಜೂನ್ ಅವಧಿಯಲ್ಲಿ, ಸುಮಾರು 15.54 ಲಕ್ಷ ಟನ್ ಬಾಸ್ಮತಿ ಅಲ್ಲದ ಬಿಳಿ ಅಕ್ಕಿಯನ್ನು ರಫ್ತು ಮಾಡಲಾಗಿದ್ದು, ಹಿಂದಿನ ವರ್ಷದ ಅವಧಿಯಲ್ಲಿ ಕೇವಲ 11.55 ಲಕ್ಷ ಟನ್‌ ರಫ್ತು ಮಾಡಲಾಗಿತ್ತು. ಆಹಾರ ಧಾನ್ಯಗಳ ಬೆಲೆ ಏರಿಕೆ ಮತ್ತು ಹೆಚ್ಚಿನ ರಫ್ತಿನ ಕಾರಣ ಬಾಸ್ಮತಿ ಅಲ್ಲದ ಬಿಳಿ ಅಕ್ಕಿ ರಫ್ತಿನ ಮೇಲೆ ನಿಷೇಧ ಹೇರಲಾಯಿತು.

ಒಂದು ವಾರದ ಹಿಂದೆ, ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ಪೂರೈಕೆಯನ್ನು ಸುಧಾರಿಸುವ ಉದ್ದೇಶದಿಂದ ಭಾರತವು ಈರುಳ್ಳಿ ರಫ್ತಿನ ಮೇಲೆ ಶೇ 40ರಷ್ಟು ರಫ್ತು ಸುಂಕ ವಿಧಿಸಿತ್ತು.

ಕೃಷಿ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತದ ಅಕ್ಕಿ ಉತ್ಪಾದನೆಯು ಹಿಂದಿನ ವರ್ಷದಲ್ಲಿ 129.47 ಮಿಲಿಯನ್ ಟನ್‌ಗಳಿಂದ 2022-23 ಬೆಳೆ ವರ್ಷದಲ್ಲಿ (ಜುಲೈ-ಜೂನ್) 135.54 ಮಿಲಿಯನ್ ಟನ್‌ಗಳಿಗೆ ಏರಿದೆ ಎಂದು ಅಂದಾಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT