ವಿರೋಧಪಕ್ಷಗಳ INDIA ಮೈತ್ರಿಕೂಟದ ನಾಯಕರು 
ದೇಶ

ಮುಂಬೈನಲ್ಲಿ ನಡೆಯುವ ಪ್ರತಿಪಕ್ಷಗಳ ಸಭೆಯಲ್ಲಿ 'ಬಿಜೆಪಿ ಚಲೇ ಜಾವೋ'ಗೆ INDIA ಕರೆ

ಮುಂಬೈನಲ್ಲಿ ನಡೆಯಲಿರುವ ಎರಡು ದಿನಗಳ ಪ್ರತಿಪಕ್ಷಗಳ ಸಭೆಯಲ್ಲಿ 'ಬಿಜೆಪಿ ಚಲೇ ಜಾವೋ'ಗೆ INDIA ಕರೆ ನೀಡಲಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರು ಸೋಮವಾರ ಹೇಳಿದ್ದಾರೆ.

ಮುಂಬೈ: ಮುಂಬೈನಲ್ಲಿ ನಡೆಯಲಿರುವ ಎರಡು ದಿನಗಳ ಪ್ರತಿಪಕ್ಷಗಳ ಸಭೆಯಲ್ಲಿ 'ಬಿಜೆಪಿ ಚಲೇ ಜಾವೋ'ಗೆ INDIA ಕರೆ ನೀಡಲಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರು ಸೋಮವಾರ ಹೇಳಿದ್ದಾರೆ.

ಪ್ರತಿಪಕ್ಷಗಳ ಮೈತ್ರಿಕೂಟ, ಪ್ರಧಾನಿ ಹುದ್ದೆಗೆ ಅನೇಕ ಸಮರ್ಥ ಅಭ್ಯರ್ಥಿಗಳನ್ನು ಹೊಂದಿದೆ ಮತ್ತು ಪ್ರಸ್ತುತ ಭಾರತೀಯ ಜನತಾ ಪಾರ್ಟಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ)ದಲ್ಲಿರುವ ಕೆಲವು ಪಕ್ಷಗಳು ಇಂಡಿಯಾಗೆ ಸೇರಬಹುದು ಎಂದು ಪಟೋಲೆ ಅವರು ತಿಳಿಸಿದ್ದಾರೆ.

ಈಗ ಎರಡು ಡಜನ್‌ಗಿಂತಲೂ ಹೆಚ್ಚು ಪಕ್ಷಗಳನ್ನು ಹೊಂದಿರುವ ಬಿಜೆಪಿ ವಿರೋಧಿ ಬಣ ಇಂಡಿಯಾದ ಪ್ರಮುಖ ನಾಯಕರು ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈ ಉಪನಗರದಲ್ಲಿರುವ ಐಷಾರಾಮಿ ಹೋಟೆಲ್‌ನಲ್ಲಿ ಸಭೆ ನಡೆಸುತ್ತಿದ್ದು, ಇದು ಪ್ರತಿಪಕ್ಷಗಳ ಮೂರನೇ ಸಭೆಯಾಗಿದೆ.

ಇಂದು ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಟೋಲೆ, ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅರ್ಧ ಡಜನ್ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸಭೆಯಲ್ಲಿ ಇಂಡಿಯಾ ಮೈತ್ರಿಕೂಟದ ಲಾಂಛನವನ್ನು ಅನಾವರಣಗೊಳಿಸಲಾಗುವುದು ಮತ್ತು 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ತಮ್ಮ ಕಾರ್ಯಸೂಚಿಯನ್ನು ಪ್ರತಿಪಕ್ಷ ನಾಯಕರು ಚರ್ಚಿಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ತಿಳಿಸಿದ್ದಾರೆ.

ಮಹಾತ್ಮ ಗಾಂಧಿಯವರು 1942 ರಲ್ಲಿ ಮುಂಬೈನಲ್ಲಿಯೇ ಬ್ರಿಟಿಷರಿಗೆ 'ಚಲೇ ಜಾವೋ'(ಭಾರತ ಬಿಟ್ಟು ತೊಲಗಿ) ಘೋಷಣೆ ನೀಡಿದ್ದರು. ಅದೇ ರೀತಿ ಮುಂಬೈನಲ್ಲಿ ನಡೆಯಲಿರುವ ಇಂಡಿಯಾ ಸಮಾವೇಶದಲ್ಲಿ ಮೋದಿ ಸರ್ಕಾರ ‘ಚಲೇ ಜಾವೋ’... ‘ಬಿಜೆಪಿ ‘ಚಲೇ ಜಾವೋ’ ಘೋಷಣೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT