ವಿರೋಧಪಕ್ಷಗಳ INDIA ಮೈತ್ರಿಕೂಟದ ನಾಯಕರು 
ದೇಶ

ಮುಂಬೈನಲ್ಲಿ ನಡೆಯುವ ಪ್ರತಿಪಕ್ಷಗಳ ಸಭೆಯಲ್ಲಿ 'ಬಿಜೆಪಿ ಚಲೇ ಜಾವೋ'ಗೆ INDIA ಕರೆ

ಮುಂಬೈನಲ್ಲಿ ನಡೆಯಲಿರುವ ಎರಡು ದಿನಗಳ ಪ್ರತಿಪಕ್ಷಗಳ ಸಭೆಯಲ್ಲಿ 'ಬಿಜೆಪಿ ಚಲೇ ಜಾವೋ'ಗೆ INDIA ಕರೆ ನೀಡಲಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರು ಸೋಮವಾರ ಹೇಳಿದ್ದಾರೆ.

ಮುಂಬೈ: ಮುಂಬೈನಲ್ಲಿ ನಡೆಯಲಿರುವ ಎರಡು ದಿನಗಳ ಪ್ರತಿಪಕ್ಷಗಳ ಸಭೆಯಲ್ಲಿ 'ಬಿಜೆಪಿ ಚಲೇ ಜಾವೋ'ಗೆ INDIA ಕರೆ ನೀಡಲಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರು ಸೋಮವಾರ ಹೇಳಿದ್ದಾರೆ.

ಪ್ರತಿಪಕ್ಷಗಳ ಮೈತ್ರಿಕೂಟ, ಪ್ರಧಾನಿ ಹುದ್ದೆಗೆ ಅನೇಕ ಸಮರ್ಥ ಅಭ್ಯರ್ಥಿಗಳನ್ನು ಹೊಂದಿದೆ ಮತ್ತು ಪ್ರಸ್ತುತ ಭಾರತೀಯ ಜನತಾ ಪಾರ್ಟಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ)ದಲ್ಲಿರುವ ಕೆಲವು ಪಕ್ಷಗಳು ಇಂಡಿಯಾಗೆ ಸೇರಬಹುದು ಎಂದು ಪಟೋಲೆ ಅವರು ತಿಳಿಸಿದ್ದಾರೆ.

ಈಗ ಎರಡು ಡಜನ್‌ಗಿಂತಲೂ ಹೆಚ್ಚು ಪಕ್ಷಗಳನ್ನು ಹೊಂದಿರುವ ಬಿಜೆಪಿ ವಿರೋಧಿ ಬಣ ಇಂಡಿಯಾದ ಪ್ರಮುಖ ನಾಯಕರು ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈ ಉಪನಗರದಲ್ಲಿರುವ ಐಷಾರಾಮಿ ಹೋಟೆಲ್‌ನಲ್ಲಿ ಸಭೆ ನಡೆಸುತ್ತಿದ್ದು, ಇದು ಪ್ರತಿಪಕ್ಷಗಳ ಮೂರನೇ ಸಭೆಯಾಗಿದೆ.

ಇಂದು ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಟೋಲೆ, ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅರ್ಧ ಡಜನ್ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸಭೆಯಲ್ಲಿ ಇಂಡಿಯಾ ಮೈತ್ರಿಕೂಟದ ಲಾಂಛನವನ್ನು ಅನಾವರಣಗೊಳಿಸಲಾಗುವುದು ಮತ್ತು 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ತಮ್ಮ ಕಾರ್ಯಸೂಚಿಯನ್ನು ಪ್ರತಿಪಕ್ಷ ನಾಯಕರು ಚರ್ಚಿಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ತಿಳಿಸಿದ್ದಾರೆ.

ಮಹಾತ್ಮ ಗಾಂಧಿಯವರು 1942 ರಲ್ಲಿ ಮುಂಬೈನಲ್ಲಿಯೇ ಬ್ರಿಟಿಷರಿಗೆ 'ಚಲೇ ಜಾವೋ'(ಭಾರತ ಬಿಟ್ಟು ತೊಲಗಿ) ಘೋಷಣೆ ನೀಡಿದ್ದರು. ಅದೇ ರೀತಿ ಮುಂಬೈನಲ್ಲಿ ನಡೆಯಲಿರುವ ಇಂಡಿಯಾ ಸಮಾವೇಶದಲ್ಲಿ ಮೋದಿ ಸರ್ಕಾರ ‘ಚಲೇ ಜಾವೋ’... ‘ಬಿಜೆಪಿ ‘ಚಲೇ ಜಾವೋ’ ಘೋಷಣೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT