ಹೊತ್ತಿ ಉರಿದ ರೈಲು 
ದೇಶ

ಮಧುರೈ ರೈಲಿಗೆ ಬೆಂಕಿ: ಐವರು ಕೇಟರಿಂಗ್ ಕೆಲಸಗಾರರ ಬಂಧನ

9 ಜನರ ಸಜೀವ ದಹನಕ್ಕೆ ಕಾರಣವಾದ ಮಧುರೈ ರೈಲು ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ರೈಲಿನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಬಳಸಿದ ಆರೋಪದ ಮೇಲೆ ಪೊಲೀಸರು ಸೋಮವಾರ ಐವರು ಕೇಟರಿಂಗ್ ಕೆಲಸಗಾರರನ್ನು ಬಂಧಿಸಿದ್ದಾರೆ.

ಮಧುರೈ: 9 ಜನರ ಸಜೀವ ದಹನಕ್ಕೆ ಕಾರಣವಾದ ಮಧುರೈ ರೈಲು ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ರೈಲಿನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಬಳಸಿದ ಆರೋಪದ ಮೇಲೆ ಪೊಲೀಸರು ಸೋಮವಾರ ಐವರು ಕೇಟರಿಂಗ್ ಕೆಲಸಗಾರರನ್ನು ಬಂಧಿಸಿದ್ದಾರೆ.

ಬಂಧಿತ ಕೇಟರಿಂಗ್ ಕೆಲಸಗಾರರು ಉತ್ತರ ಪ್ರದೇಶದ ಯಾತ್ರಾರ್ಥಿಗಳ ಗುಂಪಿನೊಂದಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ದುರಂತದ ನಂತರ ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದ ಸರ್ಕಾರಿ ರೈಲ್ವೆ ಪೊಲೀಸರು ಒಂದು ದಿನ ತೀವ್ರ ವಿಚಾರಣೆ ನಡೆಸಿದ ನಂತರ ಇಂದು ಅವರನ್ನು ಬಂಧಿಸಲಾಗಿದೆ.

ಬಂಧಿತರನ್ನು ಮಧುರೈನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ಸೆಪ್ಟೆಂಬರ್ 11 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಲಖನೌ–ರಾಮೇಶ್ವರಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಟೂರ್ ಆಪರೇಟರ್ ಕಾಯ್ದಿರಿಸಿದ್ದ ಖಾಸಗಿ ಕೋಚ್‌ನಲ್ಲಿ ಹಲವು ಜನ ತೀರ್ಥಯಾತ್ರೆಗೆ ಹೊರಟಿದ್ದರು. ಕೋಚ್‌ನಲ್ಲಿ ಯಾತ್ರಾರ್ಥಿಗಳು, ಪ್ರವಾಸ ಸಂಘಟಕರು ಮತ್ತು ಐವರು ಅಡುಗೆ ಕೆಲಸಗಾರರು ಸೇರಿದಂತೆ ಒಟ್ಟು 64 ಪ್ರಯಾಣಿಕರಿದ್ದರು.

ಕಳೆದ ಶನಿವಾರ ಬೆಂಕಿ ಅವಘಡ ಸಂಭವಿಸಿ 9 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT