ಹೊತ್ತಿ ಉರಿದ ಬೋಗಿ 
ದೇಶ

ಮಧುರೈ ರೈಲಿನಲ್ಲಿ ಬೆಂಕಿ ಅವಘಡ: ರೈಲ್ವೆ ಸುರಕ್ಷತಾ ಆಯುಕ್ತರಿಂದ ತನಿಖೆ

ಮಧುರೈನಲ್ಲಿ ಶನಿವಾರ ರೈಲ್ವೆ ಕೋಚ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಆಗಸ್ಟ್ 27 ರಂದು ಕಾನೂನುಬದ್ಧ ತನಿಖೆ ನಡೆಸುವುದಾಗಿ ದಕ್ಷಿಣ ರೈಲ್ವೆ ಪ್ರಕಟಿಸಿದೆ.

ಚೆನ್ನೈ: ಮಧುರೈನಲ್ಲಿ ಶನಿವಾರ ರೈಲ್ವೆ ಕೋಚ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಆಗಸ್ಟ್ 27 ರಂದು ಕಾನೂನುಬದ್ಧ ತನಿಖೆ ನಡೆಸುವುದಾಗಿ ದಕ್ಷಿಣ ರೈಲ್ವೆ ಪ್ರಕಟಿಸಿದೆ.

ಬೆಂಗಳೂರಿನ ದಕ್ಷಿಣ ವೃತ್ತದ ರೈಲ್ವೆ ಸುರಕ್ಷತಾ ಆಯುಕ್ತ ಎ ಎಂ ಚೌಧರಿ ಅವರು ಭಾನುವಾರ ಮಧುರೈನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿ ಸಂಕೀರ್ಣದಲ್ಲಿರುವ ಡಿಆರ್‌ಎಂ ಸಮ್ಮೇಳನ ಸಭಾಂಗಣದಲ್ಲಿ ವಿಚಾರಣೆ ನಡೆಸಲಿದ್ದಾರೆ.

"ಘಟನೆಯ ಬಗ್ಗೆ ಮಾಹಿತಿ ಹೊಂದಿರುವ ಮತ್ತು ಸಾಕ್ಷ್ಯ ನೀಡಲು ಬಯಸುವ ಯಾವುದೇ ಸಾರ್ವಜನಿಕರು ಮಧುರೈ ಆಗಮಿಸಿ ಚೌಧರಿ ಅವರಿಗೆ ಮಾಹಿತಿ ನೀಡಬಹುದು ಅಥವಾ ದಕ್ಷಿಣ ವೃತ್ತದ ರೈಲ್ವೆ ಸುರಕ್ಷತಾ ಆಯುಕ್ತರಿಗೆ ಪತ್ರ ಬರೆಯಬಹುದು" ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಇಂದು ಬೆಳಗಿನ ಜಾವ ತಮಿಳುನಾಡಿನ ಮಧುರೈ ರೈಲು ನಿಲ್ದಾಣದಲ್ಲಿ ಲಖನೌ–ರಾಮೇಶ್ವರಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿ 10 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT