ನುಹ್ ಜಿಲ್ಲೆಯಲ್ಲಿ ಹಿಂಸಾಚಾರ 
ದೇಶ

'ಶೋಭಾ ಯಾತ್ರೆ'ಗೆ ಕರೆ ನೀಡಿದ ನಂತರ ನುಹ್‌ನಲ್ಲಿ ಸೆಕ್ಷನ್ 144 ಜಾರಿ, ಹೊರಗಿನವರಿಗೆ ಪ್ರವೇಶ ನಿಷೇಧ

ಹರಿಯಾಣದ ನುಹ್ ನಲ್ಲಿ ಸರ್ವ ಜಾತಿಯ ಹಿಂದೂ ಮಹಾಪಂಚಾಯತ್‌ ಸೋಮವಾರ ಶೋಭಾ ಯಾತ್ರೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮತ್ತೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಮತ್ತು ಹೊರಗಿನವರಿಗೆ ಪ್ರವೇಶ ನಿಷೇಧಿಸಲಾಗಿದೆ.

ನುಹ್‌: ಹರಿಯಾಣದ ನುಹ್ ನಲ್ಲಿ ಸರ್ವ ಜಾತಿಯ ಹಿಂದೂ ಮಹಾಪಂಚಾಯತ್‌ ಸೋಮವಾರ ಶೋಭಾ ಯಾತ್ರೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮತ್ತೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಮತ್ತು ಹೊರಗಿನವರಿಗೆ ಪ್ರವೇಶ ನಿಷೇಧಿಸಲಾಗಿದೆ.

'ಶೋಭಾ ಯಾತ್ರೆ'ಗೆ ಅಧಿಕಾರಿಗಳು ಅನುಮತಿ ನಿರಾಕರಿಸಿದ್ದರೂ ಮೆರವಣಿಗೆ ನಡೆಸುವುದಾಗಿ ಸರ್ವ ಜಾತಿಯ ಹಿಂದೂ ಮಹಾಪಂಚಾಯತ್‌ ಘೋಷಿಸಿದ ಹಿನ್ನೆಲೆಯಲ್ಲಿ ನುಹ್ ಜಿಲ್ಲೆ ಹಾಗೂ ಇತರ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಕಟ್ಟುನಿಟ್ಟಿನ ನಿಗಾ ಇರಿಸಲು ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದ್ದು, ಅಂತರರಾಜ್ಯ ಮತ್ತು ಅಂತರ ಜಿಲ್ಲಾ ಗಡಿಗಳಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ, ನುಹ್ ಜಿಲ್ಲಾಡಳಿತವು ಈಗಾಗಲೇ ಸೋಮವಾರ ಶಿಕ್ಷಣ ಸಂಸ್ಥೆಗಳು ಮತ್ತು ಬ್ಯಾಂಕ್‌ಗಳನ್ನು ಬಂದ್ ಮಾಡುವಂತೆ ಆದೇಶಿಸಿದೆ. ಮೊಬೈಲ್ ಇಂಟರ್ನೆಟ್ ಮತ್ತು ಬೃಹತ್ SMS ಸೇವೆಗಳನ್ನು ಸ್ಥಗಿತಗೊಳಿಸಿದೆ ಹಾಗೂ ಕೋಮು ಸೂಕ್ಷ್ಮ ಜಿಲ್ಲೆಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ.

ಜುಲೈ 31 ರಂದು ವಿಶ್ವ ಹಿಂದೂ ಪರಿಷತ್ತಿನ ಮೆರವಣಿಗೆ ಮೇಲೆ ಗುಂಪೊಂದು ದಾಳಿ ಮಾಡಿದ ನಂತರ ನುಹ್ ಮತ್ತು ಅದರ ಪಕ್ಕದ ಪ್ರದೇಶಗಳಲ್ಲಿ ಕೋಮು ಘರ್ಷಣೆಗಳು ಭುಗಿಲೆದ್ದಿದ್ದು, ಹಿಂಸಾಚರದಲ್ಲಿ ಇಬ್ಬರು ಗೃಹರಕ್ಷಕರು ಮತ್ತು ಧರ್ಮಗುರು ಸೇರಿದಂತೆ ಆರು ಜನ ಮೃತಪಟ್ಟಿದ್ದಾರೆ.

ಗಲಭೆ ಪೀಡಿತ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ಸರ್ಕಾರದ ಕರ್ತವ್ಯವಾಗಿದೆ. ಹಾಗಾಗಿ ಮೆರವಣಿಗೆಗೆ ಅವಕಾಶ ನೀಡಲು ಸಾಧ್ಯವಿಲ್ಲ. ಕೇವಲ ದೇವಸ್ಥಾನಗಳಿಗೆ ಹೋಗಿ ಪೂಜೆ ಸಲ್ಲಿಸಲಿ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT