ಹೊತ್ತಿ ಉರಿದ ಬೋಗಿ 
ದೇಶ

ಮಧುರೈ ರೈಲಿಗೆ ಬೆಂಕಿ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಟೂರ್ ಆಪರೇಟರ್ ವಿರುದ್ಧ ಕೇಸ್ ದಾಖಲು

9 ಜನರ ಸಜೀವ ದಹನಕ್ಕೆ ಕಾರಣವಾದ ಮಧುರೈ ರೈಲು ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಗ್ಯಾಸ್ ಸಿಲಿಂಡರ್ ಅನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಸರ್ಕಾರಿ ರೈಲ್ವೆ ಪೊಲೀಸರು(ಜಿಆರ್‌ಪಿ) ಟೂರ್ ಆಪರೇಟರ್ ವಿರುದ್ಧ ಕ್ರಿಮಿನಲ್...

ಮಧುರೈ: 9 ಜನರ ಸಜೀವ ದಹನಕ್ಕೆ ಕಾರಣವಾದ ಮಧುರೈ ರೈಲು ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಗ್ಯಾಸ್ ಸಿಲಿಂಡರ್ ಅನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಸರ್ಕಾರಿ ರೈಲ್ವೆ ಪೊಲೀಸರು(ಜಿಆರ್‌ಪಿ) ಟೂರ್ ಆಪರೇಟರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ.

"ಟೂರಿಸ್ಟ್ ಕೋಚ್‌ನಲ್ಲಿ ಅಡುಗೆ ಅನಿಲ ಸಿಲಿಂಡರ್‌ ಅನ್ನು 'ಅಕ್ರಮವಾಗಿ ಸಾಗಿಸಿದ' ಟೂರ್ ಆಪರೇಟರ್‌ ವಿರುದ್ಧ ಜಿಆರ್‌ಪಿಯು ಐಪಿಸಿ ಮತ್ತು ರೈಲ್ವೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದೆ" ಎಂದು ದಕ್ಷಿಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಐಆರ್‌ಸಿಟಿಸಿಯ ಸಹಯೋಗದೊಂದಿಗೆ ದಕ್ಷಿಣ ರೈಲ್ವೆಯು ಬದುಕುಳಿದ ಪ್ರಯಾಣಿಕರನ್ನು ಲಖನೌ ಕಳುಹಿಸಲು ವಿಮಾನ ಪ್ರಯಾಣದ ವ್ಯವಸ್ಥೆ ಮಾಡುತ್ತದೆ ಎಂದು ಪ್ರಕಟಣೆ ಹೇಳಿದೆ.

ಇಂದು ಬೆಳಗಿನ ಜಾವ ತಮಿಳುನಾಡಿನ ಮಧುರೈ ರೈಲು ನಿಲ್ದಾಣದಲ್ಲಿ ಲಖನೌ–ರಾಮೇಶ್ವರಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿ 9 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!