ನಿತೀಶ್ ಕುಮಾರ್ 
ದೇಶ

ಮುಂಬೈ ಸಭೆಯಲ್ಲಿ ಇನ್ನಷ್ಟು ಪ್ರಾದೇಶಿಕ ಪಕ್ಷಗಳು 'INDIA' ಸೇರಬಹುದು: ನಿತೀಶ್ ಕುಮಾರ್

ಮುಂಬೈನಲ್ಲಿ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ನಡೆಯಲಿರುವ ಪ್ರತಿಪಕ್ಷಗಳ ನಾಯಕರ ಸಭೆಯಲ್ಲಿ ಇನ್ನಷ್ಟು ಪ್ರಾದೇಶಿಕ ಪಕ್ಷಗಳು 'INDIA' ಸೇರುವ ಸಾಧ್ಯತೆ ಇದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಭಾನುವಾರ...

ಪಾಟ್ನಾ: ಮುಂಬೈನಲ್ಲಿ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ನಡೆಯಲಿರುವ ಪ್ರತಿಪಕ್ಷಗಳ ನಾಯಕರ ಸಭೆಯಲ್ಲಿ ಇನ್ನಷ್ಟು ಪ್ರಾದೇಶಿಕ ಪಕ್ಷಗಳು 'INDIA' ಸೇರುವ ಸಾಧ್ಯತೆ ಇದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಭಾನುವಾರ ಹೇಳಿದ್ದಾರೆ.

ಈಶಾನ್ಯ ಭಾರತ, ಪೂರ್ವ ರಾಜ್ಯಗಳು, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದ ಪಕ್ಷಗಳು ವಿರೋಧ ಪಕ್ಷದ ಮೈತ್ರಿಕೂಟ 'ಇಂಡಿಯಾ' ಸೇರಲು ಆಸಕ್ತಿ ಹೊಂದಿವೆ ಎಂದು ಜೆಡಿಯು ನಾಯಕ ತಿಳಿಸಿದ್ದಾರೆ. ಆದರೆ, ನಿರ್ದಿಷ್ಟವಾಗಿ ಇಂಡಿಯಾ ಸೇರುವ ಪಕ್ಷಗಳ ಹೆಸರು ಹೇಳಿಲ್ಲ. ಇವೆಲ್ಲವೂ ಪ್ರಾದೇಶಿಕ ಪಕ್ಷಗಳಾಗಿದ್ದು, ಕೇಂದ್ರದ ಬಿಜೆಪಿ ಸರ್ಕಾರವನ್ನು ವಿರೋಧಿಸುತ್ತಿವೆ ಎಂದಿದ್ದಾರೆ.

ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದ 26 ವಿರೋಧ ಪಕ್ಷಗಳು ಸಭೆಯಲ್ಲಿ, ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ‘ಇಂಡಿಯಾ’ ಎಂದು ಹೆಸರು ಘೋಷಿಸಲಾಗಿತ್ತು.

ಮುಂಬೈಯಲ್ಲಿ ನಡೆಯುವ ಪ್ರತಿಪಕ್ಷಗಳ ಸಭೆ ನಿರ್ಣಾಯಕವೆಂದು ಪರಿಗಣಿಸಲಾಗಿದ್ದು, ‘ಇಂಡಿಯಾ’ ಮೈತ್ರಿಕೂಟದ ಸಂಚಾಲಕರ ನೇಮಕ ಮತ್ತು 2024 ರ ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆಯ ಕಾರ್ಯತಂತ್ರವನ್ನು ರೂಪಿಸುವುದು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!