ಹೊತ್ತಿ ಉರಿದ ಬೋಗಿ 
ದೇಶ

ಮಧುರೈ ರೈಲಿನಲ್ಲಿ ಬೆಂಕಿ ಅವಘಡ: ರೈಲ್ವೆ ಸುರಕ್ಷತಾ ಆಯುಕ್ತರಿಂದ ತನಿಖೆ

ಮಧುರೈನಲ್ಲಿ ಶನಿವಾರ ರೈಲ್ವೆ ಕೋಚ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಆಗಸ್ಟ್ 27 ರಂದು ಕಾನೂನುಬದ್ಧ ತನಿಖೆ ನಡೆಸುವುದಾಗಿ ದಕ್ಷಿಣ ರೈಲ್ವೆ ಪ್ರಕಟಿಸಿದೆ.

ಚೆನ್ನೈ: ಮಧುರೈನಲ್ಲಿ ಶನಿವಾರ ರೈಲ್ವೆ ಕೋಚ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಆಗಸ್ಟ್ 27 ರಂದು ಕಾನೂನುಬದ್ಧ ತನಿಖೆ ನಡೆಸುವುದಾಗಿ ದಕ್ಷಿಣ ರೈಲ್ವೆ ಪ್ರಕಟಿಸಿದೆ.

ಬೆಂಗಳೂರಿನ ದಕ್ಷಿಣ ವೃತ್ತದ ರೈಲ್ವೆ ಸುರಕ್ಷತಾ ಆಯುಕ್ತ ಎ ಎಂ ಚೌಧರಿ ಅವರು ಭಾನುವಾರ ಮಧುರೈನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿ ಸಂಕೀರ್ಣದಲ್ಲಿರುವ ಡಿಆರ್‌ಎಂ ಸಮ್ಮೇಳನ ಸಭಾಂಗಣದಲ್ಲಿ ವಿಚಾರಣೆ ನಡೆಸಲಿದ್ದಾರೆ.

"ಘಟನೆಯ ಬಗ್ಗೆ ಮಾಹಿತಿ ಹೊಂದಿರುವ ಮತ್ತು ಸಾಕ್ಷ್ಯ ನೀಡಲು ಬಯಸುವ ಯಾವುದೇ ಸಾರ್ವಜನಿಕರು ಮಧುರೈ ಆಗಮಿಸಿ ಚೌಧರಿ ಅವರಿಗೆ ಮಾಹಿತಿ ನೀಡಬಹುದು ಅಥವಾ ದಕ್ಷಿಣ ವೃತ್ತದ ರೈಲ್ವೆ ಸುರಕ್ಷತಾ ಆಯುಕ್ತರಿಗೆ ಪತ್ರ ಬರೆಯಬಹುದು" ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಇಂದು ಬೆಳಗಿನ ಜಾವ ತಮಿಳುನಾಡಿನ ಮಧುರೈ ರೈಲು ನಿಲ್ದಾಣದಲ್ಲಿ ಲಖನೌ–ರಾಮೇಶ್ವರಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿ 10 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT