ನುಹ್ ಹಿಂಸಾಚಾರದ ದೃಶ್ಯಗಳು 
ದೇಶ

ಶೋಭಾ ಯಾತ್ರೆಗೂ ಮುನ್ನ ಕೋಮು ಗಲಭೆ ಪೀಡಿತ ನುಹ್ ನಲ್ಲಿ ಅಂತರ್ಜಾಲ ಸಂಪರ್ಕ ಕಡಿತ, ಸೆಕ್ಷನ್ 144 ಜಾರಿ

ಹರ್ಯಾಣ ಸರ್ಕಾರ ಗಲಭೆ ಪೀಡಿತ ನುಹ್ ನಲ್ಲಿ ಅಂತರ್ಜಾಲ ಸಂಪರ್ಕ ಕಡಿತಗೊಳಿಸಲಾಗಿದ್ದು ಸೆಕ್ಷನ್ 144 ಜಾರಿಗೊಳಿಸಿದೆ.

ಚಂಡೀಗಢ: ಹರ್ಯಾಣ ಸರ್ಕಾರ ಗಲಭೆ ಪೀಡಿತ ನುಹ್ ನಲ್ಲಿ ಅಂತರ್ಜಾಲ ಸಂಪರ್ಕ ಕಡಿತಗೊಳಿಸಲಾಗಿದ್ದು ಸೆಕ್ಷನ್ 144 ಜಾರಿಗೊಳಿಸಿದೆ.

ಶೋಭಾ ಯಾತ್ರೆಗೆ ಕರೆ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಆ.28 ವರೆಗೆ ಮೊಬೈಲ್ ಇಂಟರ್ ನೆಟ್ ಸೇವೆಗಳು, ಎಸ್ಎಂಎಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಸೋಮವಾರದಂದು ರ್ಯಾಲಿ ನಡೆಯಲಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳು ಹಬ್ಬುವುದನ್ನು ತಡೆಗಟ್ಟಲು ಹರ್ಯಾಣ ಸರ್ಕಾರ ಈ ಕ್ರಮ ಕೈಗೊಂಡಿದೆ. 

ಜುಲೈನಲ್ಲಿ ಕೋಮುಗಲಭೆಯ ನಂತರ ನಂತರ ಆಗಸ್ಟ್ 28 ರಂದು ಜಿಲ್ಲೆಯಲ್ಲಿ ಧಾರ್ಮಿಕ ಮೆರವಣಿಗೆ ನಡೆಸಲು ನುಹ್ ಅಧಿಕಾರಿಗಳು ಇತ್ತೀಚೆಗೆ ಅನುಮತಿ ನಿರಾಕರಿಸಿದ್ದರು.

ಜಿಲ್ಲಾಡಳಿತವು ಸಿಆರ್‌ಪಿಸಿಯ ಸೆಕ್ಷನ್ 144 ಅನ್ನು ವಿಧಿಸಿದೆ, ಮುನ್ನೆಚ್ಚರಿಕೆ ಕ್ರಮವಾಗಿ ಒಂದು ಪ್ರದೇಶದಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಿದೆ.

ಆ.26 ರಿಂದ 28 ವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅವಧಿಯಲ್ಲಿ ಯಾವುದೇ ವ್ಯಕ್ತಿಗಳು ಪರವಾನಗಿ ಪಡೆದ ಬಂದೂಕುಗಳು, ಲಾಠಿಗಳು, ಕೊಡಲಿಗಳು ಮತ್ತು ಇತರ ಆಯುಧಗಳನ್ನು ಸಾಗಿಸಲು ಅವಕಾಶವಿಲ್ಲ ಎಂದು ಎಚ್ಚರಿಕೆ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT