ಅಪಘಾತದ ದೃಶ್ಯ ಹಾಗೂ ವಿಕಾಸ್ ಮಾಲು 
ದೇಶ

ರೋಲ್ಸ್-ರಾಯ್ಸ್- ತೈಲ ಟ್ಯಾಂಕರ್ ಅಪಘಾತ ಪ್ರಕರಣ: ತನಿಖೆಗೆ ಹಾಜರಾಗಲು ಕುಬೇರ್ ಸಮೂಹದ ನಿರ್ದೇಶನಕನಿಗೆ ಸೂಚನೆ 

ರೋಲ್ಸ್-ರಾಯ್ಸ್- ತೈಲ ಟ್ಯಾಂಕರ್ ಅಪಘಾತ ಪ್ರಕರಣದಲ್ಲಿ ಕುಬೇರ್ ಸಮೂಹದ ನಿರ್ದೇಶಕ ವಿಕಾಸ್ ಮಾಲು ಅವರನ್ನು ತನಿಖೆಗೆ ಹಾಜರಾಗುವಂತೆ ಹರ್ಯಾಣ ಪೊಲೀಸರು ಸೂಚಿಸಿದ್ದಾರೆ. 

ನುಹ್: ರೋಲ್ಸ್-ರಾಯ್ಸ್- ತೈಲ ಟ್ಯಾಂಕರ್ ಅಪಘಾತ ಪ್ರಕರಣದಲ್ಲಿ ಕುಬೇರ್ ಸಮೂಹದ ನಿರ್ದೇಶಕ ವಿಕಾಸ್ ಮಾಲು ಅವರನ್ನು ತನಿಖೆಗೆ ಹಾಜರಾಗುವಂತೆ ಹರ್ಯಾಣ ಪೊಲೀಸರು ಸೂಚಿಸಿದ್ದಾರೆ. 

ಈ ಅಪಘಾತದಲ್ಲಿ ವಿಕಾಸ್ ಅವರಿಗೆ ಗಾಯಗಳಾಗಿತ್ತು ಹಾಗೂ ಇಬ್ಬರು ಸಾವನ್ನಪ್ಪಿದ್ದರು. ಮಾಲು ಸೇರಿದಂತೆ ಕಾರಿನಲ್ಲಿದ್ದ ಮೂವರಿಗೆ ತೀವ್ರವಾಗಿ ಗಾಯಗಳಾಗಿತ್ತು. ಹರ್ಯಾಣದ ಉಮ್ರಿ ಗ್ರಾಮದ ಬಳಿ ದೆಹಲಿ-ಮುಂಬೈ-ಬರೋಡಾ ಎಕ್ಸ್ ಪ್ರೆಸ್ ವೇ ನಲ್ಲಿ ಮಂಗಳವಾರ (ಆ.22) ಮಧ್ಯಾಹ್ನ ನಡೆದಿತ್ತು.

ಪ್ರಾಥಮಿಕ ವರದಿಗಳ ಪ್ರಕಾರ ತೈಲ ಟ್ಯಾಂಕರ್ ರಸ್ತೆಯ ತಪ್ಪು ಬದಿಯಲ್ಲಿ ಬರುತ್ತಿದ್ದದ್ದು ಈ ಅಪಘಾತಕ್ಕೆ ಕಾರಣವಾಗಿದೆ. ಈ ರೀತಿ ತಪ್ಪು ದಾರಿಯಲ್ಲಿ ಬರುತ್ತಿದ್ದ ಟ್ಯಾಂಕರ್ ರೋಸ್-ರಾಯ್ಸ್ ಕಾರಿಗೆ ಢಿಕ್ಕಿ ಹೊಡೆದಿದೆ. ಆದರೆ, ಪೊಲೀಸ್ ಠಾಣೆಯಲ್ಲಿ ಅಪಘಾತದ ದಿನ ದಾಖಲಾದ ಎಫ್‌ಐಆರ್ ಪ್ರಕಾರ, ಕಾರು ಹಿಂದಿನಿಂದ ಬಂದು ತೈಲ ಟ್ಯಾಂಕರ್‌ನ ಮುಂಭಾಗದ ಟೈರ್‌ಗೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ, ಟ್ಯಾಂಕರ್ ಪಲ್ಟಿಯಾಗಿದೆ ಎಂದು ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ. ಮಾಲು ಅವರನ್ನು ಅಪಘಾತದ ನಂತರ ವಿಕಾಸ್ ಅವರನ್ನು ಗುರುಗ್ರಾಮದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT