ಚಂದ್ರಯಾನ-3 ಯಶಸ್ಸಿನ ನಂತರ ಇಸ್ರೊ ವಿಜ್ಞಾನಿಗಳ ತಂಡ 
ದೇಶ

ಮಂಗಳ, ಶುಕ್ರ ಗ್ರಹಕ್ಕೆ ಮಿಷನ್ ಕಳುಹಿಸುವ ಸಾಮರ್ಥ್ಯ ಭಾರತಕ್ಕಿದೆ, ಮುಂದಿನ ವಾರ ಆದಿತ್ಯ ಎಲ್1 ಉಡಾವಣೆ: ಇಸ್ರೋ ಮುಖ್ಯಸ್ಥ ಸೋಮನಾಥ್

ಭಾರತವು ಚಂದ್ರ, ಮಂಗಳ ಮತ್ತು ಶುಕ್ರ ಗ್ರಹಗಳಿಗೆ ಪ್ರಯಾಣಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಅಧ್ಯಕ್ಷ ಎಸ್ ಸೋಮನಾಥ್ ಹೇಳಿದ್ದಾರೆ.

ತಿರುವನಂತಪುರ: ಭಾರತವು ಚಂದ್ರ, ಮಂಗಳ ಮತ್ತು ಶುಕ್ರ ಗ್ರಹಗಳಿಗೆ ಪ್ರಯಾಣಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಅಧ್ಯಕ್ಷ ಎಸ್ ಸೋಮನಾಥ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ದೂರದೃಷ್ಟಿಯನ್ನು ಈಡೇರಿಸಲು ಇಸ್ರೋ ಸಿದ್ಧವಾಗಿದೆ ಎಂದು ಕೂಡ ಕಳೆದ ರಾತ್ರಿ ತಿರುವನಂತಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. 

ಭಾರತವು ಚಂದ್ರ, ಮಂಗಳ ಮತ್ತು ಶುಕ್ರಕ್ಕೆ ಪ್ರಯಾಣಿಸುವ ಸಾಮರ್ಥ್ಯವನ್ನು ಹೊಂದಿದೆ. ನಾವು ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಬೇಕಾಗಿದೆ. ನಮಗೆ ಹೆಚ್ಚಿನ ಹೂಡಿಕೆಯ ಅಗತ್ಯವಿದೆ. ಬಾಹ್ಯಾಕಾಶ ಕ್ಷೇತ್ರವು ಅಭಿವೃದ್ಧಿ ಹೊಂದಬೇಕು. ಇದರಿಂದ ಇಡೀ ರಾಷ್ಟ್ರವು ಅಭಿವೃದ್ಧಿ ಹೊಂದುತ್ತದೆ, ಅದು ನಮ್ಮ ಧ್ಯೇಯವಾಗಿದೆ. ನಾವು ಪ್ರಧಾನಿ ಮೋದಿಯವರು ನಮಗೆ ನೀಡಿದ ದೂರದೃಷ್ಟಿಯನ್ನು ಈಡೇರಿಸಲು ಸಿದ್ಧ ಎಂದು ಹೇಳಿದರು.

ಆದಿತ್ಯ ಎಲ್ 1 ಉಪಗ್ರಹ ಸಿದ್ಧ: ಚಂದ್ರನ ಅಜ್ಞಾತ ದಕ್ಷಿಣ ಧ್ರುವ ಪ್ರದೇಶದಲ್ಲಿ ಲ್ಯಾಂಡರ್ ನ್ನು ಯಶಸ್ವಿಯಾಗಿ ಇರಿಸಿದ ನಂತರ ಇಸ್ರೊದ ದೇಶದ ಚೊಚ್ಚಲ ಸೌರ ಮಿಷನ್ ಆದಿತ್ಯ-ಎಲ್ 1 ಸಿದ್ಧವಾಗಿದ್ದು, ಉಡಾವಣೆ ಸೆಪ್ಟೆಂಬರ್ ಮೊದಲ ವಾರದಲ್ಲಿ ಉಡಾವಣೆ ಮಾಡಲಾಗುವುದು ಎಂದರು.

ಆದಿತ್ಯ ಎಲ್1 ಉಪಗ್ರಹ ಸಿದ್ಧವಾಗಿದೆ. ಇದು ಶ್ರೀಹರಿಕೋಟಾ ತಲುಪಿದ್ದು PSLV ಗೆ ಸಂಪರ್ಕ ಹೊಂದಿದೆ. ಇಸ್ರೊ ಮತ್ತು ದೇಶದ ಮುಂದಿನ ಗುರಿ ಅದರ ಉಡಾವಣೆಯಾಗಿದೆ. ಉಡಾವಣೆ ಸೆಪ್ಟೆಂಬರ್ ಮೊದಲ ವಾರದಲ್ಲಿ ನಡೆಯಲಿದೆ. ದಿನಾಂಕವನ್ನು ಇನ್ನೆರಡು ದಿನಗಳಲ್ಲಿ ಪ್ರಕಟಿಸಲಾಗುವುದು ಎಂದರು.

ಉಡಾವಣೆಯ ನಂತರ, ಅದು ದೀರ್ಘವೃತ್ತದ ಕಕ್ಷೆಗೆ ಹೋಗುತ್ತದೆ. ಅಲ್ಲಿಂದ ಅದು ಎಲ್1 ಪಾಯಿಂಟ್‌ಗೆ ಪ್ರಯಾಣಿಸುತ್ತದೆ, ಇದು ಸುಮಾರು 120 ದಿನಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಆದಿತ್ಯ-L1 ಸೂರ್ಯನನ್ನು ಅಧ್ಯಯನ ಮಾಡುವ ಮೊದಲ ಬಾಹ್ಯಾಕಾಶ ಆಧಾರಿತ ಭಾರತೀಯ ವೀಕ್ಷಣಾಲಯವಾಗಿದೆ. ಸೂರ್ಯನ ಮಧ್ಯಭಾಗದಿಂದ ಹೆಸರಿಸಲಾದ ಆದಿತ್ಯ-L1, ಭೂಮಿಯಿಂದ ಸರಿಸುಮಾರು 1.5 ಮಿಲಿಯನ್ ಕಿಲೋಮೀಟರ್ ದೂರದಲ್ಲಿರುವ ಸೂರ್ಯ-ಭೂಮಿಯ ವ್ಯವಸ್ಥೆಯ ಲ್ಯಾಗ್ರೇಂಜ್ ಪಾಯಿಂಟ್ 1 (L1) ಸುತ್ತ ಹಾಲೋ ಕಕ್ಷೆಯಲ್ಲಿ ತನ್ನನ್ನು ತಾನು ಇರಿಸಿಕೊಳ್ಳುವ ಮೂಲಕ ಸೂರ್ಯನ ವರ್ತನೆಯ ಬಗ್ಗೆ ಅಭೂತಪೂರ್ವ ಒಳನೋಟಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!