ಹೊತ್ತಿ ಉರಿದ ರೈಲು 
ದೇಶ

ಮಧುರೈ ರೈಲಿಗೆ ಬೆಂಕಿ: ಐವರು ಕೇಟರಿಂಗ್ ಕೆಲಸಗಾರರ ಬಂಧನ

9 ಜನರ ಸಜೀವ ದಹನಕ್ಕೆ ಕಾರಣವಾದ ಮಧುರೈ ರೈಲು ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ರೈಲಿನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಬಳಸಿದ ಆರೋಪದ ಮೇಲೆ ಪೊಲೀಸರು ಸೋಮವಾರ ಐವರು ಕೇಟರಿಂಗ್ ಕೆಲಸಗಾರರನ್ನು ಬಂಧಿಸಿದ್ದಾರೆ.

ಮಧುರೈ: 9 ಜನರ ಸಜೀವ ದಹನಕ್ಕೆ ಕಾರಣವಾದ ಮಧುರೈ ರೈಲು ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ರೈಲಿನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಬಳಸಿದ ಆರೋಪದ ಮೇಲೆ ಪೊಲೀಸರು ಸೋಮವಾರ ಐವರು ಕೇಟರಿಂಗ್ ಕೆಲಸಗಾರರನ್ನು ಬಂಧಿಸಿದ್ದಾರೆ.

ಬಂಧಿತ ಕೇಟರಿಂಗ್ ಕೆಲಸಗಾರರು ಉತ್ತರ ಪ್ರದೇಶದ ಯಾತ್ರಾರ್ಥಿಗಳ ಗುಂಪಿನೊಂದಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ದುರಂತದ ನಂತರ ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದ ಸರ್ಕಾರಿ ರೈಲ್ವೆ ಪೊಲೀಸರು ಒಂದು ದಿನ ತೀವ್ರ ವಿಚಾರಣೆ ನಡೆಸಿದ ನಂತರ ಇಂದು ಅವರನ್ನು ಬಂಧಿಸಲಾಗಿದೆ.

ಬಂಧಿತರನ್ನು ಮಧುರೈನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ಸೆಪ್ಟೆಂಬರ್ 11 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಲಖನೌ–ರಾಮೇಶ್ವರಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಟೂರ್ ಆಪರೇಟರ್ ಕಾಯ್ದಿರಿಸಿದ್ದ ಖಾಸಗಿ ಕೋಚ್‌ನಲ್ಲಿ ಹಲವು ಜನ ತೀರ್ಥಯಾತ್ರೆಗೆ ಹೊರಟಿದ್ದರು. ಕೋಚ್‌ನಲ್ಲಿ ಯಾತ್ರಾರ್ಥಿಗಳು, ಪ್ರವಾಸ ಸಂಘಟಕರು ಮತ್ತು ಐವರು ಅಡುಗೆ ಕೆಲಸಗಾರರು ಸೇರಿದಂತೆ ಒಟ್ಟು 64 ಪ್ರಯಾಣಿಕರಿದ್ದರು.

ಕಳೆದ ಶನಿವಾರ ಬೆಂಕಿ ಅವಘಡ ಸಂಭವಿಸಿ 9 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT